AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Shortage| ಆಕ್ಸಿಜನ್ ಕೊರತೆಯಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಸೋಂಕಿತರು ಬಲಿ

ಕಳೆದ‌ ರಾತ್ರಿ ಆಕ್ಸಿಜನ್ ಸಮಸ್ಯೆಯಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ನಾಲ್ವರು ಮೃತಪಟ್ಟಿದ್ದಾರೆ.

Oxygen Shortage| ಆಕ್ಸಿಜನ್ ಕೊರತೆಯಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಸೋಂಕಿತರು ಬಲಿ
ಕೋಲಾರ ಜಿಲ್ಲಾಸ್ಪತ್ರೆ
ಆಯೇಷಾ ಬಾನು
|

Updated on: Apr 26, 2021 | 9:49 AM

Share

ಕೋಲಾರ: ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಅನೇಕ ಸಾವು- ನೋವುಗಳು ಆಕ್ಸಿಜನ್ ಕೊರತೆಯಿಂದಲೇ ಸಂಭವಿಸುತ್ತಿವೆ. ಅಲ್ಲದೆ ಆಕ್ಸಿಜನ್ ಸರಿಯಾಗಿ, ಬೇಕಾದಷ್ಟು ಪ್ರಮಾಣದಲ್ಲಿ ಪೂರೈಕೆ ಆಗುತ್ತಿಲ್ಲ ಎಂದು ಆಸ್ಪತ್ರೆಗಳು ಆರೋಪಿಸುತ್ತಿವೆ. ಈಗ ಇದೇ ಆಕ್ಸಿಜನ್ ಕೊರತೆಗೆ ನಾಲ್ವರು ಸೋಂಕಿತರು ಬಲಿಯಾಗಿದ್ದಾರೆ.

ಕಳೆದ‌ ರಾತ್ರಿ ಆಕ್ಸಿಜನ್ ಸಮಸ್ಯೆಯಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ನಾಲ್ವರು ಮೃತಪಟ್ಟಿದ್ದಾರೆ. ಕೊರೊನಾ ದೃಢವಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಸೋಂಕಿತರು ಐಸಿಯು ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ನಿನ್ನೆ ರಾತ್ರಿ ಆಕ್ಸಿಜನ್ ಕೊರತೆಯಿಂದಾಗಿ ಮೂವರು ಪುರುಷರು ಹಾಗೂ ಓರ್ವ ಮಹಿಳೆ ಮೃತಪಟ್ಟಿದ್ದಾರೆ.

ರಾತ್ರಿ ಫೋನ್ ಮಾಡಿದರು ಯಾವೊಬ್ಬ ಅಧಿಕಾರಿಯು ಸ್ಪಂದಿಸಿಲ್ಲ. ಆಸ್ಪತ್ರೆ ಸಿಬ್ಬಂದಿ ಆಕ್ಸಿಜನ್ ಕಡಿತಗೊಳಿಸಿದ್ದರಿಂದಲೇ ನಮ್ಮವರ ಸಾವು ಸಂಭವಿಸಿದೆ ಎಂದು ಆಸ್ಪತ್ರೆ ಎದುರು ಮೃತರ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಆಕ್ಸಿಜನ್ ಸರಿಯಾದ ಸಮಯಕ್ಕೆ ಪೂರೈಸಲು ಶ್ರಮಿಸುತ್ತಿದ್ದೇವೆ ಇನ್ನು ಕೋಲಾರದಲ್ಲಿ ಆಕ್ಸಿಜನ್ ಸಮಸ್ಯೆಯಿಂದ ನಾಲ್ವರು ನಿಧನ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಸಚಿವ ಡಾ.ಕೆ ಸುಧಾಕರ್ ಈ ಪ್ರಕರಣ ಬಗ್ಗೆ ಡಿಹೆಚ್ಒ ರಿಂದ ತಿಳಿದುಕೊಳ್ಳುತ್ತೇನೆ. ಯಾವ ಕಾರಣಕ್ಕೆ ಮೃತಪಟ್ಟಿದ್ದಾರೆ ಎಂದು ತಿಳಿದು ಹೇಳುತ್ತೇನೆ. ಆಕ್ಸಿಜನ್ ಸರಿಯಾದ ಸಮಯಕ್ಕೆ ಪೂರೈಸಲು ಶ್ರಮಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಯ ವಿರುದ್ಧ ಸಾಲು ಸಾಲು ಆರೋಪ, ಎಫ್ಐಆರ್ ದಾಖಲು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ