Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಾಪ ಆಕೆ ಮನವಿ ಮಾಡಿದ್ದಾಳೆ.. ನಾವು ಮನುಷ್ಯರಲ್ವಾ, ಅದಕ್ಕೆ ಅವರ ನೆರವಿಗೆ ಧಾವಿಸುತ್ತೇವೆ’

ಆಕೆ ಅಜ್ಞಾತ ಸ್ಥಳದಲ್ಲಿದ್ದಾಳೆ. ಪಾಪ ಆಕೆ ಮನವಿ ಮಾಡಿದ್ದಾಳೆ. ನಾವು ಮನುಷ್ಯರಲ್ವಾ, ಅದಕ್ಕೆ ಅವರ ನೆರವಿಗೆ ಧಾವಿಸುತ್ತೇವೆ ಎಂದು CD ಲೇಡಿಯ 2ನೇ ವಿಡಿಯೋ ಬಿಡುಗಡೆ ವಿಚಾರವಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

‘ಪಾಪ ಆಕೆ ಮನವಿ ಮಾಡಿದ್ದಾಳೆ.. ನಾವು ಮನುಷ್ಯರಲ್ವಾ, ಅದಕ್ಕೆ ಅವರ ನೆರವಿಗೆ ಧಾವಿಸುತ್ತೇವೆ’
‘ಸಹಾಯ ಕೇಳಿರುವ ಯುವತಿ ನೆರವಿಗೆ ನಾವು ನಿಲ್ಲುತ್ತೇವೆ’
Follow us
KUSHAL V
|

Updated on:Mar 25, 2021 | 6:41 PM

ಕೋಲಾರ: ಆಕೆ ಅಜ್ಞಾತ ಸ್ಥಳದಲ್ಲಿದ್ದಾಳೆ. ಪಾಪ ಆಕೆ ಮನವಿ ಮಾಡಿದ್ದಾಳೆ. ನಾವು ಮನುಷ್ಯರಲ್ವಾ, ಅದಕ್ಕೆ ಅವರ ನೆರವಿಗೆ ಧಾವಿಸುತ್ತೇವೆ ಎಂದು CD ಲೇಡಿಯ 2ನೇ ವಿಡಿಯೋ ಬಿಡುಗಡೆ ವಿಚಾರವಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಆಕೆ ಕಾಂಗ್ರೆಸ್​ ನೆರವನ್ನು ಮಾತ್ರ ಕೋರಿದ್ದಾಳೆ, ಯಾಕೆ ಗೊತ್ತಿಲ್ಲ. ಆದರೆ, ಯುವತಿ ಹೆದರಬೇಕಿಲ್ಲ. ನಮ್ಮದು ಅನಾಗರಿಕ ಸಮಾಜವಲ್ಲ. ಒಂದು ಹೆಣ್ಣುಮಗಳು ಸಂಕಷ್ಟದಲ್ಲಿದ್ದು ಸಹಾಯ ಕೇಳಿದ್ದಾಳೆ. ಸಹಾಯ ಕೇಳಿರುವ ಯುವತಿ ನೆರವಿಗೆ ನಾವು ನಿಲ್ಲುತ್ತೇವೆ. ಸಾರ್ವಜನಿಕ ಜೀವನದಲ್ಲಿರುವ ನಾವು ಸಹಾಯಕ್ಕೆ ನಿಲ್ತೇವೆ. ಯಾರೇ ಸಹಾಯ ಕೇಳಿದ್ರು ಅವರ ಸಹಾಯಕ್ಕೆ ನಿಲ್ಲುತ್ತೇವೆ ಎಂದು ರಮೇಶ್​ ಕುಮಾರ್ ಹೇಳಿದರು.

ಎಸ್​​ಐಟಿ ಮುಂದೆ ಹೇಳಿಕೆ ನೀಡುವುದಕ್ಕೆ ಒತ್ತಡ ಇದ್ದರೆ ನ್ಯಾಯಾಧೀಶರ ಎದುರು ಹೇಳಿಕೆಯೇ ಅಧಿಕೃತವಾಗುತ್ತದೆ. ಯುವತಿ ಧೈರ್ಯವಾಗಿ ಬಂದು ಹೇಳಿಕೆಯನ್ನ ನೀಡಲಿ. ಯುವತಿ ನೆರವಿಗೆ ನಾವು ನಿಲ್ಲುತ್ತೇವೆ. ನನಗೂ ಒಬ್ಬ ಹೆಣ್ಣು ಮಗಳಿದ್ದಾಳೆ. ಆಕೆಗೆ ಸಂಕಷ್ಟ ಎದುರಾದಾಗ ನೆರವಿಗೆ ನಿಲ್ಲಬೇಕಲ್ಲವೇ? ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದರು.

LAKSHMI HEBBALKAR 2

ಲಕ್ಷ್ಮೀ ಹೆಬ್ಬಾಳ್ಕರ್

‘ಕಾಂಗ್ರೆಸ್​ ಪಕ್ಷ ಮಹಿಳೆ ಪರವಾಗಿ ಹೋರಾಟ ಮಾಡುತ್ತಿದೆ’ ಇತ್ತ, ಕಾಂಗ್ರೆಸ್​ ಪಕ್ಷ ಮಹಿಳೆ ಪರವಾಗಿ ಹೋರಾಟ ಮಾಡುತ್ತಿದೆ. ಅದಕ್ಕೆ ಕಾಂಗ್ರೆಸ್​ ಪಕ್ಷದ ನಾಯಕರಿಂದ ರಕ್ಷಣೆ ಕೋರಿದ್ದಾರೆ ಎಂದು ಬೆಂಗಳೂರಿನಲ್ಲಿ ಟಿವಿ9ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ಮೇಲಿನ ವಿಶ್ವಾಸದಿಂದ ಅವರ ಹೆಸರು ಬಳಸಿರಬಹುದು. ವಿಶ್ವಾಸದಿಂದ ಕಾಂಗ್ರೆಸ್ ನಾಯಕರ ಹೆಸರು ಬಳಸಿರಬಹುದು. ಮೂರು ದಿನದ ಚರ್ಚೆ ನೋಡಿ ಅಥವಾ ಕೇಳಿ ಬಳಸಿರಬಹುದು ಎಂದು ಬೆಂಗಳೂರಿನಲ್ಲಿ ಟಿವಿ9ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದರು.

ಗೃಹಸಚಿವ ಬಸವರಾಜ ಬೊಮ್ಮಾಯಿ ಭೇಟಿಯಾದ ಬಾಲಚಂದ್ರ ಜಾರಕಿಹೊಳಿ ಇತ್ತ, ಸಚಿವ ಬಾಲಚಂದ್ರ ಜಾರಕಿಹೊಳಿ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದರು. ಬೆಂಗಳೂರಿನ ಆರ್.ಟಿ.ನಗರದ ಬೊಮ್ಮಾಯಿ ನಿವಾಸದಲ್ಲಿ ಭೇಟಿಯಾದರು. ಕೆಎಂಎಫ್​ ಅಧ್ಯಕ್ಷರೂ ಆಗಿರುವ ಬಾಲಚಂದ್ರ ಜಾರಕಿಹೊಳಿ ಸಿಎಂ ನಿವಾಸಕ್ಕೆ ಭೇಟಿಕೊಟ್ಟ ನಂತರ ಗೃಹಸಚಿವರ ನಿವಾಸಕ್ಕೆ ಭೇಟಿಯಾದರು. ಸಿಡಿಯಲ್ಲಿರುವ ಲೇಡಿಯ 2ನೇ ವಿಡಿಯೋ ಬಿಡುಗಡೆ ಹಿನ್ನೆಲೆಯಲ್ಲಿ ಸಿಎಂ ಮತ್ತು ಗೃಹ ಮಂತ್ರಿ ಅವರನ್ನು ಬಾಲಚಂದ್ರ ಜಾರಕಿಹೊಳಿ ಭೇಟಿಯಾದರು.

ಅತ್ತ, ಪ್ರಕರಣಕ್ಕೆ ಸಂಬಂಧಿಸಿದಂತೆ ಆಯುಕ್ತರ ಕಚೇರಿಯಲ್ಲಿ SIT ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಭಾಗಿಯಾದರು. ಸತತ 4 ಗಂಟೆಗಳಿಂದ ನಡೆಯುತ್ತಿರುವ ಮೀಟಿಂಗ್ ನಡೆಯಿತು. ಸಿಡಿ ಕೇಸ್ ಕುರಿತು ಅಧಿಕಾರಿಗಳು ಚರ್ಚೆ ನಡೆಸಿದರು.

ಇದನ್ನೂ ಓದಿ: ಉಪಸಮರಕ್ಕೆ ಸಜ್ಜಾದ ‘ಕೈ’ ಪಡೆ: ಕಾಂಗ್ರೆಸ್​ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್

Published On - 6:36 pm, Thu, 25 March 21

ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ