ಜಿಟಿ ಜಿಟಿ ಮಳೆಯಲ್ಲೂ ಎಸಿಬಿ ಅಧಿಕಾರಿಗಳ ಭರ್ಜರಿ ಬೇಟೆ, ಬೆಂಗಳೂರಿನಲ್ಲಿ ನಾಲ್ಕು ಕಡೆ ದಾಳಿ

ರಾಜಾಜಿನಗರ ಸ್ಟರ್ಲಿಂಗ್ ಅಪಾರ್ಟ್ಮೆಂಟ್ ನಿವಾಸ, ಜಯನಗರ ಗೋಕುಲ ಅಪಾರ್ಟ್ಮೆಂಟ್ನಲ್ಲಿರುವ ನಿವಾಸ ಸೇರಿದಂತೆ 4 ಕಡೆ ಎಸಿಬಿ ದಾಳಿ ನಡೆದಿದೆ. ಸದ್ಯ 4 ತಂಡಗಳಿಂದ ದಾಳಿ ಮುಂದುವರೆದಿದೆ.

ಜಿಟಿ ಜಿಟಿ ಮಳೆಯಲ್ಲೂ ಎಸಿಬಿ ಅಧಿಕಾರಿಗಳ ಭರ್ಜರಿ ಬೇಟೆ, ಬೆಂಗಳೂರಿನಲ್ಲಿ ನಾಲ್ಕು ಕಡೆ ದಾಳಿ
ಎ.ಕೃಷ್ಣಮೂರ್ತಿ
Edited By: ಆಯೇಷಾ ಬಾನು

Updated on: Jul 15, 2021 | 11:20 AM

ಬೆಂಗಳೂರು: ಜಿಟಿ ಜಿಟಿ ಮಳೆಯ ನಡುವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಟ್ಟು 4 ಕಡೆ ಎಸಿಬಿ ದಾಳಿ ನಡೆದಿದೆ. ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಹಿರಿಯ ಮೋಟಾರು ವಾಹನ ನಿರೀಕ್ಷಕ ಎ.ಕೃಷ್ಣಮೂರ್ತಿ ಸಂಬಂಧಿಸಿದ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹಾಗೂ KRIDCL ಮುಖ್ಯ ಇಂಜಿನಿಯರ್ ಆರ್.ಪಿ.ಕುಲಕರ್ಣಿ ಮನೆ ಮೇಲೂ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ರಾಜಾಜಿನಗರ ಸ್ಟರ್ಲಿಂಗ್ ಅಪಾರ್ಟ್ಮೆಂಟ್ ನಿವಾಸ, ಜಯನಗರ ಗೋಕುಲ ಅಪಾರ್ಟ್ಮೆಂಟ್ನಲ್ಲಿರುವ ನಿವಾಸ ಸೇರಿದಂತೆ 4 ಕಡೆ ದಾಳಿ ನಡೆದಿದೆ. ಸದ್ಯ 4 ತಂಡಗಳಿಂದ ದಾಳಿ ಮುಂದುವರೆದಿದೆ. ಬೇರೆ ಕಡೆ ಆಸ್ತಿಗಳಿಸಿರೋದು ಕಂಡು ಬಂದರೆ ಅಲ್ಲೂ ದಾಳಿ ನಡೆಸಲು ಸಿದ್ಧತೆ ನಡೆದಿದೆ.

ಕುಲಕರ್ಣಿ ಐದಾರು ಐಷಾರಾಮಿ ಅಪಾರ್ಟ್ಮೆಂಟ್​ನಲ್ಲಿ ಫ್ಲಾಟ್ ಹೊಂದಿದ್ದರು. ಇವರು ಕೆಲ ಅಪಾರ್ಟ್ಮೆಂಟ್ ಖರೀದಿಸಿ ಬಾಡಿಗೆಗೆ ನೀಡಿದ್ರು. ಮಗನ ಹೆಸರಲ್ಲಿ ಕಂಪನಿ ಕೂಡ ತೆರೆದಿದ್ದರು. ಎರಡು ಕೋಟಿ ರೂಪಾಯಿ ಇನ್ಶುರೆನ್ಸ್ ಕೂಡ ಹೊಂದಿದ್ದಾರೆ. ಸಂಬಂಧಿಕರ ಹೆಸರಲ್ಲೂ ಆಸ್ತಿ ಮಾಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ದಾಳಿ ನಡೆದಿದೆ.

ಜಯನಗರ ಹಾಗೂ ಬನಶಂಕರಿ ಅಪಾರ್ಟ್ಮೆಂಟ್​ನಲ್ಲಿ ಕುಲಕರ್ಣಿ ಹಾಗೂ ಆತನ ಮಗ ವಾಸವಾಗಿದ್ದು ಕುಲಕರ್ಣಿ ಮೂರು ಅಪಾರ್ಟ್ಮೆಂಟ್​ಗಳನ್ನ ಬಾಡಿಗೆ ನೀಡಿದ್ದರು. ರಾಜಾಜಿನಗರದ ಅಪಾರ್ಟ್ಮೆಂಟ್ ನಲ್ಲಿ 1, ಹಾಗೂ ಮೈಸೂರಿನ ಯಾದವನಗರದ 1 ಮನೆ ಬಾಡಿಗೆಗೆ ನೀಡಿದ್ದರು. ಸದ್ಯ 15 ಕೋಟಿಯ ದಾಖಲೆಪತ್ರ ವಶಪಡಿಸಿಕೊಳ್ಳಲಾಗಿದೆ. ಮಾಯಾ ದೇವಿ ಆಂಡ್ ಕೋ ಹಾಗೂ ಕೆಮ್ ಟೆಕ್ ಹೆಸರಿನ ಕಂಪನಿ ಮಗನ ಹೆಸರಲ್ಲಿದೆ. ಕೋಟ್ಯಾಂತರ ರೂ ಇನ್ಶುರೆನ್ಸ್ ಮಾಡಿಸಿರುವ ದಾಖಲೆಗಳು ಎಸಿಬಿಗೆ ಲಭ್ಯವಾಗಿದೆ.

ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳ ಕಾರ್ಯಾಚರಣೆ ಜೋರಾಗಿದೆ.9 ಅಧಿಕಾರಿಗಳಿಗೆ ಸಂಬಂಧಿಸಿದ 40 ಕಡೆ ಏಕಕಾಲಕ್ಕೆ ದಾಳಿ ನಡೆದಿದೆ. ಜಿಲ್ಲಾ ನಗರಾಭಿವೃದ್ಧಿ ಸೆಲ್‌ನ ಇಇ ಜಿ.ಶ್ರೀಧರ್ ಕಚೇರಿ, ಮನೆ ಮೇಲೆ ಎಸಿಬಿ ದಾಳಿ ನಡೆದಿದೆ. ದಕ್ಷಿಣ ಕನ್ನಡ ಡಿಸಿ ಕಚೇರಿಯ ಜಿಲ್ಲಾ ನಗರಾಭಿವೃದ್ಧಿ ಸೆಲ್‌ ಇಇ ಕೃಷ್ಣ ಎಸ್. ಹೆಬ್ಸೂರ್, ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಲಿ., ಉಡುಪಿ KRIDCL ಮುಖ್ಯ ಇಂಜಿನಿಯರ್ ಆರ್.ಪಿ.ಕುಲಕರ್ಣಿ, ಮಾಲೂರು ನಗರ ಯೋಜನೆ ಸಹಾಯಕ ನಿರ್ದೇಶಕ ಹೆಚ್.ಆರ್.ಕೃಷ್ಣಪ್ಪಗೂ ಎಸಿಬಿ ಶಾಕ್ ಕೊಟ್ಟದೆ. ಬೀದರ್‌ ಪಂಚಾಯತ್ ರಾಜ್ ಇಲಾಖೆ ಜೆಇ ಸುರೇಶ್ ಮೊಹ್ರೆ, ಮಂಡ್ಯ ಸಾಮಾಜಿಕ ಅರಣ್ಯ ಇಲಾಖೆ ಡಿಸಿಎಫ್ ಟಿ.ವೆಂಕಟೇಶ್, ವಿಜಯಪುರ ಹೆಸ್ಕಾಂ ಎಇಇ ಸಿದ್ದರಾಮ ಮಲ್ಲಿಕಾರ್ಜುನ, ಇನ್ಸ್‌ಪೆಕ್ಟರ್ ಎ.ಕೃಷ್ಣಮೂರ್ತಿ, ಬಳ್ಳಾರಿಯ ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್ A.N.ವಿಜಯ್‌ಕುಮಾರ್ ಸೇರಿ 9 ಅಧಿಕಾರಿಗಳಿಗೆ ಸೇರಿದ 40 ಕಡೆ ಎಸಿಬಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಫೀಲ್ಡ್​ಗಿಳಿದ ಎಸಿಬಿ ಅಧಿಕಾರಿಗಳು, ಹಲವು ಕಡೆ ಮನೆ-ಕಚೇರಿಗಳ ಮೇಲೆ ದಾಳಿ

Published On - 9:05 am, Thu, 15 July 21

Web contact

TV9 Kannada

Read More
Follow Us