ಸುಮಲತಾದು ಕಠೋರ ಹೃದಯ; ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ: ಎಲ್. ಆರ್. ಶಿವರಾಮೇಗೌಡ ಭವಿಷ್ಯ

LR Shivarame Gowda: ಅಂಬರೀಷ್ ಮಂಡ್ಯ ಜಿಲ್ಲೆಗೆ ಯಾವುದೇ ಕೆಲಸವನ್ನು ಮಾಡಿಲ್ಲ. ಆದರೂ ಅಂಬರೀಷ್​ ಬಗ್ಗೆ ಮಂಡ್ಯದ ಜನರಿಗೆ ಅಭಿಮಾನವಿತ್ತು. ಮಂಡ್ಯದಲ್ಲಿ ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ ಎಂದು ಎಲ್​.ಆರ್​. ಶಿವರಾಮೇಗೌಡ ಭವಿಷ್ಯ ನುಡಿದರು.

ಸುಮಲತಾದು ಕಠೋರ ಹೃದಯ; ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ: ಎಲ್. ಆರ್.  ಶಿವರಾಮೇಗೌಡ ಭವಿಷ್ಯ
ಎಲ್. ಆರ್. ಶಿವರಾಮೇಗೌಡ
Follow us
| Updated By: guruganesh bhat

Updated on:Jul 09, 2021 | 9:14 PM

ಮಂಡ್ಯ: ಕೆಆರ್​ಎಸ್ ಅಣೆಕಟ್ಟೆಯಲ್ಲಿ ಬಿರುಕು ಬಿಟ್ಟಿದೆ ಎಂಬ ವಿವಾದ ಹಾಗೂ ತದನಂತರದಲ್ಲಿ ಕಾವೇರಿ ಕಣಿವೆ ಭಾಗದಲ್ಲಿ ​​ಅಕ್ರಮ ಗಣಿಗಾರಿಕೆ ನಡೆದಿದೆ ಎಂಬ ಆರೋಪಗಳ ಸಮ್ಮುಖದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್​ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ನಡುವೆ ಆರೋಪ-ಪ್ರತ್ಯಾರೋಪಗಳು ತಾರಕ್ಕಕ್ಕೆ ಏರಿವೆ. ಈ ಮಧ್ಯೆ, ಆ ಭಾಗದ ಮತ್ತೊಬ್ಬ ಪ್ರಭಾವಿ ರಾಜಕಾರಣಿ, ಮಾಜಿ ಸಂಸದ ಎಲ್​.ಆರ್​. ಶಿವರಾಮೇಗೌಡ ಅವರು ಪ್ರಕರಣದಲ್ಲಿ ಮಧ್ಯೆ ಪ್ರವೇಶಿಸಿದ್ದಾರೆ.

ಅಂಬರೀಷ್ ಸಾವಿನ ಲಾಭ ಪಡೆದುಕೊಂಡವರು ಸುಮಲತಾ. ಅಂಬರೀಷ್ ಬದುಕಿದ್ದಾಗ ಮನೆಗೆ ಹೋದಾಗ ನೀರು ಕೊಡಲಿಲ್ಲ. ಕ್ಷೇತ್ರದ ಜನರಿಗೆ ಒಂದು ಲೋಟ ನೀರನ್ನ ಕೊಡಲಿಲ್ಲ. ಅಂಬಿದು ತಾಯಿ ಹೃದಯ; ಸಮಲತಾದು ಕಠೋರ ಹೃದಯ ಎಂದು ಟಿವಿ9 ಜೊತೆ ಮಾತನಾಡುತ್ತಾ ಮಾಜಿ ಸಂಸದ ಎಲ್​.ಆರ್. ಶಿವರಾಮೇಗೌಡ ವ್ಯಾಖ್ಯಾನಿಸಿದ್ದಾರೆ.

ಅಂಬರೀಷ್ ಮಂಡ್ಯ ಜಿಲ್ಲೆಗೆ ಯಾವುದೇ ಕೆಲಸವನ್ನು ಮಾಡಿಲ್ಲ. ಆದರೂ ಅಂಬರೀಷ್​ ಬಗ್ಗೆ ಮಂಡ್ಯದ ಜನರಿಗೆ ಅಭಿಮಾನವಿತ್ತು. ಆಕಸ್ಮಿಕವಾಗಿ ಸುಮಲತಾ ಮಂಡ್ಯ ಕ್ಷೇತ್ರದ ಸಂಸದೆ ಆಗಿದ್ದಾರೆ. ಮಂಡ್ಯದಲ್ಲಿ ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ ಎಂದು ಎಲ್​.ಆರ್​. ಶಿವರಾಮೇಗೌಡ ಭವಿಷ್ಯ ನುಡಿದರು.

ಅಕ್ರಮ ಗಣಿಗಾರಿಕೆ ಮಾಡುತ್ತಿರುವವರು ಅಂಬರೀಷ್ ಶಿಷ್ಯಂದಿರು. ಇವತ್ತು ಅದು ಅಕ್ರಮವಾಗಿದೆ ಅಂತಾದ್ರೆ ಅಂಬರೀಷ್ ಕಾಲದಲ್ಲೂ ಅದು ಅಕ್ರಮವೇ ಆಗಿತ್ತು ಎಂದು ಶಿವರಾಮೇಗೌಡ ಹೇಳಿದರು.

ಇದನ್ನೂ ಓದಿ:

ನಾಗಮಂಗಲ ಟಿಕೆಟ್ ನಂದೇ, ಮುಂದಿನ ಶಾಸಕ ನಾನೇ.. ಶಾಸಕ ಸುರೇಶ್‌ಗೌಡ ವಿರುದ್ಧ ತೊಡೆತಟ್ಟಿದ ಶಿವರಾಮೇಗೌಡ

ಮಾಜಿ ಸಂಸದ LR ಶಿವರಾಮೇಗೌಡ ಪುತ್ರನಿಗೆ ISD ನೋಟಿಸ್​ (Former MP LR Shivarame Gowda criticises Sumalatha Ambareesh)

Published On - 5:07 pm, Fri, 9 July 21

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು