AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Shortage| ಆಕ್ಸಿಜನ್ ಕೊರತೆಯಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಸೋಂಕಿತರು ಬಲಿ

ಕಳೆದ‌ ರಾತ್ರಿ ಆಕ್ಸಿಜನ್ ಸಮಸ್ಯೆಯಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ನಾಲ್ವರು ಮೃತಪಟ್ಟಿದ್ದಾರೆ.

Oxygen Shortage| ಆಕ್ಸಿಜನ್ ಕೊರತೆಯಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಸೋಂಕಿತರು ಬಲಿ
ಕೋಲಾರ ಜಿಲ್ಲಾಸ್ಪತ್ರೆ
ಆಯೇಷಾ ಬಾನು
|

Updated on: Apr 26, 2021 | 9:49 AM

Share

ಕೋಲಾರ: ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಅನೇಕ ಸಾವು- ನೋವುಗಳು ಆಕ್ಸಿಜನ್ ಕೊರತೆಯಿಂದಲೇ ಸಂಭವಿಸುತ್ತಿವೆ. ಅಲ್ಲದೆ ಆಕ್ಸಿಜನ್ ಸರಿಯಾಗಿ, ಬೇಕಾದಷ್ಟು ಪ್ರಮಾಣದಲ್ಲಿ ಪೂರೈಕೆ ಆಗುತ್ತಿಲ್ಲ ಎಂದು ಆಸ್ಪತ್ರೆಗಳು ಆರೋಪಿಸುತ್ತಿವೆ. ಈಗ ಇದೇ ಆಕ್ಸಿಜನ್ ಕೊರತೆಗೆ ನಾಲ್ವರು ಸೋಂಕಿತರು ಬಲಿಯಾಗಿದ್ದಾರೆ.

ಕಳೆದ‌ ರಾತ್ರಿ ಆಕ್ಸಿಜನ್ ಸಮಸ್ಯೆಯಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ನಾಲ್ವರು ಮೃತಪಟ್ಟಿದ್ದಾರೆ. ಕೊರೊನಾ ದೃಢವಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಸೋಂಕಿತರು ಐಸಿಯು ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ನಿನ್ನೆ ರಾತ್ರಿ ಆಕ್ಸಿಜನ್ ಕೊರತೆಯಿಂದಾಗಿ ಮೂವರು ಪುರುಷರು ಹಾಗೂ ಓರ್ವ ಮಹಿಳೆ ಮೃತಪಟ್ಟಿದ್ದಾರೆ.

ರಾತ್ರಿ ಫೋನ್ ಮಾಡಿದರು ಯಾವೊಬ್ಬ ಅಧಿಕಾರಿಯು ಸ್ಪಂದಿಸಿಲ್ಲ. ಆಸ್ಪತ್ರೆ ಸಿಬ್ಬಂದಿ ಆಕ್ಸಿಜನ್ ಕಡಿತಗೊಳಿಸಿದ್ದರಿಂದಲೇ ನಮ್ಮವರ ಸಾವು ಸಂಭವಿಸಿದೆ ಎಂದು ಆಸ್ಪತ್ರೆ ಎದುರು ಮೃತರ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಆಕ್ಸಿಜನ್ ಸರಿಯಾದ ಸಮಯಕ್ಕೆ ಪೂರೈಸಲು ಶ್ರಮಿಸುತ್ತಿದ್ದೇವೆ ಇನ್ನು ಕೋಲಾರದಲ್ಲಿ ಆಕ್ಸಿಜನ್ ಸಮಸ್ಯೆಯಿಂದ ನಾಲ್ವರು ನಿಧನ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಸಚಿವ ಡಾ.ಕೆ ಸುಧಾಕರ್ ಈ ಪ್ರಕರಣ ಬಗ್ಗೆ ಡಿಹೆಚ್ಒ ರಿಂದ ತಿಳಿದುಕೊಳ್ಳುತ್ತೇನೆ. ಯಾವ ಕಾರಣಕ್ಕೆ ಮೃತಪಟ್ಟಿದ್ದಾರೆ ಎಂದು ತಿಳಿದು ಹೇಳುತ್ತೇನೆ. ಆಕ್ಸಿಜನ್ ಸರಿಯಾದ ಸಮಯಕ್ಕೆ ಪೂರೈಸಲು ಶ್ರಮಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಯ ವಿರುದ್ಧ ಸಾಲು ಸಾಲು ಆರೋಪ, ಎಫ್ಐಆರ್ ದಾಖಲು

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?