AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Deve Gowda: ಜೆಡಿಎಸ್ ವರಿಷ್ಠ ಎಚ್​ಡಿ ದೇವೇಗೌಡ ಆಸ್ಪತ್ರೆಗೆ ದಾಖಲು

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡ ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಬೆಳಗ್ಗೆ 10.30ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದು, ಕಾಲುನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

HD Deve Gowda: ಜೆಡಿಎಸ್ ವರಿಷ್ಠ ಎಚ್​ಡಿ ದೇವೇಗೌಡ ಆಸ್ಪತ್ರೆಗೆ ದಾಖಲು
ಎಚ್​ಡಿ ದೇವೇಗೌಡ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on:Feb 28, 2023 | 7:42 PM

Share

ಬೆಂಗಳೂರು: ಜೆಡಿಎಸ್ (JDS) ವರಿಷ್ಠ, ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡ (HD Deve Gowda) ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಬೆಳಗ್ಗೆ 10.30ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದು, ಕಾಲುನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವೇಗೌಡರು ಆಸ್ಪತ್ರೆಗೆ ತೆರಳುವ ಬಗ್ಗೆ ಬೆಳಿಗ್ಗೆ ಜೆಡಿಎಸ್ ನಾಯಕ ಎಚ್​ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದರು. ದೇವೇಗೌಡರು ಇಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದಾರೆ. ಆಸ್ಪತ್ರೆಯಿಂದ ಬಂದ ಬಳಿಕ ಹಾಸನ ಕ್ಷೇತ್ರದ ಜೆಡಿಎಸ್​ ಟಿಕೆಟ್ ನೀಡಿಕೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದರು. ಇದೀಗ ದೇವೇಗೌಡರು ಆಸ್ಪತ್ರೆಗೆ ದಾಖಲಾಗಿರುವುದು ತಿಳಿದುಬಂದಿದೆ. ದೇವೇಗೌಡರ ಆರೋಗ್ಯ ಸ್ಥಿತಿ ಅಷ್ಟೊಂದು ಉತ್ತಮವಾಗಿಲ್ಲ ಎಂದು ಎರಡು ದಿನಗಳ ಹಿಂದೆಯೇ ಕುಮಾರಸ್ವಾಮಿ ತಿಳಿಸಿದ್ದರು. ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ಬಗ್ಗೆ ದೇವೇಗೌಡರ ಸಮ್ಮುಖದಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ. ಈ ವಿಚಾರವಾಗಿ ದೇವೇಗೌಡರಿಗೆ ಹೆಚ್ಚಿನ ಹೊರೆ ನೀಡುವುದು ತನಗಿಷ್ಟವಿಲ್ಲ. ದೇವೇಗೌಡರ ಆರೋಗ್ಯವೇ ಮುಖ್ಯ ಎಂದು ಕುಮಾರಸ್ವಾಮಿ ಹೇಳಿದ್ದರು.

ದೇವೇಗೌಡರಿಗೆ ಕಾಲು, ಮಂಡಿ ನೋವಿದೆ. ಮನೆಯಲ್ಲಿ ವಿಶ್ರಾಂತಿ ದೊರೆಯುತ್ತಿಲ್ಲ. ಅವರು ಪ್ರವಾಸಕ್ಕೆ ಹೋಗಲೇಬೇಕೆಂದು ಹೇಳುತ್ತಿದ್ದಾರೆ. ಅವರನ್ನು ಕಾಣಲು ಜನ ಬರುವುದು ಜಾಸ್ತಿ ಆಗಿದೆ. ಹೀಗಾಗಿ ಆಸ್ಪತ್ರೆಯಲ್ಲಿ ಇದ್ದರೆ ಒಳ್ಳೆಯದು, ಸ್ಪಂದಿಸಬಹುದು ಎಂದು ದಾಖಲಿಸಲಾಗಿದೆ ಅಷ್ಟೆ. ನಾನು ಪ್ರವಾಸದಲ್ಲಿ ಇರುವುದರಿಂದ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಆಗಿಲ್ಲ. ಆಸ್ಪತ್ರೆ ವರದಿ ನೋಡಿದ ಬಳಿಕ ಮಾತನಾಡುತ್ತೇನೆ ಎಂದು ಚಿಕ್ಕಮಗಳೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:19 pm, Tue, 28 February 23

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ