AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಮಲತಾದು ಕಠೋರ ಹೃದಯ; ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ: ಎಲ್. ಆರ್. ಶಿವರಾಮೇಗೌಡ ಭವಿಷ್ಯ

LR Shivarame Gowda: ಅಂಬರೀಷ್ ಮಂಡ್ಯ ಜಿಲ್ಲೆಗೆ ಯಾವುದೇ ಕೆಲಸವನ್ನು ಮಾಡಿಲ್ಲ. ಆದರೂ ಅಂಬರೀಷ್​ ಬಗ್ಗೆ ಮಂಡ್ಯದ ಜನರಿಗೆ ಅಭಿಮಾನವಿತ್ತು. ಮಂಡ್ಯದಲ್ಲಿ ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ ಎಂದು ಎಲ್​.ಆರ್​. ಶಿವರಾಮೇಗೌಡ ಭವಿಷ್ಯ ನುಡಿದರು.

ಸುಮಲತಾದು ಕಠೋರ ಹೃದಯ; ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ: ಎಲ್. ಆರ್.  ಶಿವರಾಮೇಗೌಡ ಭವಿಷ್ಯ
ಎಲ್. ಆರ್. ಶಿವರಾಮೇಗೌಡ
TV9 Web
| Edited By: |

Updated on:Jul 09, 2021 | 9:14 PM

Share

ಮಂಡ್ಯ: ಕೆಆರ್​ಎಸ್ ಅಣೆಕಟ್ಟೆಯಲ್ಲಿ ಬಿರುಕು ಬಿಟ್ಟಿದೆ ಎಂಬ ವಿವಾದ ಹಾಗೂ ತದನಂತರದಲ್ಲಿ ಕಾವೇರಿ ಕಣಿವೆ ಭಾಗದಲ್ಲಿ ​​ಅಕ್ರಮ ಗಣಿಗಾರಿಕೆ ನಡೆದಿದೆ ಎಂಬ ಆರೋಪಗಳ ಸಮ್ಮುಖದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್​ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ನಡುವೆ ಆರೋಪ-ಪ್ರತ್ಯಾರೋಪಗಳು ತಾರಕ್ಕಕ್ಕೆ ಏರಿವೆ. ಈ ಮಧ್ಯೆ, ಆ ಭಾಗದ ಮತ್ತೊಬ್ಬ ಪ್ರಭಾವಿ ರಾಜಕಾರಣಿ, ಮಾಜಿ ಸಂಸದ ಎಲ್​.ಆರ್​. ಶಿವರಾಮೇಗೌಡ ಅವರು ಪ್ರಕರಣದಲ್ಲಿ ಮಧ್ಯೆ ಪ್ರವೇಶಿಸಿದ್ದಾರೆ.

ಅಂಬರೀಷ್ ಸಾವಿನ ಲಾಭ ಪಡೆದುಕೊಂಡವರು ಸುಮಲತಾ. ಅಂಬರೀಷ್ ಬದುಕಿದ್ದಾಗ ಮನೆಗೆ ಹೋದಾಗ ನೀರು ಕೊಡಲಿಲ್ಲ. ಕ್ಷೇತ್ರದ ಜನರಿಗೆ ಒಂದು ಲೋಟ ನೀರನ್ನ ಕೊಡಲಿಲ್ಲ. ಅಂಬಿದು ತಾಯಿ ಹೃದಯ; ಸಮಲತಾದು ಕಠೋರ ಹೃದಯ ಎಂದು ಟಿವಿ9 ಜೊತೆ ಮಾತನಾಡುತ್ತಾ ಮಾಜಿ ಸಂಸದ ಎಲ್​.ಆರ್. ಶಿವರಾಮೇಗೌಡ ವ್ಯಾಖ್ಯಾನಿಸಿದ್ದಾರೆ.

ಅಂಬರೀಷ್ ಮಂಡ್ಯ ಜಿಲ್ಲೆಗೆ ಯಾವುದೇ ಕೆಲಸವನ್ನು ಮಾಡಿಲ್ಲ. ಆದರೂ ಅಂಬರೀಷ್​ ಬಗ್ಗೆ ಮಂಡ್ಯದ ಜನರಿಗೆ ಅಭಿಮಾನವಿತ್ತು. ಆಕಸ್ಮಿಕವಾಗಿ ಸುಮಲತಾ ಮಂಡ್ಯ ಕ್ಷೇತ್ರದ ಸಂಸದೆ ಆಗಿದ್ದಾರೆ. ಮಂಡ್ಯದಲ್ಲಿ ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ ಎಂದು ಎಲ್​.ಆರ್​. ಶಿವರಾಮೇಗೌಡ ಭವಿಷ್ಯ ನುಡಿದರು.

ಅಕ್ರಮ ಗಣಿಗಾರಿಕೆ ಮಾಡುತ್ತಿರುವವರು ಅಂಬರೀಷ್ ಶಿಷ್ಯಂದಿರು. ಇವತ್ತು ಅದು ಅಕ್ರಮವಾಗಿದೆ ಅಂತಾದ್ರೆ ಅಂಬರೀಷ್ ಕಾಲದಲ್ಲೂ ಅದು ಅಕ್ರಮವೇ ಆಗಿತ್ತು ಎಂದು ಶಿವರಾಮೇಗೌಡ ಹೇಳಿದರು.

ಇದನ್ನೂ ಓದಿ:

ನಾಗಮಂಗಲ ಟಿಕೆಟ್ ನಂದೇ, ಮುಂದಿನ ಶಾಸಕ ನಾನೇ.. ಶಾಸಕ ಸುರೇಶ್‌ಗೌಡ ವಿರುದ್ಧ ತೊಡೆತಟ್ಟಿದ ಶಿವರಾಮೇಗೌಡ

ಮಾಜಿ ಸಂಸದ LR ಶಿವರಾಮೇಗೌಡ ಪುತ್ರನಿಗೆ ISD ನೋಟಿಸ್​ (Former MP LR Shivarame Gowda criticises Sumalatha Ambareesh)

Published On - 5:07 pm, Fri, 9 July 21

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ