ಚಾಮರಾಜನಗರ: ಜಿಲ್ಲೆಯ ಉಮ್ಮತ್ತೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಂಕ್ರಾಂತಿ ಹಬ್ಬದ ಪ್ರಯುಕ್ತ ಇಂದು ಸುಗ್ಗಿ ಹುಗ್ಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ, ಮಾಜಿ ಸಚಿವ N.ಮಹೇಶ್ ಭರ್ಜರಿ ಸ್ಟೆಪ್ ಹಾಕಿ ನೆರದವರಲ್ಲಿ ಅಚ್ಚರಿ ಮೂಡಿಸಿದರು.
ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಕೊಳ್ಳೇಗಾಲ ಶಾಸಕ ಮಹೇಶ್ ಸುಗ್ಗಿ ಹುಗ್ಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಯೋಜಿಸಲಾಗಿದ್ದ ಚಟುವಟಿಕೆಗಳಲ್ಲಿ ಭಾಗಿಯಾದರು. ಬಳಿಕ ತಮಟೆ ಬಾರಿಸುವ ಮೂಲಕ ಖುಷಿಪಟ್ಟ ಶಾಸಕ ನಂತರ ಸಖತ್ ಸ್ಟೆಪ್ ಹಾಕಿ ಎಲ್ಲರ ಗಮನ ಸೆಳೆದರು.
ಶಬರಿಗಿರಿಯಲ್ಲಿ ಮಕರ ಜ್ಯೋತಿ ದರ್ಶನ: ಪುಳಕಗೊಂಡ ಭಕ್ತಸಾಗರ