ಮುನಿಸು ಹತ್ತಿಕ್ಕಿ ನಿಯೋಜಿತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರನ್ನು ಮನೆಯಲ್ಲಿ ಅಭಿನಂದಿಸಿದ ಸಿಟಿ ರವಿ

ಅರುಣ್​ ಕುಮಾರ್​ ಬೆಳ್ಳಿ

Updated on: Nov 14, 2023 | 10:28 AM

ಮುನಿಸಿಕೊಂಡಿರುವ ಪ್ರಬಲ ಲಿಂಗಾಯತ ಸಮುದಾಯದ ಮತದಾರರನ್ನು ಲೋಕ ಸಭೆ ಚುನಾವಣೆಗೆ ಮೊದಲು ಪುನಃ ಒಲಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ವಿಜಯೇಂದ್ರರಿಗೆ ಬಡ್ತಿ ನೀಡಿರುವುದು ನಿಜವಾದರೂ, ರವಿ, ರಮೇಶ್ ಜಿಗಜಿಣಿಗೆ, ಸೋಮಣ್ಣ, ಡಿವಿ ಸದಾನಂದ ಗೌಡ, ಬಸನಗೌಡ ಯತ್ನಾಳ್ ಮೊದಲಾದವರು ಹೈಕಮಾಂಡ್ ನಡೆಯಿಂದ ತೀವ್ರ ಅಸಮಾಧಾನಗೊಡಿರುವುದೂ ಸುಳ್ಳಲ್ಲ.

ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ಪಕ್ಷದ ವರಿಷ್ಠರು ಬಿ ಎಸ್ ಯಡಿಯೂರಪ್ಪ (BS Yediyurappa) ಅವರ ಪುತ್ರ ಮತ್ತು ಶಾಸಕ ಬಿವೈ ವಿಜಯೇಂದ್ರ (BY Vijayendra) ಅವರನ್ನು ನೇಮಕ ಮಾಡಿದ್ದು ನಾಳೆ ಅವರು ಅಧಿಕೃತವಾಗಿ ನಿರ್ಗಮಿಸಲಿರುವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರಿಂದ ಅಧಿಕಾರವಹಿಸಿಕೊಳ್ಳಲಿದ್ದಾರೆ. ಅವರ ಅಯ್ಕೆಯ ಬಗ್ಗೆ ಅಸಮಾಧಾನಗೊಂಡಿರುವ ಹಲವು ಬಿಜೆಪಿ ನಾಯಕರಲ್ಲಿ ಒಬ್ಬರಾಗಿರುವ ಮಾಜಿ ಶಾಸಕ ಸಿಟಿ ರವಿ ಇಂದು ಬೆಳಗ್ಗೆ ನಗರದ ಶಿವಾನಂದ ಸರ್ಕಲ್ ನಲ್ಲಿರುವ ವಿಜಯೇಂದ್ರರ ಖಾಸಗಿ ನಿವಾಸಕ್ಕೆ ತೆರಳಿ ನಿಯೋಜಿತ ರಾಜ್ಯಾಧ್ಯಕ್ಷರನ್ನು ಅಭಿನಂದಿಸಿ ಶುಭಕೋರಿದರು. ಶನಿವಾರ ಮತ್ತು ನಿನ್ನೆ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ರವಿ ತಮ್ಮ ಅತೃಪ್ತಿ ಮತ್ತು ಅಸಮಾಧಾನವನ್ನು ಪರೋಕ್ಷವಾಗಿ ಹೊರಹಾಕಿದ್ದರು. ಮುನಿಸಿಕೊಂಡಿರುವ ಪ್ರಬಲ ಲಿಂಗಾಯತ ಸಮುದಾಯದ ಮತದಾರರನ್ನು ಲೋಕ ಸಭೆ ಚುನಾವಣೆಗೆ ಮೊದಲು ಪುನಃ ಒಲಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ವಿಜಯೇಂದ್ರರಿಗೆ ಬಡ್ತಿ ನೀಡಿರುವುದು ನಿಜವಾದರೂ, ರವಿ, ರಮೇಶ್ ಜಿಗಜಿಣಿಗೆ, ಸೋಮಣ್ಣ, ಡಿವಿ ಸದಾನಂದ ಗೌಡ, ಬಸನಗೌಡ ಯತ್ನಾಳ್ ಮೊದಲಾದವರು ಹೈಕಮಾಂಡ್ ನಡೆಯಿಂದ ತೀವ್ರ ಅಸಮಾಧಾನಗೊಡಿರುವುದೂ ಸುಳ್ಳಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.