AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚನೆ: ಆರೋಪಿ ಬಂಧನ

ಮುಖ್ಯಮಂತ್ರಿಗಳ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾವೇರಿಯ ರಾಘವೇಂದ್ರ ಎಂಬಾತನನ್ನು ಬಂಧಿಸಲಾಗಿದೆ. ಕೆಎಎಸ್ ಅಧಿಕಾರಿಯ ನೇಮಕಾತಿಗಾಗಿ ನಕಲಿ ಟಿಪ್ಪಣಿ ಸೃಷ್ಟಿಸಿ ವಂಚಿಸಿದ ಆರೋಪವಿದೆ. ಆರೋಪಿ ಹಲವು ಶಾಸಕರ ಪಿಎ ಆಗಿ ಕೆಲಸ ಮಾಡಿದ್ದ ಎಂದು ತಿಳಿದುಬಂದಿದೆ. ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

ಸಿಎಂ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚನೆ: ಆರೋಪಿ ಬಂಧನ
ಆರೋಪಿ ರಾಘವೇಂದ್ರ
Shivaprasad B
| Edited By: ವಿವೇಕ ಬಿರಾದಾರ|

Updated on: Feb 16, 2025 | 8:35 AM

Share

ಬೆಂಗಳೂರು, ಫೆಬ್ರವರಿ 16: ಮುಖ್ಯಮಂತ್ರಿಗಳ ಕಚೇರಿಯ (CM Office) ಟಿಪ್ಪಣಿ ನಕಲು ಮಾಡಿ ವಂಚಿಸಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ಮೂಲದ ರಾಘವೇಂದ್ರ ಬಂಧಿತ ಆರೀಪಿ. ಕೆಎಎಸ್​ ಅಧಿಕಾರಿಯೊಬ್ಬರಿಗೆ ಪೋಸ್ಟಿಂಗ್ ನೀಡುವಂತೆ ಆರೋಪಿ ರಾಘವೇಂದ್ರ, ಮುಖ್ಯಮತ್ರಿಗಳ ಕಚೇರಿ ಹೆಸರಿನಲ್ಲಿ ನಕಲಿ ಟಿಪ್ಪಣಿ ಸೃಷ್ಟಿಸಿದ್ದನು. ಈ ಬಗ್ಗೆ ವಿಧಾನಸೌಧದ ಸಚಿವಾಲಯ ದೂರು ನೀಡಿತ್ತು. ದೂರು ದಾಖಲಿಸಿಕೊಂಡು ತನಿಖೆ ನಡೆಸಿದ ವಿಧಾನಸೌಧ ಠಾಣೆ ಪೊಲೀಸರು ಆರೋಪಿ ರಾಘವೇಂದ್ರನನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿ ರಾಘವೇಂದ್ರ ಈ ಹಿಂದೆ ಹಲವು ಶಾಸಕರ ಬಳಿ ಪಿಎ ಆಗಿ ಕೆಲಸ ಮಾಡಿದ್ದನು ಎಂದು ತಿಳಿದುಬಂದಿದೆ. ಆರೋಪಿ ರಾಘ್ರವೇಂದ್ರ ವಿರುದ್ಧ ಪೋಸ್ಟಿಂಗ್ ಕೊಡಿಸೋದಾಗಿ ಹಣ ಪಡೆದು ವಂಚಿಸಿದ ಆರೋಪವೂ ಕೇಳಿಬಂದಿದೆ. ಸದ್ಯ ಪೊಲೀಸರು ಆರೋಪಿ ರಾಘವೇಂದ್ರನನ್ನ ವಿಚಾರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ