ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗಿ ನಾಲ್ಕು ಮಕ್ಕಳ ದಾರುಣ ಸಾವು

ಈಜಾಡಲು ಹೋಗಿದ್ದ ನಾಲ್ಕು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಸಜ್ಜುವಾರಪಲ್ಲಿ ಗ್ರಾಮದಲ್ಲಿ ನಡೆದಿದೆ. ಸಜ್ಜುವಾರಪಲ್ಲಿ ಗ್ರಾಮದ ಬಳಿ ಇರುವ ಕುಂಟೆಯಲ್ಲಿ ಈ ಮನಕಲಕುವ ಘಟನೆ ಸಂಭವಿಸಿದ್ದು, ಮೃತ ಮಕ್ಕಳೆಲ್ಲಾ ಬಾಗೇಪಲ್ಲಿ ತಾಲೂಕಿನ ಉದವಾರಪಲ್ಲಿ ನಿವಾಸಿಗಳಾಗಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಓರ್ವ ಬಾಲಕನ ಶವವನ್ನು ಹೊರತೆಗೆದಿದ್ದಾರೆ. ಇನ್ನೂ ಮೂವರ ಶವಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ. ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು ಸ್ಥಳಕ್ಕಾಗಮಿಸಿದ […]

ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗಿ ನಾಲ್ಕು ಮಕ್ಕಳ ದಾರುಣ ಸಾವು
Edited By: ಸಾಧು ಶ್ರೀನಾಥ್​

Updated on: Nov 04, 2020 | 4:03 PM

ಈಜಾಡಲು ಹೋಗಿದ್ದ ನಾಲ್ಕು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಸಜ್ಜುವಾರಪಲ್ಲಿ ಗ್ರಾಮದಲ್ಲಿ ನಡೆದಿದೆ.

ಸಜ್ಜುವಾರಪಲ್ಲಿ ಗ್ರಾಮದ ಬಳಿ ಇರುವ ಕುಂಟೆಯಲ್ಲಿ ಈ ಮನಕಲಕುವ ಘಟನೆ ಸಂಭವಿಸಿದ್ದು, ಮೃತ ಮಕ್ಕಳೆಲ್ಲಾ ಬಾಗೇಪಲ್ಲಿ ತಾಲೂಕಿನ ಉದವಾರಪಲ್ಲಿ ನಿವಾಸಿಗಳಾಗಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಓರ್ವ ಬಾಲಕನ ಶವವನ್ನು ಹೊರತೆಗೆದಿದ್ದಾರೆ. ಇನ್ನೂ ಮೂವರ ಶವಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.

ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us