ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಪಿಎಸ್​ಐ ಸೇರಿದಂತೆ ನಾಲ್ವರು ಅಧಿಕಾರಿಗಳು ಅಮಾನತು

ಸುಳ್ಳು ಮಾಹಿತಿ ನೀಡಿ ದೂರು ದಾಖಲಿಸಿದ್ದ ಬೆಂಗಳೂರಿನ ಸುಬ್ರಹ್ಮಣ್ಯಪುರ ಎಸಿಪಿ ಸ್ಕ್ವಾಡ್​ನಿಂದ ರಾಜನ್, ಚೈತ್ರಾ ಕೂಡ ಬಂಧನ ಮಾಡಲಾಗಿದೆ. ಕದಿರೇನಹಳ್ಳಿಯ ಇಬ್ಬರ ವಿರುದ್ಧ ಸುಳ್ಳು ಎನ್​ಡಿಪಿಎಸ್​ ಕೇಸ್ ದಾಖಲಿಸಿ ಜೈಲು ಕಳುಹಿಸಲಾಗಿತ್ತು. ತನಿಖೆ ನಡೆಸಿ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟಿದ್ದ ಪೊಲೀಸರ ಸಸ್ಪೆಂಡ್ ಮಾಡಲಾಗಿದೆ.

ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಪಿಎಸ್​ಐ ಸೇರಿದಂತೆ ನಾಲ್ವರು ಅಧಿಕಾರಿಗಳು ಅಮಾನತು
ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಪಿಎಸ್​ಐ ಸೇರಿದಂತೆ ನಾಲ್ವರು ಅಧಿಕಾರಿಗಳು ಅಮಾನತು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 15, 2024 | 5:25 PM

ಬೆಂಗಳೂರು, ಸೆಪ್ಟೆಂಬರ್​ 15: ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಬೆಂಗಳೂರಿನ ಬನಶಂಕರಿ ಠಾಣೆ ಪಿಎಸ್​ಐ ಸೇರಿದಂತೆ ನಾಲ್ವರ ಪೊಲೀಸರ ಅಮಾನತು (suspended) ಮಾಡಲಾಗಿದೆ. ಬನಶಂಕರಿ ಠಾಣೆ ಪಿಎಸ್ಐ ಶ್ರೀಧರ್ ಗುಗ್ರಿ, ಎಎಸ್ಐ ಎಸ್.ಕೆ.ರಾಜು, ಕಾನ್ಸ್​ಟೇಬಲ್​ಗಳಾದ ಸತೀಶ್ ಬಗಲಿ, ತಿಮ್ಮಪ್ಪ ಪೂಜಾರ ಅಮಾನತುಗೊಳಿಸಿ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಆದೇಶ ಹೊರಡಿಸಿದ್ದಾರೆ.

ಸುಳ್ಳು ಮಾಹಿತಿ ನೀಡಿ ದೂರು ದಾಖಲಿಸಿದ್ದ ಬೆಂಗಳೂರಿನ ಸುಬ್ರಹ್ಮಣ್ಯಪುರ ಎಸಿಪಿ ಸ್ಕ್ವಾಡ್​ನಿಂದ ರಾಜನ್, ಚೈತ್ರಾ ಕೂಡ ಬಂಧನ ಮಾಡಲಾಗಿದೆ. ಕದಿರೇನಹಳ್ಳಿಯ ಇಬ್ಬರ ವಿರುದ್ಧ ಸುಳ್ಳು ಎನ್​ಡಿಪಿಎಸ್​ ಕೇಸ್ ದಾಖಲಿಸಿ ಜೈಲು ಕಳುಹಿಸಲಾಗಿತ್ತು.

ಇದನ್ನೂ ಓದಿ: ತುಮಕೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ದುರ್ಘಟನೆ: ತಂದೆ, ಮಗ ಸೇರಿ ಮೂವರು ಸಾವು

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಅಫೀಮು ಮಾರುತ್ತಿದ್ದಾರೆಂದು ಕದಿರೇನಹಳ್ಳಿಯ ಇಬ್ಬರ ವಿರುದ್ಧ ರಾಜನ್, ಚೈತ್ರಾ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟಿದ್ದಾರೆಂದು ಕಮಿಷನರ್​​ಗೆ ಜೈಲಿಗೆ ಹೋಗಿದ್ದವರ ಸಂಬಂಧಿಕರು ಆಯುಕ್ತರಿಗೆ ದೂರು ನೀಡಿದ್ದರು. ಹಾಗಾಗಿ ತನಿಖೆ ನಡೆಸಿ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟಿದ್ದ ಪೊಲೀಸರ ಸಸ್ಪೆಂಡ್ ಮಾಡಲಾಗಿದ್ದು, ತಪ್ಪು ಮಾಹಿತಿ ನೀಡಿದ್ದ ರಾಜನ್, ಚೈತ್ರಾರನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಲಬ್ ನಲ್ಲಿ ಪಾರ್ಟಿ ಮಾಡಿದ ಪೊಲೀಸ್ ಅಧಿಕಾರಿಗಳಿಗೆ ಸಂಕಷ್ಟ: ಅಮಾನತು

ಹಾಸನ: ಕ್ಲಬ್​ನಲ್ಲಿ ಪಾರ್ಟಿ ಮಾಡಿ ಅನುಚಿತ ವರ್ತನೆ ತೋರಿದ ಆರೋಪದಲ್ಲಿ ಜಿಲ್ಲೆಯ ಬೇಲೂರು ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಸುಬ್ರಹ್ಮಣ್ಯ, ತಾಲ್ಲೂಕಿನ ಹಳೆಬೀಡು ವೃತ್ತದ ಸರ್ಕಲ್ ಇನ್ಸಪೆಕ್ಟರ್ ಜಯರಾಂ ಹಾಗೂ ಬೇಲೂರು ಠಾಣೆಯ ಪಿಎಸ್​ಐ ಪ್ರವೀಣ್ ಸೇರಿ ಮೂವರನ್ನ ಅಮಾನತು ಮಾಡಿ ಹಾಸನ ಎಸ್ಪಿ ಮೊಹಮದ್ ಸುಜೀತಾ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಗ್ರಾಮ ಪಂಚಾಯತಿ ಮಾಜಿ ಸದಸ್ಯನ ತಲೆಗೆ 3 ಗುಂಡು ಹೊಡೆದು ಬರ್ಬರ ಹತ್ಯೆ

ಸೆಪ್ಟೆಂಬರ್ 3ರಂದು ಅಧಿಕಾರಿಗಳು ಸೇರಿ ಸಣ್ಣದೊಂದು ಡಿನ್ನರ್ ಪಾರ್ಟಿ ಮಾಡಿದ್ದಾರೆ. ಈ ವೇಳೆ ಊಟ ಮುಗಿಸಿ ಹೊರಡುವ ವೇಳೆ ಬಿಲ್ ವಿಚಾರಕ್ಕೆ ಕ್ಲಬ್ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತನೆ ಮಾಡಿದ್ದಾರೆ ಎಂಬ ಬಗ್ಗೆ ಕೇಳಿ ಬಂದ ದೂರು ಆಧರಿಸಿ ತನಿಖೆ ನಡೆಸಿದ ಎಸ್​ಪಿ ತನಿಖಾ ವರದಿ ಪಡೆದು ಅಮಾನತು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.