AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಪಿಎಸ್​ಐ ಸೇರಿದಂತೆ ನಾಲ್ವರು ಅಧಿಕಾರಿಗಳು ಅಮಾನತು

ಸುಳ್ಳು ಮಾಹಿತಿ ನೀಡಿ ದೂರು ದಾಖಲಿಸಿದ್ದ ಬೆಂಗಳೂರಿನ ಸುಬ್ರಹ್ಮಣ್ಯಪುರ ಎಸಿಪಿ ಸ್ಕ್ವಾಡ್​ನಿಂದ ರಾಜನ್, ಚೈತ್ರಾ ಕೂಡ ಬಂಧನ ಮಾಡಲಾಗಿದೆ. ಕದಿರೇನಹಳ್ಳಿಯ ಇಬ್ಬರ ವಿರುದ್ಧ ಸುಳ್ಳು ಎನ್​ಡಿಪಿಎಸ್​ ಕೇಸ್ ದಾಖಲಿಸಿ ಜೈಲು ಕಳುಹಿಸಲಾಗಿತ್ತು. ತನಿಖೆ ನಡೆಸಿ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟಿದ್ದ ಪೊಲೀಸರ ಸಸ್ಪೆಂಡ್ ಮಾಡಲಾಗಿದೆ.

ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಪಿಎಸ್​ಐ ಸೇರಿದಂತೆ ನಾಲ್ವರು ಅಧಿಕಾರಿಗಳು ಅಮಾನತು
ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಪಿಎಸ್​ಐ ಸೇರಿದಂತೆ ನಾಲ್ವರು ಅಧಿಕಾರಿಗಳು ಅಮಾನತು
ರಾಚಪ್ಪಾಜಿ ನಾಯ್ಕ್
| Edited By: |

Updated on: Sep 15, 2024 | 5:25 PM

Share

ಬೆಂಗಳೂರು, ಸೆಪ್ಟೆಂಬರ್​ 15: ನಕಲಿ ದೂರು ದಾಖಲಿಸಿ ಅಮಾಯಕರನ್ನು ಜೈಲಿಗಟ್ಟಿದ್ದ ಬೆಂಗಳೂರಿನ ಬನಶಂಕರಿ ಠಾಣೆ ಪಿಎಸ್​ಐ ಸೇರಿದಂತೆ ನಾಲ್ವರ ಪೊಲೀಸರ ಅಮಾನತು (suspended) ಮಾಡಲಾಗಿದೆ. ಬನಶಂಕರಿ ಠಾಣೆ ಪಿಎಸ್ಐ ಶ್ರೀಧರ್ ಗುಗ್ರಿ, ಎಎಸ್ಐ ಎಸ್.ಕೆ.ರಾಜು, ಕಾನ್ಸ್​ಟೇಬಲ್​ಗಳಾದ ಸತೀಶ್ ಬಗಲಿ, ತಿಮ್ಮಪ್ಪ ಪೂಜಾರ ಅಮಾನತುಗೊಳಿಸಿ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಆದೇಶ ಹೊರಡಿಸಿದ್ದಾರೆ.

ಸುಳ್ಳು ಮಾಹಿತಿ ನೀಡಿ ದೂರು ದಾಖಲಿಸಿದ್ದ ಬೆಂಗಳೂರಿನ ಸುಬ್ರಹ್ಮಣ್ಯಪುರ ಎಸಿಪಿ ಸ್ಕ್ವಾಡ್​ನಿಂದ ರಾಜನ್, ಚೈತ್ರಾ ಕೂಡ ಬಂಧನ ಮಾಡಲಾಗಿದೆ. ಕದಿರೇನಹಳ್ಳಿಯ ಇಬ್ಬರ ವಿರುದ್ಧ ಸುಳ್ಳು ಎನ್​ಡಿಪಿಎಸ್​ ಕೇಸ್ ದಾಖಲಿಸಿ ಜೈಲು ಕಳುಹಿಸಲಾಗಿತ್ತು.

ಇದನ್ನೂ ಓದಿ: ತುಮಕೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ದುರ್ಘಟನೆ: ತಂದೆ, ಮಗ ಸೇರಿ ಮೂವರು ಸಾವು

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಅಫೀಮು ಮಾರುತ್ತಿದ್ದಾರೆಂದು ಕದಿರೇನಹಳ್ಳಿಯ ಇಬ್ಬರ ವಿರುದ್ಧ ರಾಜನ್, ಚೈತ್ರಾ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟಿದ್ದಾರೆಂದು ಕಮಿಷನರ್​​ಗೆ ಜೈಲಿಗೆ ಹೋಗಿದ್ದವರ ಸಂಬಂಧಿಕರು ಆಯುಕ್ತರಿಗೆ ದೂರು ನೀಡಿದ್ದರು. ಹಾಗಾಗಿ ತನಿಖೆ ನಡೆಸಿ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟಿದ್ದ ಪೊಲೀಸರ ಸಸ್ಪೆಂಡ್ ಮಾಡಲಾಗಿದ್ದು, ತಪ್ಪು ಮಾಹಿತಿ ನೀಡಿದ್ದ ರಾಜನ್, ಚೈತ್ರಾರನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಲಬ್ ನಲ್ಲಿ ಪಾರ್ಟಿ ಮಾಡಿದ ಪೊಲೀಸ್ ಅಧಿಕಾರಿಗಳಿಗೆ ಸಂಕಷ್ಟ: ಅಮಾನತು

ಹಾಸನ: ಕ್ಲಬ್​ನಲ್ಲಿ ಪಾರ್ಟಿ ಮಾಡಿ ಅನುಚಿತ ವರ್ತನೆ ತೋರಿದ ಆರೋಪದಲ್ಲಿ ಜಿಲ್ಲೆಯ ಬೇಲೂರು ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಸುಬ್ರಹ್ಮಣ್ಯ, ತಾಲ್ಲೂಕಿನ ಹಳೆಬೀಡು ವೃತ್ತದ ಸರ್ಕಲ್ ಇನ್ಸಪೆಕ್ಟರ್ ಜಯರಾಂ ಹಾಗೂ ಬೇಲೂರು ಠಾಣೆಯ ಪಿಎಸ್​ಐ ಪ್ರವೀಣ್ ಸೇರಿ ಮೂವರನ್ನ ಅಮಾನತು ಮಾಡಿ ಹಾಸನ ಎಸ್ಪಿ ಮೊಹಮದ್ ಸುಜೀತಾ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಗ್ರಾಮ ಪಂಚಾಯತಿ ಮಾಜಿ ಸದಸ್ಯನ ತಲೆಗೆ 3 ಗುಂಡು ಹೊಡೆದು ಬರ್ಬರ ಹತ್ಯೆ

ಸೆಪ್ಟೆಂಬರ್ 3ರಂದು ಅಧಿಕಾರಿಗಳು ಸೇರಿ ಸಣ್ಣದೊಂದು ಡಿನ್ನರ್ ಪಾರ್ಟಿ ಮಾಡಿದ್ದಾರೆ. ಈ ವೇಳೆ ಊಟ ಮುಗಿಸಿ ಹೊರಡುವ ವೇಳೆ ಬಿಲ್ ವಿಚಾರಕ್ಕೆ ಕ್ಲಬ್ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತನೆ ಮಾಡಿದ್ದಾರೆ ಎಂಬ ಬಗ್ಗೆ ಕೇಳಿ ಬಂದ ದೂರು ಆಧರಿಸಿ ತನಿಖೆ ನಡೆಸಿದ ಎಸ್​ಪಿ ತನಿಖಾ ವರದಿ ಪಡೆದು ಅಮಾನತು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?