AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಆಕ್ಸಿಜನ್ ದುರಂತ; ಆಡಿಯೋದಲ್ಲಿರುವುದು ಸತ್ಯವಾದರೆ ಅಧಿಕಾರಿಯನ್ನು ಬಂಧಿಸಿ ಎಂದ ಮಾಜಿ ಶಾಸಕ ವಾಸು

ಅಧಿಕಾರಿಯ ಅಹಂನಿಂದ ಹತ್ತಾರು ಪ್ರಾಣಗಳು ಹೋಗಿವೆ. ಇತಿಹಾಸದಲ್ಲೇ ಇದೊಂದು ದುರದೃಷ್ಟಕರ ಸಂಗತಿ. ಆಡಿಯೋ ಸಂಬಂಧ ಪರಿಶೀಲಿಸಿ ಕೂಡಲೇ ಕ್ರಮಕೈಗೊಳ್ಳಬೇಕು. ಸರ್ಕಾರ ಆಕ್ಸಿಜನ್ ಪ್ರಕರಣದಲ್ಲಿ ಸತ್ತವರಿಗೆ ಪರಿಹಾರ ನೀಡಬೇಕು. ಆರೋಗ್ಯ ಸಚಿವರು ಈ ಬಗ್ಗೆ ಶೀಘ್ರದಲ್ಲೇ ಕಠಿಣ ಕ್ರಮಕೈಗೊಳ್ಳಿ.

ಚಾಮರಾಜನಗರ ಆಕ್ಸಿಜನ್ ದುರಂತ; ಆಡಿಯೋದಲ್ಲಿರುವುದು ಸತ್ಯವಾದರೆ ಅಧಿಕಾರಿಯನ್ನು ಬಂಧಿಸಿ ಎಂದ ಮಾಜಿ ಶಾಸಕ ವಾಸು
ಮಾಜಿ ಶಾಸಕ ವಾಸು
TV9 Web
| Edited By: |

Updated on: Jun 08, 2021 | 1:32 PM

Share

ಮೈಸೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ಪ್ರಕರಣದ ಕುರಿತು ಬಿಡುಗಡೆಯಾದ ಆಡಿಯೋ ಬಗ್ಗೆ ಮಾಜಿ ಶಾಸಕ ವಾಸು ಪ್ರತಿಕ್ರಿಯಿಸಿದ್ದಾರೆ. ಆಡಿಯೋಗಳು ವೈರಲ್ ಆಗುತ್ತಿವೆ. ಆಡಿಯೋದಲ್ಲಿರುವುದು ಸತ್ಯವಾದರೆ ಅಧಿಕಾರಿಯನ್ನು ಬಂಧಿಸಿ. ಆ ಐಎಎಸ್ ಅಧಿಕಾರಿ ವಿರುದ್ಧ ಎಫ್ಐಆರ್ ದಾಖಲಿಸಿ ಎಂದು ಮಾಜಿ ಶಾಸಕ ವಾಸು ಒತ್ತಾಯಿಸಿದ್ದಾರೆ.

ಅಧಿಕಾರಿಯ ಅಹಂನಿಂದ ಹತ್ತಾರು ಪ್ರಾಣಗಳು ಹೋಗಿವೆ. ಇತಿಹಾಸದಲ್ಲೇ ಇದೊಂದು ದುರದೃಷ್ಟಕರ ಸಂಗತಿ. ಆಡಿಯೋ ಸಂಬಂಧ ಪರಿಶೀಲಿಸಿ ಕೂಡಲೇ ಕ್ರಮಕೈಗೊಳ್ಳಬೇಕು. ಸರ್ಕಾರ ಆಕ್ಸಿಜನ್ ಪ್ರಕರಣದಲ್ಲಿ ಸತ್ತವರಿಗೆ ಪರಿಹಾರ ನೀಡಬೇಕು. ಆರೋಗ್ಯ ಸಚಿವರು ಈ ಬಗ್ಗೆ ಶೀಘ್ರದಲ್ಲೇ ಕಠಿಣ ಕ್ರಮಕೈಗೊಳ್ಳಿ. ರಾಜ್ಯ ಸರ್ಕಾರಕ್ಕೆ ಮಾಜಿ ಶಾಸಕ ವಾಸು ಒತ್ತಾಯಿಸಿದ್ದಾರೆ. ಜಿಲ್ಲಾಡಳಿತ 24 ಜನ ಸಾವಿಗೀಡಾಗಿದ್ದಾರೆ ಎಂದು ಹೇಳಿತ್ತು. ಆದರೆ ನ್ಯಾಯಾಲಯ ಸಾವೀಗೀಡಾಗಿರುವ ನೈಜ ಸಂಗತಿಯನ್ನ ಬೆಳಕಿಗೆ ತಂದಿದೆ ಎಂದು ಅಭಿಪ್ರಾಯಪಟ್ಟರು.

ಆಡಿಯೋದಲ್ಲಿ ಏನಿದೆ ಮೇ 2 ರಂದು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಸುಮಾರು 37 ಜನ ಸಾವನ್ನಪ್ಪಿದವರ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ಡಿಸಿ ಆಗಿದ್ದ ರೋಹಿಣಿ ಸಿಂಧೂರಿ ಮತ್ತು ಗ್ಯಾಸ್ ಏಜೆನ್ಸಿ ಮಾಲೀಕನ ನಡುವೆ ನಡೆದ ಸಂಭಾಷಣೆಯ ಆಡಿಯೋವನ್ನು ಬಿಜೆಪಿ ಮುಖಂಡ ಅಮ್ಮನಪುರ ಮಲ್ಲೇಶ್ ಆಡಿಯೋವನ್ನು ರಿಲೀಸ್ ಮಾಡಿದ್ದರು. ರಿಲೀಸ್ ಮಾಡಿದ ಆಡಿಯೋದಲ್ಲಿ ಚಾಮರಾಜನಗರಕ್ಕೆ ಏಕೆ ಅಷ್ಟು ಆಕ್ಸಿಜನ್ ಕೊಡುತ್ತೀರಾ ಸರಿಯಾದ ಮಾಹಿತಿ ಪಡೆದು ಆಕ್ಸಿಜನ್ ಪೂರೈಕೆ ಮಾಡಿ ಎಂದು ರೋಹಿಣಿ ಸಿಂಧೂರಿ ಹೇಳಿದ್ದಾರೆ.

ಚಾಮರಾಜನಗರ ಆಕ್ಸಿಜನ್ ಪ್ರಕರಣ; ವರ್ಗಾವಣೆ ಬೆನ್ನಲ್ಲೆ ರಿಲೀಸ್ ಆಯ್ತು ರೋಹಿಣಿ ಸಿಂಧೂರಿ ಅವರ ಶಾಕಿಂಗ್ ಆಡಿಯೋ

Mysuru: ರೋಹಿಣಿ ಸಿಂಧೂರಿ ಮತ್ತು ಶಿಲ್ಪಾ ನಾಗ್ ಇಬ್ಬರೂ ಮೈಸೂರಿನಿಂದ ವರ್ಗಾವಣೆ, ಹೊಸ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರ ನೇಮಕ

(Former MLA Vasu demanded that the officer be arrested if the audio is true in mysuru)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?