AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಪಿಎಸ್​ಐ ಸೇರಿದಂತೆ ನಾಲ್ವರು ಅಧಿಕಾರಿಗಳು ಅಮಾನತು

ಸುಳ್ಳು ಮಾಹಿತಿ ನೀಡಿ ದೂರು ದಾಖಲಿಸಿದ್ದ ಬೆಂಗಳೂರಿನ ಸುಬ್ರಹ್ಮಣ್ಯಪುರ ಎಸಿಪಿ ಸ್ಕ್ವಾಡ್​ನಿಂದ ರಾಜನ್, ಚೈತ್ರಾ ಕೂಡ ಬಂಧನ ಮಾಡಲಾಗಿದೆ. ಕದಿರೇನಹಳ್ಳಿಯ ಇಬ್ಬರ ವಿರುದ್ಧ ಸುಳ್ಳು ಎನ್​ಡಿಪಿಎಸ್​ ಕೇಸ್ ದಾಖಲಿಸಿ ಜೈಲು ಕಳುಹಿಸಲಾಗಿತ್ತು. ತನಿಖೆ ನಡೆಸಿ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟಿದ್ದ ಪೊಲೀಸರ ಸಸ್ಪೆಂಡ್ ಮಾಡಲಾಗಿದೆ.

ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಪಿಎಸ್​ಐ ಸೇರಿದಂತೆ ನಾಲ್ವರು ಅಧಿಕಾರಿಗಳು ಅಮಾನತು
ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಪಿಎಸ್​ಐ ಸೇರಿದಂತೆ ನಾಲ್ವರು ಅಧಿಕಾರಿಗಳು ಅಮಾನತು
ರಾಚಪ್ಪಾಜಿ ನಾಯ್ಕ್
| Edited By: |

Updated on: Sep 15, 2024 | 5:25 PM

Share

ಬೆಂಗಳೂರು, ಸೆಪ್ಟೆಂಬರ್​ 15: ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಬೆಂಗಳೂರಿನ ಬನಶಂಕರಿ ಠಾಣೆ ಪಿಎಸ್​ಐ ಸೇರಿದಂತೆ ನಾಲ್ವರ ಪೊಲೀಸರ ಅಮಾನತು (suspended) ಮಾಡಲಾಗಿದೆ. ಬನಶಂಕರಿ ಠಾಣೆ ಪಿಎಸ್ಐ ಶ್ರೀಧರ್ ಗುಗ್ರಿ, ಎಎಸ್ಐ ಎಸ್.ಕೆ.ರಾಜು, ಕಾನ್ಸ್​ಟೇಬಲ್​ಗಳಾದ ಸತೀಶ್ ಬಗಲಿ, ತಿಮ್ಮಪ್ಪ ಪೂಜಾರ ಅಮಾನತುಗೊಳಿಸಿ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಆದೇಶ ಹೊರಡಿಸಿದ್ದಾರೆ.

ಸುಳ್ಳು ಮಾಹಿತಿ ನೀಡಿ ದೂರು ದಾಖಲಿಸಿದ್ದ ಬೆಂಗಳೂರಿನ ಸುಬ್ರಹ್ಮಣ್ಯಪುರ ಎಸಿಪಿ ಸ್ಕ್ವಾಡ್​ನಿಂದ ರಾಜನ್, ಚೈತ್ರಾ ಕೂಡ ಬಂಧನ ಮಾಡಲಾಗಿದೆ. ಕದಿರೇನಹಳ್ಳಿಯ ಇಬ್ಬರ ವಿರುದ್ಧ ಸುಳ್ಳು ಎನ್​ಡಿಪಿಎಸ್​ ಕೇಸ್ ದಾಖಲಿಸಿ ಜೈಲು ಕಳುಹಿಸಲಾಗಿತ್ತು.

ಇದನ್ನೂ ಓದಿ: ತುಮಕೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ದುರ್ಘಟನೆ: ತಂದೆ, ಮಗ ಸೇರಿ ಮೂವರು ಸಾವು

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಅಫೀಮು ಮಾರುತ್ತಿದ್ದಾರೆಂದು ಕದಿರೇನಹಳ್ಳಿಯ ಇಬ್ಬರ ವಿರುದ್ಧ ರಾಜನ್, ಚೈತ್ರಾ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟಿದ್ದಾರೆಂದು ಕಮಿಷನರ್​​ಗೆ ಜೈಲಿಗೆ ಹೋಗಿದ್ದವರ ಸಂಬಂಧಿಕರು ಆಯುಕ್ತರಿಗೆ ದೂರು ನೀಡಿದ್ದರು. ಹಾಗಾಗಿ ತನಿಖೆ ನಡೆಸಿ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟಿದ್ದ ಪೊಲೀಸರ ಸಸ್ಪೆಂಡ್ ಮಾಡಲಾಗಿದ್ದು, ತಪ್ಪು ಮಾಹಿತಿ ನೀಡಿದ್ದ ರಾಜನ್, ಚೈತ್ರಾರನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಲಬ್ ನಲ್ಲಿ ಪಾರ್ಟಿ ಮಾಡಿದ ಪೊಲೀಸ್ ಅಧಿಕಾರಿಗಳಿಗೆ ಸಂಕಷ್ಟ: ಅಮಾನತು

ಹಾಸನ: ಕ್ಲಬ್​ನಲ್ಲಿ ಪಾರ್ಟಿ ಮಾಡಿ ಅನುಚಿತ ವರ್ತನೆ ತೋರಿದ ಆರೋಪದಲ್ಲಿ ಜಿಲ್ಲೆಯ ಬೇಲೂರು ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಸುಬ್ರಹ್ಮಣ್ಯ, ತಾಲ್ಲೂಕಿನ ಹಳೆಬೀಡು ವೃತ್ತದ ಸರ್ಕಲ್ ಇನ್ಸಪೆಕ್ಟರ್ ಜಯರಾಂ ಹಾಗೂ ಬೇಲೂರು ಠಾಣೆಯ ಪಿಎಸ್​ಐ ಪ್ರವೀಣ್ ಸೇರಿ ಮೂವರನ್ನ ಅಮಾನತು ಮಾಡಿ ಹಾಸನ ಎಸ್ಪಿ ಮೊಹಮದ್ ಸುಜೀತಾ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಗ್ರಾಮ ಪಂಚಾಯತಿ ಮಾಜಿ ಸದಸ್ಯನ ತಲೆಗೆ 3 ಗುಂಡು ಹೊಡೆದು ಬರ್ಬರ ಹತ್ಯೆ

ಸೆಪ್ಟೆಂಬರ್ 3ರಂದು ಅಧಿಕಾರಿಗಳು ಸೇರಿ ಸಣ್ಣದೊಂದು ಡಿನ್ನರ್ ಪಾರ್ಟಿ ಮಾಡಿದ್ದಾರೆ. ಈ ವೇಳೆ ಊಟ ಮುಗಿಸಿ ಹೊರಡುವ ವೇಳೆ ಬಿಲ್ ವಿಚಾರಕ್ಕೆ ಕ್ಲಬ್ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತನೆ ಮಾಡಿದ್ದಾರೆ ಎಂಬ ಬಗ್ಗೆ ಕೇಳಿ ಬಂದ ದೂರು ಆಧರಿಸಿ ತನಿಖೆ ನಡೆಸಿದ ಎಸ್​ಪಿ ತನಿಖಾ ವರದಿ ಪಡೆದು ಅಮಾನತು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆಂಗಳೂರು ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟದ ರಹಸ್ಯ ಬಿಚ್ಚಿಟ್ಟ RTO
ಬೆಂಗಳೂರು ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟದ ರಹಸ್ಯ ಬಿಚ್ಚಿಟ್ಟ RTO
ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು
ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು
ಭಾರತಕ್ಕೆ ಬಂದ ಯುವ ಚಾಂಪಿಯನ್ಸ್​ಗೆ ಅದ್ಧೂರಿ ಸ್ವಾಗತ
ಭಾರತಕ್ಕೆ ಬಂದ ಯುವ ಚಾಂಪಿಯನ್ಸ್​ಗೆ ಅದ್ಧೂರಿ ಸ್ವಾಗತ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ