AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಮಲತಾದು ಕಠೋರ ಹೃದಯ; ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ: ಎಲ್. ಆರ್. ಶಿವರಾಮೇಗೌಡ ಭವಿಷ್ಯ

LR Shivarame Gowda: ಅಂಬರೀಷ್ ಮಂಡ್ಯ ಜಿಲ್ಲೆಗೆ ಯಾವುದೇ ಕೆಲಸವನ್ನು ಮಾಡಿಲ್ಲ. ಆದರೂ ಅಂಬರೀಷ್​ ಬಗ್ಗೆ ಮಂಡ್ಯದ ಜನರಿಗೆ ಅಭಿಮಾನವಿತ್ತು. ಮಂಡ್ಯದಲ್ಲಿ ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ ಎಂದು ಎಲ್​.ಆರ್​. ಶಿವರಾಮೇಗೌಡ ಭವಿಷ್ಯ ನುಡಿದರು.

ಸುಮಲತಾದು ಕಠೋರ ಹೃದಯ; ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ: ಎಲ್. ಆರ್.  ಶಿವರಾಮೇಗೌಡ ಭವಿಷ್ಯ
ಎಲ್. ಆರ್. ಶಿವರಾಮೇಗೌಡ
TV9 Web
| Updated By: guruganesh bhat|

Updated on:Jul 09, 2021 | 9:14 PM

Share

ಮಂಡ್ಯ: ಕೆಆರ್​ಎಸ್ ಅಣೆಕಟ್ಟೆಯಲ್ಲಿ ಬಿರುಕು ಬಿಟ್ಟಿದೆ ಎಂಬ ವಿವಾದ ಹಾಗೂ ತದನಂತರದಲ್ಲಿ ಕಾವೇರಿ ಕಣಿವೆ ಭಾಗದಲ್ಲಿ ​​ಅಕ್ರಮ ಗಣಿಗಾರಿಕೆ ನಡೆದಿದೆ ಎಂಬ ಆರೋಪಗಳ ಸಮ್ಮುಖದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್​ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ನಡುವೆ ಆರೋಪ-ಪ್ರತ್ಯಾರೋಪಗಳು ತಾರಕ್ಕಕ್ಕೆ ಏರಿವೆ. ಈ ಮಧ್ಯೆ, ಆ ಭಾಗದ ಮತ್ತೊಬ್ಬ ಪ್ರಭಾವಿ ರಾಜಕಾರಣಿ, ಮಾಜಿ ಸಂಸದ ಎಲ್​.ಆರ್​. ಶಿವರಾಮೇಗೌಡ ಅವರು ಪ್ರಕರಣದಲ್ಲಿ ಮಧ್ಯೆ ಪ್ರವೇಶಿಸಿದ್ದಾರೆ.

ಅಂಬರೀಷ್ ಸಾವಿನ ಲಾಭ ಪಡೆದುಕೊಂಡವರು ಸುಮಲತಾ. ಅಂಬರೀಷ್ ಬದುಕಿದ್ದಾಗ ಮನೆಗೆ ಹೋದಾಗ ನೀರು ಕೊಡಲಿಲ್ಲ. ಕ್ಷೇತ್ರದ ಜನರಿಗೆ ಒಂದು ಲೋಟ ನೀರನ್ನ ಕೊಡಲಿಲ್ಲ. ಅಂಬಿದು ತಾಯಿ ಹೃದಯ; ಸಮಲತಾದು ಕಠೋರ ಹೃದಯ ಎಂದು ಟಿವಿ9 ಜೊತೆ ಮಾತನಾಡುತ್ತಾ ಮಾಜಿ ಸಂಸದ ಎಲ್​.ಆರ್. ಶಿವರಾಮೇಗೌಡ ವ್ಯಾಖ್ಯಾನಿಸಿದ್ದಾರೆ.

ಅಂಬರೀಷ್ ಮಂಡ್ಯ ಜಿಲ್ಲೆಗೆ ಯಾವುದೇ ಕೆಲಸವನ್ನು ಮಾಡಿಲ್ಲ. ಆದರೂ ಅಂಬರೀಷ್​ ಬಗ್ಗೆ ಮಂಡ್ಯದ ಜನರಿಗೆ ಅಭಿಮಾನವಿತ್ತು. ಆಕಸ್ಮಿಕವಾಗಿ ಸುಮಲತಾ ಮಂಡ್ಯ ಕ್ಷೇತ್ರದ ಸಂಸದೆ ಆಗಿದ್ದಾರೆ. ಮಂಡ್ಯದಲ್ಲಿ ನಟಿ ರಮ್ಯಾಗೆ ಆದ ಸ್ಥಿತಿ ಸುಮಲತಾಗೂ ಆಗುತ್ತೆ ಎಂದು ಎಲ್​.ಆರ್​. ಶಿವರಾಮೇಗೌಡ ಭವಿಷ್ಯ ನುಡಿದರು.

ಅಕ್ರಮ ಗಣಿಗಾರಿಕೆ ಮಾಡುತ್ತಿರುವವರು ಅಂಬರೀಷ್ ಶಿಷ್ಯಂದಿರು. ಇವತ್ತು ಅದು ಅಕ್ರಮವಾಗಿದೆ ಅಂತಾದ್ರೆ ಅಂಬರೀಷ್ ಕಾಲದಲ್ಲೂ ಅದು ಅಕ್ರಮವೇ ಆಗಿತ್ತು ಎಂದು ಶಿವರಾಮೇಗೌಡ ಹೇಳಿದರು.

ಇದನ್ನೂ ಓದಿ:

ನಾಗಮಂಗಲ ಟಿಕೆಟ್ ನಂದೇ, ಮುಂದಿನ ಶಾಸಕ ನಾನೇ.. ಶಾಸಕ ಸುರೇಶ್‌ಗೌಡ ವಿರುದ್ಧ ತೊಡೆತಟ್ಟಿದ ಶಿವರಾಮೇಗೌಡ

ಮಾಜಿ ಸಂಸದ LR ಶಿವರಾಮೇಗೌಡ ಪುತ್ರನಿಗೆ ISD ನೋಟಿಸ್​ (Former MP LR Shivarame Gowda criticises Sumalatha Ambareesh)

Published On - 5:07 pm, Fri, 9 July 21

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು