AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿ ಕುಲಪತಿ ಹುದ್ದೆ ಕೊಡಿಸುವುದಾಗಿ ಮಂಗಳೂರು ವಿವಿ ಪ್ರಾಧ್ಯಾಪಕರಿಗೆ ಪಂಗನಾಮ: ರಾಮಸೇನಾ ಸಂಸ್ಥಾಪಕ ಅರೆಸ್ಟ್

ಈ ಹಿಂದೆ ಶ್ರೀರಾಮಸೇನೆ ರಾಜ್ಯ ಸಂಚಾಲಕನಾಗಿದ್ದ ಪ್ರಸಾದ್, ನಂತರ ಶ್ರೀರಾಮಸೇನೆಯಿಂದ ಹೊರಬಂದು ‘ರಾಮಸೇನಾ ಸಂಘಟನೆ’ಯನ್ನು ಕಟ್ಟಿಕೊಂಡಿದ್ದರು. ಅವರ ಮೇಲೆ ಮಂಗಳೂರು ಉತ್ತರ, ಪೂರ್ವ ಠಾಣೆಗಳಲ್ಲಿ ಪ್ರಕರಣಗಳು ಈಗಾಗಲೇ ದಾಖಲಾಗಿದ್ದವು ಎಂದು ತಿಳಿದುಬಂದಿದೆ.

ವಿವಿ ಕುಲಪತಿ ಹುದ್ದೆ ಕೊಡಿಸುವುದಾಗಿ ಮಂಗಳೂರು ವಿವಿ ಪ್ರಾಧ್ಯಾಪಕರಿಗೆ ಪಂಗನಾಮ: ರಾಮಸೇನಾ ಸಂಸ್ಥಾಪಕ ಅರೆಸ್ಟ್
ಆರೋಪಿ ಪ್ರಸಾದ್ ಅತ್ತಾವರ್
guruganesh bhat
| Edited By: |

Updated on: Mar 29, 2021 | 5:39 PM

Share

ಮಂಗಳೂರು:  ರಾಯಚೂರು ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಕೊಡಿಸುವುದಾಗಿ 17.5 ಲಕ್ಷ ಹಣ ಪಡೆದು ವಂಚಿಸಿದ ಆರೋಪದಡಿ 41 ವರ್ಷದ ರಾಮಸೇನಾ ಸಂಸ್ಥಾಪಕ ಪ್ರಸಾದ್ ಅತ್ತಾವರ ಎಂಬ ವ್ಯಕ್ತಿಯನ್ನು ಮಂಗಳೂರಿನ ಕಂಕನಾಡಿ ಟೌನ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಕೆಲವು ಪ್ರಾಧ್ಯಾಪಕರಿಗೆ ರಾಯಚೂರು ವಿವಿ ಕುಲಪತಿ ಹುದ್ದೆ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಆರೋಪದಲ್ಲಿ ಪ್ರಸಾದ್ ಅತ್ತಾವರ​ನ ಬಂಧನವಾಗಿದೆ.

30 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಪ್ರಸಾದ್ ಅತ್ತಾವರಗೆ ಈಗಾಗಲೇ 17.5 ಲಕ್ಷ ಪಡೆದಿದ್ದರು. ಪ್ರಾಧ್ಯಾಪಕರುಗಳಿಗೆ ಗಣ್ಯ ವ್ಯಕ್ತಿಗಳ ಜತೆಗಿದ್ದ ಫೋಟೋಗಳನ್ನು ತೋರಿಸಿ ನನಗೆ ಇವರ ಪರಿಚಯವಿದೆ ಎಂದು ನಂಬಿಸುತ್ತಿದ್ದ ಆರೋಪ ಪ್ರಸಾದ್ ಮೇಲಿದೆ. ಈ ಮೂಲಕ ವಿಶ್ವವಿದ್ಯಾಲಯದ ಹುದ್ದೆ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡುತ್ತಿದ್ದ ಎನ್ನಲಾಗಿದೆ. 17.5 ಲಕ್ಷ ಹಣ ನೀಡಿದ್ದರೂ ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಕೊಡಿಸದ ಹಿನ್ನೆಲೆಯಲ್ಲಿ ಹಣ ವಾಪಸ್ ಕೇಳಿದ್ದಕ್ಕೆ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ವಿವೇಕ್ ಆಚಾರ್ಯ ಎಂಬುವವರ ದೂರಿನ ಮೇರೆಗೆ ಪ್ರಸಾದ್ ಅತ್ತಾವರ ಬಂಧನವಾಗಿದೆ.

ಈ ಹಿಂದೆ ಶ್ರೀರಾಮಸೇನೆ ರಾಜ್ಯ ಸಂಚಾಲಕನಾಗಿದ್ದ ಪ್ರಸಾದ್, ನಂತರ ಶ್ರೀರಾಮಸೇನೆಯಿಂದ ಹೊರಬಂದು ‘ರಾಮಸೇನಾ ಸಂಘಟನೆ’ಯನ್ನು ಕಟ್ಟಿಕೊಂಡಿದ್ದರು.  ಪ್ರಸಾದ್ ಅತ್ತಾವರ ಮೇಲೆ ಮಂಗಳೂರು ಉತ್ತರ, ಪೂರ್ವ ಠಾಣೆಗಳಲ್ಲಿ ಪ್ರಕರಣಗಳು ಈಗಾಗಲೇ ದಾಖಲಾಗಿದ್ದವು ಎಂದು ತಿಳಿದುಬಂದಿದೆ. ಈ ಕುರಿತು ಇನ್ನಷ್ಟು ತನಿಖೆ ನಡೆಯಬೇಕಿದ್ದು ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಎಚ್ಚೆತ್ತುಕೊಳ್ಳಬೇಕಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿವೆ

ಇದನ್ನೂ ಓದಿ: ಆಕೆಯ ಉಂಗುರವೇ ಮೂಗಿಗೆ ತಾಗಿ ಗಾಯವಾಗಿದೆ; ನಾನೀಗ ಬಂಧನದಿಂದ ಪಾರಾಗಲು 25 ಸಾವಿರ ರೂ ಖರ್ಚು ಮಾಡಬೇಕು

ಹನಿಟ್ರ್ಯಾಪ್​ ಮಾಡುತ್ತಿದ್ದ ಮಂಗಳೂರು ಹುಡುಗಿಯರನ್ನು ಬಲೆಗೆ ಬೀಳಿಸಿದ ಸುರತ್ಕಲ್​ ಪೊಲೀಸರು

ಕಾರ್ಯಗತವಾದ ಕೊಚ್ಚಿ-ಮಂಗಳೂರು ಅನಿಲ ಪೈಪ್ ಲೈನ್.. ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್