ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ಆಪ್ತನೆಂದು ಹೇಳಿಕೊಂಡು ಡಿಹೆಚ್​ಓಗೆ 7 ಲಕ್ಷ ರೂ. ವಂಚನೆ

ವಂಚಕನ ಬಲೆಗೆ ಬಾಗಲಕೋಟೆ ಜಿಲ್ಲಾ ಆರೋಗ್ಯಾಧಿಕಾರಿ ಬಿದ್ದಿದ್ದಾರೆ. ನಾನು ಸಿದ್ದರಾಮಯ್ಯ ಆಪ್ತ, ನಿಮ್ಮ ವಿವಾದವನ್ನು ಬಗೆಹರಿಸುತ್ತೇನೆ ಅಂತ ವಂಚಕ ರಾಮಯ್ಯ ಡಿಹೆಚ್​ಓ ಜಯಶ್ರೀ ಅವರಿಂದ ಬರೊಬ್ಬರಿ 7 ಲಕ್ಷ ರೂ. ಪಡೆದು, ಸಂಪರ್ಕಕ್ಕೆ ಸಿಗುತ್ತಿಲ್ಲ. ಡಿಹೆಚ್​ಓ ಸಿಸಿಬಿಗೆ ದೂರು ನೀಡಿದ್ದಾರೆ.

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ಆಪ್ತನೆಂದು ಹೇಳಿಕೊಂಡು ಡಿಹೆಚ್​ಓಗೆ 7 ಲಕ್ಷ ರೂ. ವಂಚನೆ
ಡಿಹೆಚ್​ಓ ಜಯಶ್ರೀ
Edited By: ವಿವೇಕ ಬಿರಾದಾರ

Updated on: Jul 12, 2024 | 10:33 AM

ಬಾಗಲಕೋಟೆ, ಜುಲೈ 12: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆಪ್ತ ಅಂತ ಹೇಳಿಕೊಂಡು ಬಾಗಲಕೋಟೆ (Bagalkot) ಜಿಲ್ಲಾ ಆರೋಗ್ಯಾಧಿಕಾರಿ ಜಯಶ್ರೀಗೆ ಏಳು ಲಕ್ಷ ರೂ. ವಂಚಿಸಿದ್ದಾನೆ. ರಾಮಯ್ಯ ವಂಚಿಸಿದ ಆರೋಪಿ. 2023ರ ಸೆಪ್ಟೆಂಬರ್​ ತಿಂಗಳಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹುದ್ದೆಗೆ ಕಿತ್ತಾಟ ನಡೆದಿತ್ತು. ಬಾಗಲಕೋಟೆ ಜಿಲ್ಲಾ ಆರೋಗ್ಯಾಧಿಕಾರಿ ಹುದ್ದೆಗಾಗಿ ಜಯಶ್ರೀ ಎಮ್ಮಿ ಹಾಗೂ ಶಾಸಕ ಹೆಚ್​ವೈ ಮೇಟಿ ಅಳಿಯ ರಾಜ್​ಕುಮಾರ್​ ಮಧ್ಯೆ ಜಟಾಪಟಿ‌ ನಡೆದಿತ್ತು. ಒಂದು ದಿನ ಬೆಳಗ್ಗೆ ರಾಜ್​ಕುಮಾರ್ ಯರಗಲ್ ಡಿಹೆಚ್​ಓ ಕುರ್ಚಿಯಲ್ಲಿ ಕೂತಿದ್ದರು.

ತಮ್ಮ ಕುರ್ಚಿಯಲ್ಲಿ ಕೂತಿದ್ದ ರಾಜ್​ಕುಮಾರ್ ಯರಗಲ್ ಅವರನ್ನು ಕಂಡಿದ್ದ ಜಯಶ್ರೀ ಕುರ್ಚಿ ಬಿಟ್ಟುಕೊಡುವಂತೆ ಹೇಳಿದ್ದರು. ಆದರೆ ರಾಜ್​ಕುಮಾರ್ ಯರಗಲ್ ಕುರ್ಚಿ ಬಿಟ್ಟು ಕೊಡಲಿಲ್ಲ. ಬದಲಿಗೆ “ಇಂದಿನಿಂದ ನಾನೇ ಡಿಹೆಚ್​ಓ ಸರ್ಕಾರದಿಂದ ಆದೇಶ ತಂದಿದ್ದೇನೆಂದು” ಹೇಳಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಕೆಲಕಾಲ ವಾಗ್ವಾದ ನಡೆದಿತ್ತು.

ಇದನ್ನೂ ಓದಿ: ನಿಧಿ ಆಸೆಗೆ ದೇವಸ್ಥಾನದ ಗರ್ಭಗುಡಿಯಲ್ಲಿನ ಲಿಂಗವನ್ನ ಒಡೆದ ಕಳ್ಳರು

ಬಳಿಕ ಜಯಶ್ರೀ ತಮ್ಮ ವರ್ಗಾವಣೆ ತಡೆಯಾಜ್ಞೆ ತರಲು ಹಿರಿಯ ಅಧಿಕಾರಿಗಳ ಭೇಟಿಗೆ ಬೆಂಗಳೂರಿಗೆ ಬಂದಿದ್ದಾರೆ. ಹೀಗೆ ಬಂದ ವೇಳೆ, ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಆಪ್ತನೆಂದು ರಾಮಯ್ಯ ಎಂಬಾತ ಪರಿಚಯನಾಗಿದ್ದನು. ರಾಮಯ್ಯ ತಾನು ಕೆಎಎಸ್ ಅಧಿಕಾರಿ ಎಂದು ಹೇಳಿಕೊಂಡಿದ್ದನು. ಆಗ ಜಯಶ್ರೀ ಆತನಿಗೆ ನಡೆದ ಸಂಗತಿ ಹೇಳಿದ್ದಾಳೆ. ನಂತರ ರಾಮಯ್ಯ ನಾನು ಸಮಸ್ಯೆ ಬಗೆ ಹರಿಸುತ್ತೇನೆ 50 ಸಾವಿರ ರೂ. ನೀಡಿ ವಿವಾದ ಸರಿಪಡಿಸುವುದಾಗಿ ಹೇಳಿದ್ದಾನೆ. ಬಳಿಕ ಹಂತ ಹಂತವಾಗಿ ಒಟ್ಟು 7 ಲಕ್ಷ ರೂ. ಹಣ ರಾಮಯ್ಯ ಪಡೆದಿದ್ದಾನೆ.

ನಂತರ ಆರೋಪಿ ರಾಮಯ್ಯ ಡಿಹೆಚ್​ಓ ಜಯಶ್ರೀ ಸಂಪರ್ಕಕ್ಕೆ ಸಿಕ್ಕಿಲ್ಲ. ಬಳಿಕ ಡಿಹೆಚ್​ಓ ಜಯಶ್ರೀ ವಂಚನೆ ಬಗ್ಗೆ ಬೆಂಗಳೂರು ಸಿಸಿಬಿ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us