AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಹುಟ್ಟುಹಬ್ಬದಂದು ಕೊವಿಡ್ ಸೋಂಕಿತರಿಗೆ ನೆರವಾಗುವಂತೆ ಮನವಿ ಮಾಡಿದ ಮಾಜಿ ಪ್ರಧಾನಿ ದೇವೇಗೌಡ

Former PM HD Deve Gowda Birthday: ಸದ್ಯ ಕೊವಿಡ್​ನಿಂದಾಗಿ ಜನಸಾಮಾನ್ಯರು ತೊಂದರೆಗೀಡಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಡಗರ- ಸಂಭ್ರಮದ ಹುಟ್ಟುಹಬ್ಬದ ಆಚರಣೆ ಸಲ್ಲದು. ಸಂಭ್ರಮವನ್ನು ವಿವಿಧ ರೂಪಗಳಲ್ಲಿ ಆಚರಿಸುವ ಬದಲಿಗೆ ಅದೇ ಹಣವನ್ನು ಹತ್ತಿರದ ಕೊವಿಡ್ ಸೋಂಕಿತರ ಆರೈಕೆಗೆ ವಿನಿಯೋಗಿಸುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮನವಿ ಮಾಡಿದ್ದಾರೆ.

ತಮ್ಮ ಹುಟ್ಟುಹಬ್ಬದಂದು ಕೊವಿಡ್ ಸೋಂಕಿತರಿಗೆ ನೆರವಾಗುವಂತೆ ಮನವಿ ಮಾಡಿದ ಮಾಜಿ ಪ್ರಧಾನಿ ದೇವೇಗೌಡ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
guruganesh bhat
|

Updated on:May 15, 2021 | 2:48 PM

Share

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸಡಗರದಿಂದ ಆಚರಿಸದೇ ತಮ್ಮ ಹತ್ತಿರದ ಕೊವಿಡ್ ಸೋಂಕಿತರ ಆರೈಕೆ ಮತ್ತು ನೆರವಿಗೆ ಸಹಾಯ ಮಾಡಬೇಕೆಂದು ಅಭಿಮಾನಿಗಳು ಮತ್ತು ಜೆಡಿಎಸ್​ ಕಾರ್ಯಕರ್ತರಲ್ಲಿ ಕೋರಿದ್ದಾರೆ. ಮೇ 18ರಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಹುಟ್ಟುಹಬ್ಬವಿದ್ದು, ಅವರು ಈ ಮನವಿ ಮಾಡಿದ್ದಾರೆ.

ಸದ್ಯ ಕೊವಿಡ್​ನಿಂದಾಗಿ ಜನಸಾಮಾನ್ಯರು ತೊಂದರೆಗೀಡಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಡಗರ- ಸಂಭ್ರಮದ ಹುಟ್ಟುಹಬ್ಬದ ಆಚರಣೆ ಸಲ್ಲದು. ಸಂಭ್ರಮವನ್ನು ವಿವಿಧ ರೂಪಗಳಲ್ಲಿ ಆಚರಿಸುವ ಬದಲಿಗೆ ಅದೇ ಹಣವನ್ನು ಹತ್ತಿರದ ಕೊವಿಡ್ ಸೋಂಕಿತರ ಆರೈಕೆಗೆ ವಿನಿಯೋಗಿಸುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮನವಿ ಮಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಇಬ್ಬರಿಗೂ ಕೊವಿಡ್ ಸೋಂಕು ತಗುಲಿತ್ತು. ಚಿಕಿತ್ಸೆಯ ನಂತರ ಅವರಿಬ್ಬರೂ ಗುಣಮುಖರಾಗಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಪ್ರಧಾನಿ ನರೇಂದ್ರ ಮೋದಿ ಇತ್ತೀಚಿಗಷ್ಟೇ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರೊಂದಿಗೆ ಮಾತನಾಡಿ, ಕೊವಿಡ್-19 ಪಿಡುಗಿನ ನಿರ್ವಹನೆ ವಿಚಾರವಾಗಿ ಚರ್ಚಿಸಿದ್ದರು. ಈ ಕುರಿತು ದೇವೇಗೌಡ ಟ್ವೀಟ್ ಮಾಡಿ, ಪ್ರಧಾನಿ ತಮಗೆ ಕರೆ ಮಾಡಿದ್ದರು ಎಂದು ದೃಢಪಡಿಸಿದ್ದರು. ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಕೊರೊನಾ ಸೋಂಕು ನಿರ್ವಹಣೆ ಬಗ್ಗೆ ಸಲಹೆ ನೀಡಿದ್ದರು.

ತಮ್ಮ 4 ಪುಟಗಳ ಪತ್ರವನ್ನು ಟ್ವೀಟ್ ಮಾಡಿದ್ದ ದೇವೇಗೌಡ, ‘ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಿನ್ನೆ ಪತ್ರ ಬರೆದಿದ್ದೆ. ಕೊರೊನಾ ಪಿಡುಗು ನಿರ್ವಹಣೆಗೆ ಸಂಬಂಧಿಸಿದಂತೆ ಕೆಲ ಸಲಹೆಗಳನ್ನೂ ನೀಡಿದ್ದೇನೆ. ಇದು ರಾಷ್ಟ್ರೀಯ ಬಿಕ್ಕಟ್ಟು ಮತ್ತು ನಾವು ಒಂದು ದೇಶವಾಗಿ ಈ ಸಮಸ್ಯೆಯನ್ನು ಎದುರಿಸಬೇಕಿದೆ. ಎಲ್ಲ ಬಗೆಯ ರಚನಾತ್ಮಕ ಕ್ರಮಗಳನ್ನು ನಾವು ಬೆಂಬಲಿಸಬೇಕು. ಜನರ ಸಂಕಷ್ಟ ಕಡಿಮೆ ಮಾಡಲು ಮತ್ತು ಜೀವ ಉಳಿಸಲು ಎಲ್ಲರೂ ಒಂದಾಗಿ ಶ್ರಮಿಸಬೇಕು’ ಎಂದು ಹೇಳಿದ್ದರು.

ತಮ್ಮೊಡನೆ ಪ್ರಧಾನಿ ಮಾತನಾಡಿದ ವಿಚಾರವನ್ನೂ ದೇವೇಗೌಡರು ಟ್ವೀಟ್ ಮೂಲಕವೇ ತಿಳಿಸಿದ್ದರು. ‘ಪ್ರಧಾನಿ ನರೇಂದ್ರ ಮೋದಿ ಈಗಷ್ಟೇ ನನ್ನೊಂದಿಗೆ ಮಾತನಾಡಿದರು. ನಾನು ಬರೆದ ಪತ್ರವನ್ನು ಸಂಪೂರ್ಣ ಓದಿದ್ದಾಗಿ ತಿಳಿಸಿದರು. ನನ್ನ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ತಿಳಿಸಿದ್ದಾರೆ. ಅವರ ಕಾಳಜಿ ಮತ್ತು ಶೀಘ್ರ ಪ್ರತಿಕ್ರಿಯೆಗಾಗಿ ಧನ್ಯವಾದ ಅರ್ಪಿಸುತ್ತೇನೆ. ಈ ಪಿಡುಗನ್ನು ಸೋಲಿಸಲು ನಾವು ಜೊತೆಗೂಡಿ ಕೆಲಸ ಮಾಡಬೇಕಿದೆ’ ಎಂದು ದೇವೇಗೌಡರು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಹಾಸನ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಬಗ್ಗೆ ದೇವೇಗೌಡ ಕಳವಳ; ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ

ಮಾಜಿ ಪ್ರಧಾನಿ ದೇವೇಗೌಡರಿಗೆ ಕೊರೊನಾ: ನಿಮ್ಮ ಆಯ್ಕೆಯ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿರಿ ಎಂದ ಪ್ರಧಾನಿ ಮೋದಿ

(Former PM Deve Gowda requests do not celebrate my birthday but help covid patients On May 18th)

Published On - 2:46 pm, Sat, 15 May 21

ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು