ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತದಲ್ಲಿ ಹಸುಗೂಸು ಸೇರಿ ಮಂಗಳೂರಿನ ನಾಲ್ವರು ಸಾವು

ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹಳೆಯಂಗಡಿ ಮಂಗಳೂರಿನ ನಾಲ್ವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಸೌದಿ ಅರೇಬಿಯಾದ ತೈಫ್ ನಗರದ ಬಳಿ ಭೀಕರ ಅಪಘಾತ ಸಂಭವಿಸಿದೆ. ಕತಾರ್‌ನಿಂದ ಸೌದಿಗೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುವಾಗ ಝುಲ್ಫಾ ಎಂಬಲ್ಲಿ ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದ ನಂತರ ಕಾರು ಪಲ್ಟಿಯಾಗಿದೆ.

ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತದಲ್ಲಿ ಹಸುಗೂಸು ಸೇರಿ ಮಂಗಳೂರಿನ ನಾಲ್ವರು ಸಾವು
ಪ್ರಾತಿನಿಧಿಕ ಚಿತ್ರ
Edited By:

Updated on: Mar 21, 2024 | 4:28 PM

ಮಂಗಳೂರು, ಮಾರ್ಚ್​ 21: ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ (Mangaluru) ಹಳೆಯಂಗಡಿ ಮಂಗಳೂರಿನ ನಾಲ್ವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಸೌದಿ ಅರೇಬಿಯಾದ ತೈಫ್ ನಗರದ ಬಳಿ ಭೀಕರ ಅಪಘಾತ ಸಂಭವಿಸಿದೆ. ಕತಾರ್‌ನಿಂದ ಸೌದಿಗೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುವಾಗ ಝುಲ್ಫಾ ಎಂಬಲ್ಲಿ ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದ ನಂತರ ಕಾರು ಪಲ್ಟಿಯಾಗಿದೆ. ಹಳೆಯಂಗಡಿ ತೋಕೂರು ನಿವಾಸಿ ಹಿಬಾ(29), ಪತಿ ಮೊಹಮ್ಮದ್‌(34), ಮಕ್ಕಳಾದ ಆರೂಶ್(3) ಹಾಗೂ 40 ದಿನದ ಹಸುಗೂಸು ರಾಹ ಮೃತಪಟ್ಟಿದ್ದಾರೆ. ಹಿಬಾ ಸೋದರಿ ಪುತ್ರಿ ಫಾತಿಮಾಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಹಾಸನದಲ್ಲಿ ಡೆಂಘೀ ಜ್ವರಕ್ಕೆ 7 ವರ್ಷದ ಬಾಲಕಿ ಬಲಿ

ಹಾಸನ: ಡೆಂಘೀ ಜ್ವರಕ್ಕೆ 7 ವರ್ಷದ ಬಾಲಕಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾತ್ವಿಕಾ(7) ಮೃತ ಬಾಲಕಿ ಕಳೆದ 3-4 ದಿನಗಳಿಂದ ಜ್ವರದಿಂದ ಬಳಲುತ್ತಿದ್ದಳು. ಖಾಸಗಿ ನರ್ಸಿಂಗ್ ಹೋಂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಗಾಗಿ ಹಿಮ್ಸ್​ಗೆ ದಾಖಲಿಸಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಸಿಂಗಾಪುರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವಪತ್ತೆ

ಚಿತ್ರದುರ್ಗ: ಸಿಂಗಾಪುರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವಪತ್ತೆ ಆಗಿರುವಂತಹ ಘಟನೆ ನಡೆದಿದೆ. ಮೃತನ ಸಂಬಂಧಿಕರಿಂದ ಪತ್ನಿ ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಮಾಡಲಾಗಿದೆ. ಚಿತ್ರದುರ್ಗ ತಾಲೂಕಿನ ಸಿಂಗಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಿವಕುಮಾರ್(31) ಶವಪತ್ತೆ ಆಗಿದೆ.

ಇದನ್ನೂ ಓದಿ: ಇಂಜಿನಿಯರ್ ಗಂಡನಿಗೆ ಅಂಟಿಕೊಂಡಿತ್ತು ಐಪಿಎಲ್ ಬೆಟ್ಟಿಂಗ್ ಭೂತ: 54 ಲಕ್ಷ ರೂ ಸಾಲ, ನೊಂದ ಹೆಂಡತಿ ನೇಣಿಗೆ ಶರಣು

ಕೌಟುಂಬಿಕ ಕಲಹ ಹಿನ್ನೆಲೆ‌ ಹೊಡೆದು ಕೊಲೆ ಮಾಡಿದ ಆರೋಪ ಮಾಡಲಾಗಿದೆ. ಬಳಿಕ ಪ್ರಕರಣ ಮುಚ್ಚಿ ಹಾಕಲು ನೇಣು ಬಿಗಿದಿದ್ದಾರೆಂದು ಆರೋಪಿಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:14 pm, Thu, 21 March 24

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us