AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಮಲತಾದು ಕಠೋರ ಹೃದಯ; ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ: ಎಲ್. ಆರ್. ಶಿವರಾಮೇಗೌಡ ಭವಿಷ್ಯ

LR Shivarame Gowda: ಅಂಬರೀಷ್ ಮಂಡ್ಯ ಜಿಲ್ಲೆಗೆ ಯಾವುದೇ ಕೆಲಸವನ್ನು ಮಾಡಿಲ್ಲ. ಆದರೂ ಅಂಬರೀಷ್​ ಬಗ್ಗೆ ಮಂಡ್ಯದ ಜನರಿಗೆ ಅಭಿಮಾನವಿತ್ತು. ಮಂಡ್ಯದಲ್ಲಿ ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ ಎಂದು ಎಲ್​.ಆರ್​. ಶಿವರಾಮೇಗೌಡ ಭವಿಷ್ಯ ನುಡಿದರು.

ಸುಮಲತಾದು ಕಠೋರ ಹೃದಯ; ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ: ಎಲ್. ಆರ್.  ಶಿವರಾಮೇಗೌಡ ಭವಿಷ್ಯ
ಎಲ್. ಆರ್. ಶಿವರಾಮೇಗೌಡ
TV9 Web
| Updated By: guruganesh bhat|

Updated on:Jul 09, 2021 | 9:14 PM

Share

ಮಂಡ್ಯ: ಕೆಆರ್​ಎಸ್ ಅಣೆಕಟ್ಟೆಯಲ್ಲಿ ಬಿರುಕು ಬಿಟ್ಟಿದೆ ಎಂಬ ವಿವಾದ ಹಾಗೂ ತದನಂತರದಲ್ಲಿ ಕಾವೇರಿ ಕಣಿವೆ ಭಾಗದಲ್ಲಿ ​​ಅಕ್ರಮ ಗಣಿಗಾರಿಕೆ ನಡೆದಿದೆ ಎಂಬ ಆರೋಪಗಳ ಸಮ್ಮುಖದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್​ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ನಡುವೆ ಆರೋಪ-ಪ್ರತ್ಯಾರೋಪಗಳು ತಾರಕ್ಕಕ್ಕೆ ಏರಿವೆ. ಈ ಮಧ್ಯೆ, ಆ ಭಾಗದ ಮತ್ತೊಬ್ಬ ಪ್ರಭಾವಿ ರಾಜಕಾರಣಿ, ಮಾಜಿ ಸಂಸದ ಎಲ್​.ಆರ್​. ಶಿವರಾಮೇಗೌಡ ಅವರು ಪ್ರಕರಣದಲ್ಲಿ ಮಧ್ಯೆ ಪ್ರವೇಶಿಸಿದ್ದಾರೆ.

ಅಂಬರೀಷ್ ಸಾವಿನ ಲಾಭ ಪಡೆದುಕೊಂಡವರು ಸುಮಲತಾ. ಅಂಬರೀಷ್ ಬದುಕಿದ್ದಾಗ ಮನೆಗೆ ಹೋದಾಗ ನೀರು ಕೊಡಲಿಲ್ಲ. ಕ್ಷೇತ್ರದ ಜನರಿಗೆ ಒಂದು ಲೋಟ ನೀರನ್ನ ಕೊಡಲಿಲ್ಲ. ಅಂಬಿದು ತಾಯಿ ಹೃದಯ; ಸಮಲತಾದು ಕಠೋರ ಹೃದಯ ಎಂದು ಟಿವಿ9 ಜೊತೆ ಮಾತನಾಡುತ್ತಾ ಮಾಜಿ ಸಂಸದ ಎಲ್​.ಆರ್. ಶಿವರಾಮೇಗೌಡ ವ್ಯಾಖ್ಯಾನಿಸಿದ್ದಾರೆ.

ಅಂಬರೀಷ್ ಮಂಡ್ಯ ಜಿಲ್ಲೆಗೆ ಯಾವುದೇ ಕೆಲಸವನ್ನು ಮಾಡಿಲ್ಲ. ಆದರೂ ಅಂಬರೀಷ್​ ಬಗ್ಗೆ ಮಂಡ್ಯದ ಜನರಿಗೆ ಅಭಿಮಾನವಿತ್ತು. ಆಕಸ್ಮಿಕವಾಗಿ ಸುಮಲತಾ ಮಂಡ್ಯ ಕ್ಷೇತ್ರದ ಸಂಸದೆ ಆಗಿದ್ದಾರೆ. ಮಂಡ್ಯದಲ್ಲಿ ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ ಎಂದು ಎಲ್​.ಆರ್​. ಶಿವರಾಮೇಗೌಡ ಭವಿಷ್ಯ ನುಡಿದರು.

ಅಕ್ರಮ ಗಣಿಗಾರಿಕೆ ಮಾಡುತ್ತಿರುವವರು ಅಂಬರೀಷ್ ಶಿಷ್ಯಂದಿರು. ಇವತ್ತು ಅದು ಅಕ್ರಮವಾಗಿದೆ ಅಂತಾದ್ರೆ ಅಂಬರೀಷ್ ಕಾಲದಲ್ಲೂ ಅದು ಅಕ್ರಮವೇ ಆಗಿತ್ತು ಎಂದು ಶಿವರಾಮೇಗೌಡ ಹೇಳಿದರು.

ಇದನ್ನೂ ಓದಿ:

ನಾಗಮಂಗಲ ಟಿಕೆಟ್ ನಂದೇ, ಮುಂದಿನ ಶಾಸಕ ನಾನೇ.. ಶಾಸಕ ಸುರೇಶ್‌ಗೌಡ ವಿರುದ್ಧ ತೊಡೆತಟ್ಟಿದ ಶಿವರಾಮೇಗೌಡ

ಮಾಜಿ ಸಂಸದ LR ಶಿವರಾಮೇಗೌಡ ಪುತ್ರನಿಗೆ ISD ನೋಟಿಸ್​ (Former MP LR Shivarame Gowda criticises Sumalatha Ambareesh)

Published On - 5:07 pm, Fri, 9 July 21

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್