ಟ್ರೆಷರಿ ಹಣ ದುರುಪಯೋಗ: ಸಬ್ ರಿಜಿಸ್ಟ್ರಾರ್‌ಗಳು, ಪತ್ರ ಬರಹಗಾರರಿಗೆ ಜೈಲು, 1 ಕೋಟಿ 29 ಲಕ್ಷ ರೂ ದಂಡ

2006ರಲ್ಲಿ ಮಂಡ್ಯ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅವ್ಯವಹಾರ ನಡೆದಿತ್ತು. ಈ ವೇಳೆ ಕರ್ತವ್ಯದಲ್ಲಿದ್ದ ನಾಲ್ವರು ಉಪ ನೋಂದಣಾಧಿಕಾರಿಗಳು ಮತ್ತು ಮೂವರು ಪತ್ರ ಬರಹಗಾರರಿಗೆ ಜೈಲು ಶಿಕ್ಷೆ, ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ.

ಟ್ರೆಷರಿ ಹಣ ದುರುಪಯೋಗ: ಸಬ್ ರಿಜಿಸ್ಟ್ರಾರ್‌ಗಳು, ಪತ್ರ ಬರಹಗಾರರಿಗೆ ಜೈಲು, 1 ಕೋಟಿ 29 ಲಕ್ಷ ರೂ ದಂಡ
ಮಂಡ್ಯದ ಜೆಎಂಎಫ್‌ಸಿ ನ್ಯಾಯಾಲಯ
ಆಯೇಷಾ ಬಾನು

Updated on: Apr 02, 2021 | 11:23 AM

ಮಂಡ್ಯ: ರಾಜಸ್ವ ಹಣ ದುರುಪಯೋಗ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ವರು ಸಬ್ ರಿಜಿಸ್ಟ್ರಾರ್‌ಗಳು, 3 ಪತ್ರಬರಹಗಾರರಿಗೆ ಮಂಡ್ಯದ ಜೆಎಂಎಫ್‌ಸಿ ನ್ಯಾಯಾಲಯದಿಂದ ಜೈಲು ಶಿಕ್ಷೆ ಆದೇಶ ಹೊರ ಬಿದ್ದಿದೆ. 2006ರಲ್ಲಿ ಮಂಡ್ಯ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅವ್ಯವಹಾರ ನಡೆದಿತ್ತು. ಈ ವೇಳೆ ಕರ್ತವ್ಯದಲ್ಲಿದ್ದ ನಾಲ್ವರು ಉಪ ನೋಂದಣಾಧಿಕಾರಿಗಳು ಮತ್ತು ಮೂವರು ಪತ್ರ ಬರಹಗಾರರಿಗೆ ಜೈಲು ಶಿಕ್ಷೆ, ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ.

ನಾಲ್ವರು ಉಪ ನೋಂದಣಾಧಿಕಾರಿಗಳಾಗಿದ್ದ S.N.ಪ್ರಭಾ, ಚೆಲುವರಾಜು, ಲೀಲಾವತಿ, ಸುನಂದಾರಿಗೆ 4 ವರ್ಷ ಜೈಲು, ದಂಡ ಹಾಗೂ ಮೂವರು ಪತ್ರ ಬರಹಗಾರರಾದ ಬಿ.ಕೆ.ರಾಮರಾವ್, ನರಸಿಂಹಮೂರ್ತಿ, ಚಂದ್ರಶೇಖರ್‌ಗೆ 5 ವರ್ಷ ಜೈಲು ಶಿಕ್ಷೆ 1 ಕೋಟಿ 29 ಲಕ್ಷ ರೂಪಾಯಿ ದಂಡ ವಿಧಿಸಿ ಜಡ್ಜ್ ಆದೇಶ ನೀಡಿದ್ದಾರೆ. ಒಟ್ಟು 154 ಪ್ರಕರಣಗಳಲ್ಲಿ ಹಣ ದುರುಪಯೋಗ ಮಾಡಿರುವ ಬಗ್ಗೆ ಆರೋಪ ಕೇಳಿ ಬಂದಿದೆ.

ಆದೇಶ ಪ್ರತಿ

2006ರಲ್ಲಿ ಉಪ ನೋಂದಣಾಧಿಕಾರಿಯಾಗಿದ್ದ ನರಸಿಂಹಯ್ಯ ಎಂಬುವವರು ಈ ಬಗ್ಗೆ ಮಂಡ್ಯ ಪಶ್ಚಿಮ ಠಾಣೆಯಲ್ಲಿ ದೂರು ನೀಡಿದ್ದು ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ರಮೇಶ್ ಎಸ್ ಗಾಣಿಗೇರ್ ತೀರ್ಪು ನೀಡಿದ್ದಾರೆ. ರಾಜ್ಯದ ವಿವಿಧ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿರೊ ಆಪಾದಿತರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಅಂತ್ಯವಾಗಿ ಬಂಧಿಸದಿದ್ದರೆ ಆಗ ಪ್ರಶ್ನಿಸಿ -ಡಿಜಿಪಿ ಪ್ರವೀಣ್ ಸೂದ್

(Four Sub Register And Three Letter Writers Jailed for Misusing Govt Treasury Funds in Mandya)

Published On - 10:34 am, Fri, 2 April 21

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us