AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಮಲತಾದು ಕಠೋರ ಹೃದಯ; ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ: ಎಲ್. ಆರ್. ಶಿವರಾಮೇಗೌಡ ಭವಿಷ್ಯ

LR Shivarame Gowda: ಅಂಬರೀಷ್ ಮಂಡ್ಯ ಜಿಲ್ಲೆಗೆ ಯಾವುದೇ ಕೆಲಸವನ್ನು ಮಾಡಿಲ್ಲ. ಆದರೂ ಅಂಬರೀಷ್​ ಬಗ್ಗೆ ಮಂಡ್ಯದ ಜನರಿಗೆ ಅಭಿಮಾನವಿತ್ತು. ಮಂಡ್ಯದಲ್ಲಿ ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ ಎಂದು ಎಲ್​.ಆರ್​. ಶಿವರಾಮೇಗೌಡ ಭವಿಷ್ಯ ನುಡಿದರು.

ಸುಮಲತಾದು ಕಠೋರ ಹೃದಯ; ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ: ಎಲ್. ಆರ್.  ಶಿವರಾಮೇಗೌಡ ಭವಿಷ್ಯ
ಎಲ್. ಆರ್. ಶಿವರಾಮೇಗೌಡ
TV9 Web
| Edited By: |

Updated on:Jul 09, 2021 | 9:14 PM

Share

ಮಂಡ್ಯ: ಕೆಆರ್​ಎಸ್ ಅಣೆಕಟ್ಟೆಯಲ್ಲಿ ಬಿರುಕು ಬಿಟ್ಟಿದೆ ಎಂಬ ವಿವಾದ ಹಾಗೂ ತದನಂತರದಲ್ಲಿ ಕಾವೇರಿ ಕಣಿವೆ ಭಾಗದಲ್ಲಿ ​​ಅಕ್ರಮ ಗಣಿಗಾರಿಕೆ ನಡೆದಿದೆ ಎಂಬ ಆರೋಪಗಳ ಸಮ್ಮುಖದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್​ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ನಡುವೆ ಆರೋಪ-ಪ್ರತ್ಯಾರೋಪಗಳು ತಾರಕ್ಕಕ್ಕೆ ಏರಿವೆ. ಈ ಮಧ್ಯೆ, ಆ ಭಾಗದ ಮತ್ತೊಬ್ಬ ಪ್ರಭಾವಿ ರಾಜಕಾರಣಿ, ಮಾಜಿ ಸಂಸದ ಎಲ್​.ಆರ್​. ಶಿವರಾಮೇಗೌಡ ಅವರು ಪ್ರಕರಣದಲ್ಲಿ ಮಧ್ಯೆ ಪ್ರವೇಶಿಸಿದ್ದಾರೆ.

ಅಂಬರೀಷ್ ಸಾವಿನ ಲಾಭ ಪಡೆದುಕೊಂಡವರು ಸುಮಲತಾ. ಅಂಬರೀಷ್ ಬದುಕಿದ್ದಾಗ ಮನೆಗೆ ಹೋದಾಗ ನೀರು ಕೊಡಲಿಲ್ಲ. ಕ್ಷೇತ್ರದ ಜನರಿಗೆ ಒಂದು ಲೋಟ ನೀರನ್ನ ಕೊಡಲಿಲ್ಲ. ಅಂಬಿದು ತಾಯಿ ಹೃದಯ; ಸಮಲತಾದು ಕಠೋರ ಹೃದಯ ಎಂದು ಟಿವಿ9 ಜೊತೆ ಮಾತನಾಡುತ್ತಾ ಮಾಜಿ ಸಂಸದ ಎಲ್​.ಆರ್. ಶಿವರಾಮೇಗೌಡ ವ್ಯಾಖ್ಯಾನಿಸಿದ್ದಾರೆ.

ಅಂಬರೀಷ್ ಮಂಡ್ಯ ಜಿಲ್ಲೆಗೆ ಯಾವುದೇ ಕೆಲಸವನ್ನು ಮಾಡಿಲ್ಲ. ಆದರೂ ಅಂಬರೀಷ್​ ಬಗ್ಗೆ ಮಂಡ್ಯದ ಜನರಿಗೆ ಅಭಿಮಾನವಿತ್ತು. ಆಕಸ್ಮಿಕವಾಗಿ ಸುಮಲತಾ ಮಂಡ್ಯ ಕ್ಷೇತ್ರದ ಸಂಸದೆ ಆಗಿದ್ದಾರೆ. ಮಂಡ್ಯದಲ್ಲಿ ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ ಎಂದು ಎಲ್​.ಆರ್​. ಶಿವರಾಮೇಗೌಡ ಭವಿಷ್ಯ ನುಡಿದರು.

ಅಕ್ರಮ ಗಣಿಗಾರಿಕೆ ಮಾಡುತ್ತಿರುವವರು ಅಂಬರೀಷ್ ಶಿಷ್ಯಂದಿರು. ಇವತ್ತು ಅದು ಅಕ್ರಮವಾಗಿದೆ ಅಂತಾದ್ರೆ ಅಂಬರೀಷ್ ಕಾಲದಲ್ಲೂ ಅದು ಅಕ್ರಮವೇ ಆಗಿತ್ತು ಎಂದು ಶಿವರಾಮೇಗೌಡ ಹೇಳಿದರು.

ಇದನ್ನೂ ಓದಿ:

ನಾಗಮಂಗಲ ಟಿಕೆಟ್ ನಂದೇ, ಮುಂದಿನ ಶಾಸಕ ನಾನೇ.. ಶಾಸಕ ಸುರೇಶ್‌ಗೌಡ ವಿರುದ್ಧ ತೊಡೆತಟ್ಟಿದ ಶಿವರಾಮೇಗೌಡ

ಮಾಜಿ ಸಂಸದ LR ಶಿವರಾಮೇಗೌಡ ಪುತ್ರನಿಗೆ ISD ನೋಟಿಸ್​ (Former MP LR Shivarame Gowda criticises Sumalatha Ambareesh)

Published On - 5:07 pm, Fri, 9 July 21

Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ