AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳ ಒತ್ತಾಯದ ಮೇರೆಗೆ.. ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಜಬರ್​ದಸ್ತ್​ ಡ್ಯಾನ್ಸ್​!

Vijayanand Kashappanavar: ಸತತ ಪಾದಯಾತ್ರೆಯಿಂದ ದಣಿವಾದ ಬೆನ್ನಲ್ಲೇ ಕೊಂಚ ರಿಲಾಕ್ಸ್​ ಆಗಲು ಸಮುದಾಯದವರು ಇಂದು ಸಾಯಂಕಾಲ ಕಲ್ಯಾಣ ಮಂಟಪದಲ್ಲಿ ಡ್ಯಾನ್ಸ್​ ಮಾಡಿದರು. ಅದರಲ್ಲೂ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್​ ಅವರ ಸ್ಟೆಪ್ಸ್ ಅಂತೂ ಸೆಂಟರ್​ ಆಫ್​ ಅಟ್ರಾಕ್ಷನ್​!

ಅಭಿಮಾನಿಗಳ ಒತ್ತಾಯದ ಮೇರೆಗೆ.. ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಜಬರ್​ದಸ್ತ್​ ಡ್ಯಾನ್ಸ್​!
ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಜಬರ್​ದಸ್ತ್​ ಡ್ಯಾನ್ಸ್​!
KUSHAL V
|

Updated on: Feb 14, 2021 | 10:37 PM

Share

ನೆಲಮಂಗಲ: ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಆಗ್ರಹಿಸಿ ನಡೆಯುತ್ತಿರುವ ಹೋರಾಟ ದಿನದಿಂದ ದಿನಕ್ಕೆ ಕಾವು ಪಡೆಯುತ್ತಲೇ ಇದೆ. ಈ ನಡುವೆ, ಸಮುದಾಯಕ್ಕೆ ಸೇರಿದ ರಾಜಕೀಯ ಮುಖಂಡರು ಹಾಗೂ ಇತರೆ ನಾಯಕರ ಮಧ್ಯೆ ಉದ್ಭವಿಸಿರುವ ವಾಕ್ಸಮರ ಎಲ್ಲರ ಗಮನ ಸೆಳೆಯುತ್ತಿದೆ. ಅದರಲ್ಲೂ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್​ ಮತ್ತು ಬಿಜೆಪಿ ಮುಖಂಡ ಬಿ.ವೈ.ವಿಜಯೇಂದ್ರ ಮಧ್ಯೆ ನಿನ್ನೆ ನಡೆದ ಪರಸ್ಪರ ವಾಗ್ದಾಳಿ ಅಂತೂ ಸಿಕ್ಕಾಪಟ್ಟೆ ಅಟೆನ್ಷನ್​ ಪಡೆದಿದೆ.

ಈ ನಡುವೆ, ಸಮುದಾಯದ ಸ್ವಾಮೀಜಿಗಳು ಮತ್ತು ಮುಖಂಡರು ಬೆಂಗಳೂರಿನತ್ತ ಪಾದಯಾತ್ರೆ ಬೆಳೆಸಿದ್ದು ಸದ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​ಪೇಟೆ ತಲುಪಿದ್ದಾರೆ. ಪಟ್ಟಣದಲ್ಲಿರುವ ತಿರುಮಲ ಕಲ್ಯಾಣ ಮಂಟಪದಲ್ಲಿ ಪಾದಯಾತ್ರಿಗಳು ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.

ಸತತ ಪಾದಯಾತ್ರೆಯಿಂದ ದಣಿವಾದ ಬೆನ್ನಲ್ಲೇ ಕೊಂಚ ರಿಲಾಕ್ಸ್​ ಆಗಲು ಸಮುದಾಯದವರು ಇಂದು ಸಾಯಂಕಾಲ ಕಲ್ಯಾಣ ಮಂಟಪದಲ್ಲಿ ಡ್ಯಾನ್ಸ್​ ಮಾಡಿದರು. ಅದರಲ್ಲೂ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್​ ಅವರ ಸ್ಟೆಪ್ಸ್ ಅಂತೂ ಸೆಂಟರ್​ ಆಫ್​ ಅಟ್ರಾಕ್ಷನ್​!

ಹೌದು, ಅಭಿಮಾನಿಗಳ ಒತ್ತಾಯದ ಮೇರೆಗೆ ಕಾಶಪ್ಪನವರ್ ಡ್ಯಾನ್ಸ್​ ಮಾಡಿದರು. ತಮಟೆ ಸದ್ದಿಗೆ ಜಬರ್​ದಸ್ತ್​ ಸ್ಟೆಪ್ಸ್​ ಹಾಕಿದರು. ಪಾದಯಾತ್ರೆಯ ಸಾರಥ್ಯ ವಹಿಸಿರುವ ಜಯಮೃತ್ಯುಂಜಯ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಮಾಜಿ ಶಾಸಕ ಮತ್ತು ಅವರ ಅಭಿಮಾನಿಗಳ ಕುಣಿತ ಎಲ್ಲರ ಗಮನ ಸೆಳೆಯಿತು. ಈ ಮೂಲಕ, ಸತತ ಕಾಲ್ನಡಿಗೆಯಿಂದ ಆಯಾಸವಾಗಿದ್ದ ವಿಜಯಾನಂದ ಕಾಶಪ್ಪನವರ್ ಮತ್ತು ಅವರು ಬೆಂಬಲಿಗರು ದಣಿವು ನೀಗಿಸಿಕೊಂಡರು.

BNG VIJAYANAND KASHAPPANAVAR

ಬೆಂಬಲಿಗರ ಜೊತೆ ಕುಣಿತ ಹಾಕಿದ ಶಾಶಕ ವಿಜಯಾನಂದ ಕಾಶಪ್ಪನವರ್​

BNG VIJAYANAND KASHAPPANAVAR

ತಮಟೆ ಸದ್ದಿಗೆ ಮಾಜಿ ಶಾಸಕರ ಜಬರ್​ದಸ್ತ್​ ಸ್ಟೆಪ್ಸ್

ಇದನ್ನೂ ಓದಿ: Siddaramaiah ‘ಜಾತಿ ವ್ಯವಸ್ಥೆ ಬಾವಿಯಲ್ಲಿನ ಕಸವಿದ್ದಂತೆ; ನೀರು ತುಂಬುವಾಗ ಮಾತ್ರ ಸರಿಯುತ್ತೆ, ಮತ್ತೆ ಮುಚ್ಚಿಕೊಳ್ಳುತ್ತೆ’

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ