AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಪಿಎಸ್​ಐ ಸೇರಿದಂತೆ ನಾಲ್ವರು ಅಧಿಕಾರಿಗಳು ಅಮಾನತು

ಸುಳ್ಳು ಮಾಹಿತಿ ನೀಡಿ ದೂರು ದಾಖಲಿಸಿದ್ದ ಬೆಂಗಳೂರಿನ ಸುಬ್ರಹ್ಮಣ್ಯಪುರ ಎಸಿಪಿ ಸ್ಕ್ವಾಡ್​ನಿಂದ ರಾಜನ್, ಚೈತ್ರಾ ಕೂಡ ಬಂಧನ ಮಾಡಲಾಗಿದೆ. ಕದಿರೇನಹಳ್ಳಿಯ ಇಬ್ಬರ ವಿರುದ್ಧ ಸುಳ್ಳು ಎನ್​ಡಿಪಿಎಸ್​ ಕೇಸ್ ದಾಖಲಿಸಿ ಜೈಲು ಕಳುಹಿಸಲಾಗಿತ್ತು. ತನಿಖೆ ನಡೆಸಿ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟಿದ್ದ ಪೊಲೀಸರ ಸಸ್ಪೆಂಡ್ ಮಾಡಲಾಗಿದೆ.

ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಪಿಎಸ್​ಐ ಸೇರಿದಂತೆ ನಾಲ್ವರು ಅಧಿಕಾರಿಗಳು ಅಮಾನತು
ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಪಿಎಸ್​ಐ ಸೇರಿದಂತೆ ನಾಲ್ವರು ಅಧಿಕಾರಿಗಳು ಅಮಾನತು
ರಾಚಪ್ಪಾಜಿ ನಾಯ್ಕ್
| Edited By: |

Updated on: Sep 15, 2024 | 5:25 PM

Share

ಬೆಂಗಳೂರು, ಸೆಪ್ಟೆಂಬರ್​ 15: ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಬೆಂಗಳೂರಿನ ಬನಶಂಕರಿ ಠಾಣೆ ಪಿಎಸ್​ಐ ಸೇರಿದಂತೆ ನಾಲ್ವರ ಪೊಲೀಸರ ಅಮಾನತು (suspended) ಮಾಡಲಾಗಿದೆ. ಬನಶಂಕರಿ ಠಾಣೆ ಪಿಎಸ್ಐ ಶ್ರೀಧರ್ ಗುಗ್ರಿ, ಎಎಸ್ಐ ಎಸ್.ಕೆ.ರಾಜು, ಕಾನ್ಸ್​ಟೇಬಲ್​ಗಳಾದ ಸತೀಶ್ ಬಗಲಿ, ತಿಮ್ಮಪ್ಪ ಪೂಜಾರ ಅಮಾನತುಗೊಳಿಸಿ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಆದೇಶ ಹೊರಡಿಸಿದ್ದಾರೆ.

ಸುಳ್ಳು ಮಾಹಿತಿ ನೀಡಿ ದೂರು ದಾಖಲಿಸಿದ್ದ ಬೆಂಗಳೂರಿನ ಸುಬ್ರಹ್ಮಣ್ಯಪುರ ಎಸಿಪಿ ಸ್ಕ್ವಾಡ್​ನಿಂದ ರಾಜನ್, ಚೈತ್ರಾ ಕೂಡ ಬಂಧನ ಮಾಡಲಾಗಿದೆ. ಕದಿರೇನಹಳ್ಳಿಯ ಇಬ್ಬರ ವಿರುದ್ಧ ಸುಳ್ಳು ಎನ್​ಡಿಪಿಎಸ್​ ಕೇಸ್ ದಾಖಲಿಸಿ ಜೈಲು ಕಳುಹಿಸಲಾಗಿತ್ತು.

ಇದನ್ನೂ ಓದಿ: ತುಮಕೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ದುರ್ಘಟನೆ: ತಂದೆ, ಮಗ ಸೇರಿ ಮೂವರು ಸಾವು

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಅಫೀಮು ಮಾರುತ್ತಿದ್ದಾರೆಂದು ಕದಿರೇನಹಳ್ಳಿಯ ಇಬ್ಬರ ವಿರುದ್ಧ ರಾಜನ್, ಚೈತ್ರಾ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟಿದ್ದಾರೆಂದು ಕಮಿಷನರ್​​ಗೆ ಜೈಲಿಗೆ ಹೋಗಿದ್ದವರ ಸಂಬಂಧಿಕರು ಆಯುಕ್ತರಿಗೆ ದೂರು ನೀಡಿದ್ದರು. ಹಾಗಾಗಿ ತನಿಖೆ ನಡೆಸಿ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟಿದ್ದ ಪೊಲೀಸರ ಸಸ್ಪೆಂಡ್ ಮಾಡಲಾಗಿದ್ದು, ತಪ್ಪು ಮಾಹಿತಿ ನೀಡಿದ್ದ ರಾಜನ್, ಚೈತ್ರಾರನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಲಬ್ ನಲ್ಲಿ ಪಾರ್ಟಿ ಮಾಡಿದ ಪೊಲೀಸ್ ಅಧಿಕಾರಿಗಳಿಗೆ ಸಂಕಷ್ಟ: ಅಮಾನತು

ಹಾಸನ: ಕ್ಲಬ್​ನಲ್ಲಿ ಪಾರ್ಟಿ ಮಾಡಿ ಅನುಚಿತ ವರ್ತನೆ ತೋರಿದ ಆರೋಪದಲ್ಲಿ ಜಿಲ್ಲೆಯ ಬೇಲೂರು ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಸುಬ್ರಹ್ಮಣ್ಯ, ತಾಲ್ಲೂಕಿನ ಹಳೆಬೀಡು ವೃತ್ತದ ಸರ್ಕಲ್ ಇನ್ಸಪೆಕ್ಟರ್ ಜಯರಾಂ ಹಾಗೂ ಬೇಲೂರು ಠಾಣೆಯ ಪಿಎಸ್​ಐ ಪ್ರವೀಣ್ ಸೇರಿ ಮೂವರನ್ನ ಅಮಾನತು ಮಾಡಿ ಹಾಸನ ಎಸ್ಪಿ ಮೊಹಮದ್ ಸುಜೀತಾ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಗ್ರಾಮ ಪಂಚಾಯತಿ ಮಾಜಿ ಸದಸ್ಯನ ತಲೆಗೆ 3 ಗುಂಡು ಹೊಡೆದು ಬರ್ಬರ ಹತ್ಯೆ

ಸೆಪ್ಟೆಂಬರ್ 3ರಂದು ಅಧಿಕಾರಿಗಳು ಸೇರಿ ಸಣ್ಣದೊಂದು ಡಿನ್ನರ್ ಪಾರ್ಟಿ ಮಾಡಿದ್ದಾರೆ. ಈ ವೇಳೆ ಊಟ ಮುಗಿಸಿ ಹೊರಡುವ ವೇಳೆ ಬಿಲ್ ವಿಚಾರಕ್ಕೆ ಕ್ಲಬ್ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತನೆ ಮಾಡಿದ್ದಾರೆ ಎಂಬ ಬಗ್ಗೆ ಕೇಳಿ ಬಂದ ದೂರು ಆಧರಿಸಿ ತನಿಖೆ ನಡೆಸಿದ ಎಸ್​ಪಿ ತನಿಖಾ ವರದಿ ಪಡೆದು ಅಮಾನತು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!