Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೆಷರಿ ಹಣ ದುರುಪಯೋಗ: ಸಬ್ ರಿಜಿಸ್ಟ್ರಾರ್‌ಗಳು, ಪತ್ರ ಬರಹಗಾರರಿಗೆ ಜೈಲು, 1 ಕೋಟಿ 29 ಲಕ್ಷ ರೂ ದಂಡ

2006ರಲ್ಲಿ ಮಂಡ್ಯ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅವ್ಯವಹಾರ ನಡೆದಿತ್ತು. ಈ ವೇಳೆ ಕರ್ತವ್ಯದಲ್ಲಿದ್ದ ನಾಲ್ವರು ಉಪ ನೋಂದಣಾಧಿಕಾರಿಗಳು ಮತ್ತು ಮೂವರು ಪತ್ರ ಬರಹಗಾರರಿಗೆ ಜೈಲು ಶಿಕ್ಷೆ, ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ.

ಟ್ರೆಷರಿ ಹಣ ದುರುಪಯೋಗ: ಸಬ್ ರಿಜಿಸ್ಟ್ರಾರ್‌ಗಳು, ಪತ್ರ ಬರಹಗಾರರಿಗೆ ಜೈಲು, 1 ಕೋಟಿ 29 ಲಕ್ಷ ರೂ ದಂಡ
ಮಂಡ್ಯದ ಜೆಎಂಎಫ್‌ಸಿ ನ್ಯಾಯಾಲಯ
Follow us
ಆಯೇಷಾ ಬಾನು
|

Updated on:Apr 02, 2021 | 11:23 AM

ಮಂಡ್ಯ: ರಾಜಸ್ವ ಹಣ ದುರುಪಯೋಗ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ವರು ಸಬ್ ರಿಜಿಸ್ಟ್ರಾರ್‌ಗಳು, 3 ಪತ್ರಬರಹಗಾರರಿಗೆ ಮಂಡ್ಯದ ಜೆಎಂಎಫ್‌ಸಿ ನ್ಯಾಯಾಲಯದಿಂದ ಜೈಲು ಶಿಕ್ಷೆ ಆದೇಶ ಹೊರ ಬಿದ್ದಿದೆ. 2006ರಲ್ಲಿ ಮಂಡ್ಯ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅವ್ಯವಹಾರ ನಡೆದಿತ್ತು. ಈ ವೇಳೆ ಕರ್ತವ್ಯದಲ್ಲಿದ್ದ ನಾಲ್ವರು ಉಪ ನೋಂದಣಾಧಿಕಾರಿಗಳು ಮತ್ತು ಮೂವರು ಪತ್ರ ಬರಹಗಾರರಿಗೆ ಜೈಲು ಶಿಕ್ಷೆ, ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ.

ನಾಲ್ವರು ಉಪ ನೋಂದಣಾಧಿಕಾರಿಗಳಾಗಿದ್ದ S.N.ಪ್ರಭಾ, ಚೆಲುವರಾಜು, ಲೀಲಾವತಿ, ಸುನಂದಾರಿಗೆ 4 ವರ್ಷ ಜೈಲು, ದಂಡ ಹಾಗೂ ಮೂವರು ಪತ್ರ ಬರಹಗಾರರಾದ ಬಿ.ಕೆ.ರಾಮರಾವ್, ನರಸಿಂಹಮೂರ್ತಿ, ಚಂದ್ರಶೇಖರ್‌ಗೆ 5 ವರ್ಷ ಜೈಲು ಶಿಕ್ಷೆ 1 ಕೋಟಿ 29 ಲಕ್ಷ ರೂಪಾಯಿ ದಂಡ ವಿಧಿಸಿ ಜಡ್ಜ್ ಆದೇಶ ನೀಡಿದ್ದಾರೆ. ಒಟ್ಟು 154 ಪ್ರಕರಣಗಳಲ್ಲಿ ಹಣ ದುರುಪಯೋಗ ಮಾಡಿರುವ ಬಗ್ಗೆ ಆರೋಪ ಕೇಳಿ ಬಂದಿದೆ.

Four Sub Register And Three Letter Writers Jailed for Misusing Govt Treasury Funds in Mandya

ಆದೇಶ ಪ್ರತಿ

2006ರಲ್ಲಿ ಉಪ ನೋಂದಣಾಧಿಕಾರಿಯಾಗಿದ್ದ ನರಸಿಂಹಯ್ಯ ಎಂಬುವವರು ಈ ಬಗ್ಗೆ ಮಂಡ್ಯ ಪಶ್ಚಿಮ ಠಾಣೆಯಲ್ಲಿ ದೂರು ನೀಡಿದ್ದು ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ರಮೇಶ್ ಎಸ್ ಗಾಣಿಗೇರ್ ತೀರ್ಪು ನೀಡಿದ್ದಾರೆ. ರಾಜ್ಯದ ವಿವಿಧ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿರೊ ಆಪಾದಿತರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಅಂತ್ಯವಾಗಿ ಬಂಧಿಸದಿದ್ದರೆ ಆಗ ಪ್ರಶ್ನಿಸಿ -ಡಿಜಿಪಿ ಪ್ರವೀಣ್ ಸೂದ್

(Four Sub Register And Three Letter Writers Jailed for Misusing Govt Treasury Funds in Mandya)

Published On - 10:34 am, Fri, 2 April 21

ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್