AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ರಾಜಕಾರಣ ಮಂಡ್ಯದಲ್ಲೇ: ಜನವರಿಯಿಂದ ಮತ್ತೆ ಪಕ್ಷ ಸಂಘಟನೆ ಮಾಡುತ್ತೇನೆ, ಮಾಜಿ ಸಂಸದೆ ಸುಮಲತಾ

ಲೋಕಸಭಾ ಚುನಾವಣೆಯ ನಂತರ ವಿಶ್ರಾಂತಿ ಪಡೆದಿರುವ ಮಾಜಿ ಸಂಸದೆ ಸುಮಲತಾ ಅಂಬರೀಶ್, ಜನವರಿಯಿಂದ ಮಂಡ್ಯದಲ್ಲಿ ಬಿಜೆಪಿ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗುವುದಾಗಿ ತಿಳಿಸಿದ್ದಾರೆ. ತಮ್ಮ ರಾಜಕೀಯ ಭವಿಷ್ಯ ಮಂಡ್ಯದಲ್ಲೇ ಇರುವುದಾಗಿ ಸ್ಪಷ್ಟಪಡಿಸಿದ್ದಾರೆ. ನನ್ನ ಹಿಂದೆ ಮಾತನಾಡಿದರೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದಿದ್ದಾರೆ.

ನನ್ನ ರಾಜಕಾರಣ ಮಂಡ್ಯದಲ್ಲೇ: ಜನವರಿಯಿಂದ ಮತ್ತೆ ಪಕ್ಷ ಸಂಘಟನೆ ಮಾಡುತ್ತೇನೆ, ಮಾಜಿ ಸಂಸದೆ ಸುಮಲತಾ
ನನ್ನ ರಾಜಕಾರಣ ಮಂಡ್ಯದಲ್ಲೇ: ಜನವರಿಯಿಂದ ಮತ್ತೆ ಪಕ್ಷ ಸಂಘಟನೆ ಮಾಡುತ್ತೇನೆ, ಮಾಜಿ ಸಂಸದೆ ಸುಮಲತಾ
Follow us
ಪ್ರಶಾಂತ್​ ಬಿ.
| Updated By: ಗಂಗಾಧರ​ ಬ. ಸಾಬೋಜಿ

Updated on:Nov 08, 2024 | 7:07 PM

ಮಂಡ್ಯ, ನವೆಂಬರ್​ 08: ಲೋಕಸಭಾ ಚುನಾವಣೆ ನಂತರ ಕೆಲ ತಿಂಗಳು ಗ್ಯಾಪ್ ಪಡೆದು ವಿಶ್ರಾಂತಿ ಮಾಡಿದ್ದೇನೆ. ಹೊಸ ವರ್ಷಕ್ಕೆ ಜನವರಿಯಿಂದ ಮತ್ತೆ ಪಕ್ಷ ಸಂಘಟನೆ ಮಾಡುತ್ತೇನೆ. ನನ್ನ ರಾಜಕಾರಣ ಮಂಡ್ಯದಲ್ಲೇ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalatha) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐದು ವರ್ಷಗಳಲ್ಲಿ ನನಗೆ ಅಂತಾ ಸಮಯವಿರಲಿಲ್ಲ. ಇನ್ನು ಮೇಲೆ ಮಂಡ್ಯದಲ್ಲಿ ಓಡಾಡುತ್ತೇನೆ ಎಂದಿದ್ದಾರೆ.

ನನಗೆ ಒಂದು ರೆಸ್ಟ್ ಬೇಕಿತ್ತು. ಐದು ವರ್ಷದಲ್ಲಿ ಸಾಕಷ್ಟು ಹಳ್ಳಿಗಳಿಗೆ ಹೋಗಿದ್ದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾತಿಗೆ ಬೆಲೆಕೊಟ್ಟು ಕ್ಷೇತ್ರ ತ್ಯಾಗ ಮಾಡಿದೆ. ಜನವರಿಯಿಂದ  ಸಕ್ರೀಯವಾಗಿ ಮಂಡ್ಯದಲ್ಲಿ ಓಡಾಡುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿಯಲ್ಲಿ ಸುಮಲತಾ ಸೈಡ್ ಲೈನ್ ಆದ್ರಾ?

ಬಿಜೆಪಿಯಲ್ಲಿ ಸುಮಲತಾ ಸೈಡ್ ಲೈನ್ ಆದರಾ ಎಂಬ ವಿಚಾರವಾಗಿ ಮಾತನಾಡಿದ ಅವರು, ನಾನು ಸೈಡ್ ಲೈನ್ ಅಂತಾ ನೋಡುತ್ತಿಲ್ಲ. ಬಿಜೆಪಿ ಅವರು ನನ್ನನ್ನ ಚುನಾವಣಾ ಪ್ರಚಾರಕ್ಕೆ ಕರೆಯದೇ ಇರುವ ಬಗ್ಗೆ ಅಷ್ಟಾಗಿ ನಾನು ಗಮನ ಕೊಟ್ಟಿಲ್ಲ. ನನ್ನ ಅಗತ್ಯ ಎಲ್ಲಿದೆ ಅಂತಾ ಅನಿಸುತ್ತೆ ಅಲ್ಲಿಗೆ ಕರೆಯುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ನನ್ನ ರಾಜಕೀಯ ಬದುಕಿನ 62 ವರ್ಷಗಳಲ್ಲಿ ಇಂಥ ಕೆಟ್ಟ ಸರ್ಕಾರವನ್ನು ಯಾವತ್ತೂ ನೋಡಿರಲಿಲ್ಲ: ದೇವೇಗೌಡ

ಕಳೆದ ಚುನಾವಣೆಯಲ್ಲಿ ಮಂಡ್ಯದಲ್ಲಿ ಯಾರು ಇಂತಹ ದಿನಾಂಕದಂದು ಪ್ರಚಾರಕ್ಕೆ ಬರಬೇಕು ಅಂತಾ ಹೇಳಲಿಲ್ಲ. ನಾನು ಇದನ್ನ ದೊಡ್ಡ ವಿಷಯ ಅಂದುಕೊಂಡಿಲ್ಲ. ಬೇರೆ ಕಡೆ ಪ್ರಚಾರ ಮಾಡಿದ್ದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಇದ್ದಿದ್ದರೆ ನನ್ನನ್ನ ಕರೆಯುತ್ತಿದ್ದರು ಅನಿಸುತ್ತೆ. ಆದರೆ ಮೈತ್ರಿ ಅಭ್ಯರ್ಥಿ ಇರುವುದರಿಂದ ಮಂಡ್ಯ ಲೋಕಸಭಾ ಚುನಾವಣೆ ನೋಡಿ ಕರೆದಿಲ್ಲ. ನಮಗೆ ಏನು ದ್ವೇಷವಿಲ್ಲ. ಅದು ಹಳೆದಾಗಿ ಹೋಗಿದೆ ಎಂದು ಹೇಳಿದ್ದಾರೆ.

ಮಂಡ್ಯದಲ್ಲಿ ಪಕ್ಷ ಬಲಪಡಿಸಬೇಕು ಎಂದು ಈಗಾಗಲೇ ಹೈಕಮಾಂಡ್​ಗೆ ಹೇಳಿದ್ದೇನೆ. ಹೆಚ್ಚು ಸಕ್ರೀಯವಾಗಿ ಇಲ್ಲ. ನನ್ನ ಅಸಮಾಧಾನವನ್ನ ತಿಳಿಸಿದ್ದೇನೆ. ಮೈತ್ರಿ ಇದ್ದಾಗ ಪಕ್ಷ ಸಂಘಟನೆ ಒಂದು ಚಾಲೆಂಜ್​. ಚುನಾವಣೆ ನಂತರ ಈ ಕಡೆ ಗಮನಹರಿಸುತ್ತಾರೆ. ನಾನು ನಿರೀಕ್ಷೆ ಇಟ್ಟುಕೊಂಡು ಕೆಲಸ ಮಾಡಿಲ್ಲ. ಬೆಂಬಲಿಗರು ಆಸೆ ಪಡುವುದರಲ್ಲಿ ತಪ್ಪಿಲ್ಲ. ನನ್ನ ರಾಜಕಾರಣ ಮಂಡ್ಯದಲ್ಲಿ ಇರುತ್ತದೆ ಎಂದಿದ್ದಾರೆ.

ನನ್ನ ಹಿಂದೆ ಮಾತನಾಡಿದ್ರೆ ನಾನು ಪ್ರತಿಕ್ರಿಯೆ ನೀಡಲ್ಲ

ಪಕ್ಷದಿಂದ ಸೂಚನೆ ಬಂದರೆ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ. ನನ್ನ ಹಿಂದೆ ಮಾತನಾಡಿದರೆ ನಾನು ಪ್ರತಿಕ್ರಿಯೆ ನೀಡಲ್ಲ. ಮಂಡ್ಯದಲ್ಲಿ ಕೆಲವು ವಿಚಾರಗಳು ಸರಿಹೋಗಬೇಕು. ರಾಜ್ಯ ನಾಯಕರು ಮಂಡ್ಯದಲ್ಲಿ ಪಕ್ಷ ಸಂಘಟನೆ ಬಗ್ಗೆ ಇನ್ನು ಗಮನ ಕೊಟ್ಟಿಲ್ಲ. ಕೆಳ ಹಂತದಿಂದ ಪಕ್ಷ ಸಂಘಟನೆ ಮಾಡಿದರೆ ಮುಂದೆ ಚುನಾವಣೆ ‌ಎದುರಿಸಬಹುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:01 pm, Fri, 8 November 24

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ