AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನಂತೆ ಇದ್ದುಕೊಂಡು ವೃದ್ಧೆಗೆ ‌ಕೋಟ್ಯಾಂತರ ರೂಪಾಯಿ ಮೋಸ; ಮುಂದೇನಾಯ್ತು?

ಅಮೆರಿಕದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ಮಹಿಳೆ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಪರಿಚಯನಾದ ವ್ಯಕ್ತಿಯು ಮಹಿಳೆಯ 2 ಕೋಟಿ ಮೌಲ್ಯದ ಆಸ್ತಿಯನ್ನು ನುಂಗಿಹಾಕಿದ್ದು, ಪೊಲೀಸರು ತನಿಖೆ ನಡೆಸಿ ಆಸ್ತಿಯನ್ನು ಮತ್ತೆ ಮಹಿಳೆ ಹೆಸರಿಗೆ ಮಾಡಿಸಿಕೊಟ್ಟಿದ್ದಾರೆ.

ಮಗನಂತೆ ಇದ್ದುಕೊಂಡು ವೃದ್ಧೆಗೆ ‌ಕೋಟ್ಯಾಂತರ ರೂಪಾಯಿ ಮೋಸ; ಮುಂದೇನಾಯ್ತು?
ವೃದ್ಧೆ ಮಣಿ ತಿರಮಲೈ ಮತ್ತು ಕನ್ನಯ್ಯ
TV9 Web
| Edited By: Rakesh Nayak Manchi|

Updated on:Aug 06, 2022 | 9:30 AM

Share

ಬೆಂಗಳೂರು: ಅಮೇರಿಕಾದಿಂದ ಬಂದ ವೃದ್ಧೆಗೆ ಮಗನಂತೆ ಇದ್ದುಕೊಂಡು ಕೊನೆಯಲ್ಲಿ ಕೋಟ್ಯಾಂತರ ರೂಪಾಯಿ ಮೋಸ ಮಾಡಿದ ಘಟನೆ ನಗರದ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರು ಹೆಣ್ಣು ಮಕ್ಕಳ ಜೊತೆ ಇದ್ದ ಮಣಿ ತಿರಮಲೈ ಬೆಂಗಳೂರಿಗೆ ಆಗಮಿಸಿದಾಗ ಒಂಟಿಯಾಗಿದ್ದರು. ಈ ವೇಳೆ ಬಿಹಾರ ಮೂಲದ ಕನ್ನಯ್ಯ ಎಂಬಾತನ ಪರಿಚಯವಾಗಿ ಆತ್ಮೀಯತೆ ಬೆಳೆಸಿಕೊಂಡಿದ್ದನು. ಹೀಗಾಗಿ ಕನ್ನಯ್ಯನನ್ನು ಮಣಿ ಅವರು ಮಗನೆಂದು ನಂಬಿದ್ದ ಮಣಿ ಬರೊಬ್ಬರಿ 2.6 ಕೋಟಿ ಮೌಲ್ಯದ ಆಸ್ತಿ ಖರೀದಿಸಿ ಅವನ ಹೆಸರಿಗೆ ಮಾಡಿಸಿ ಮೋಸ ಹೋಗಿದ್ದಾರೆ.

ವೈದ್ಯರಾಗಿರುವ ಇಬ್ಬರು ಹೆಣ್ಣುಮಕ್ಕಳೊಂದಿಗೆ ಅಮೆರಿಕಾದಲ್ಲಿ ನೆಲೆಸಿದ್ದ ಮಣಿ ತಿರಮಲೈ (79) ಅವರಿಗೆ ವಯಸ್ಸಾದ ಕಾಲದಲ್ಲಿ ಭಾರತದಲ್ಲಿ ಬಂದು ನೆಲೆಸಲು ತೀರ್ಮಾನಿಸಿದ್ದಾರೆ. ಈ ಹಿನ್ನಲೆ ಬೆಂಗಳೂರಿಗೆ ಬಂದ ಅವರಿಗೆ ಸರ್ವಿಸ್ ಅಪಾರ್ಟ್ಮೆಂಟ್ ನಡೆಸುತಿದ್ದ ಬಿಹಾರ ಮೂಲದ ಕನ್ನಯ್ಯ ಪರಿಚಯವಾಗುತ್ತದೆ. ಒಂಟಿಯಾಗಿದ್ದ ಮಣಿ ಅವರೊಂದಿಗೆ ಕನ್ನಯ್ಯ ಆತ್ಮೀಯತೆ ಬೆಳೆಸಿದ್ದನು. ಇದರಿಂದಾಗಿ ಮಣಿ ಅವರು ಕನ್ನಯ್ಯನನ್ನು ಮಗನಂತೆ ನೋಡಿಕೊಳ್ಳುತ್ತಿದ್ದರು. ಅಲ್ಲದೆ ಆತನ ಮೇಲಿನ ನಂಬಿಕೆ ಇಟ್ಟು ಬಿಟಿಎಂ ಲೇಔಟ್​ನಲ್ಲಿ ಬರೋಬ್ಬರಿಗೆ 2.6 ಕೋಟಿ ರೂಪಾಯಿಯ 4ನೇ ಹಂತದ ಕಟ್ಟಡ ಖರೀದಿ ಮಾಡುತ್ತಾರೆ. ಈ ನಡುವೆ ಮಣಿ ಅವರಿಗೆ ಕಾರಣಾಂತರಗಳಿಂದಾಗಿ ಮತ್ತೆ ಅಮೆರಿಕಾಕ್ಕೆ ಹೋಗುವ ಪ್ರಸಂಗ ಬಂದುಬಿಡುತ್ತದೆ.

ಮಣಿ ಅವರು ಅಮೆರಿಕಾಕ್ಕೆ ಹೊರಟಿರುವ ವೇಳೆ ಖರೀದಿ ಮಾಡಿದ ಆಸ್ತಿಯನ್ನು ಕನ್ನಯ್ಯ ತನ್ನ ಹೆಸರಿಗೆ ಬರೆಸಿಕೊಂಡಿದ್ದಾನೆ. ಅಮೇರಿಕಾದಿಂದ ವಾಪಾಸ್ ಬಂದಾಗ ವಾಪಸ್ ಕೊಡುವುದಾಗಿ ನಂಬಿಸಿ ತನ್ನ ಹೆಸರಿಗೆ ಆಸ್ತಿಯನ್ನು ಬರೆಸಿಕೊಂಡಿದ್ದಾನೆ. ಮಗನಂತೆ ಕಂಡಿದ್ದ ವೃದ್ಧೆ ಆತನ ಮಾತು ನಂಬಿ ಕೋಟಿ ಕೋಟಿ ಹಣ, ಆಸ್ತಿ ಆತನಿಗೆ ವರ್ಗಾ ಮಾಡಿ ಅಮೇರಿಕಾ ತೆರಳಿದ್ದಾರೆ. ಒಂದು ತಿಂಗಳ ಬಳಿಕ ಭಾರತಕ್ಕೆ ವಾಪಾಸ್ ಆದಾಗ ಕನ್ನಯ್ಯ ವರಸೆ ಬದಲಾಯಿಸಿದ್ದು, ಆಸ್ತಿ ನೀಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ,

ನಂಬಿ ಮೋಸ ಹೋದ ಹಿನ್ನೆಲೆ ಮಣಿ ಅವರು ಕೂಡಲೇ ಹುಳಿಮಾವು ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಕನ್ನಯ್ಯನಿಗೆ ನೋಟಿಸ್ ಜಾರಿ ಮಾಡಿ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಅದರಂತೆ  ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬ ಅವರು ಆಸ್ತಿಯನ್ನು ಕನ್ನಯ್ಯನ ಹೆಸರಿನಿಂದ ಮಣಿ ಹೆಸರಿಗೆ ಮಾಡಿಸಿಕೊಟ್ಟಿದ್ದಾರೆ. ಇದಾದ ನಂತರ ಪೊಲೀಸರು ಮುಂದೆ ಕಣ್ಣೀರಿಟ್ಟ ವೃದ್ಧೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:28 am, Sat, 6 August 22

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ