AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime Roundup: ಚಿನ್ನಾಭರಣ ದೋಚಿ ರಾಜಸ್ಥಾನಕ್ಕೆ ಪರಾರಿಯಾದ ವ್ಯಾಪಾರಿ: ಒಡವೆ ಕಳೆದುಕೊಂಡವರ ಗೋಳಾಟ

ಚೈನಾರಾಮ್ ಎಂಬಾತ 100ಕ್ಕೂ ಹೆಚ್ಚು ಜನರ, ₹ 5 ಕೋಟಿಗೂ ಹೆಚ್ಚು ಮೌಲ್ಯದ ಒಡವೆಗಳನ್ನು ದೋಚಿಕೊಂಡು ರಾಜಸ್ಥಾನಕ್ಕೆ ಪರಾರಿಯಾಗಿದ್ದಾನೆ ಎಂದು ದೂರಲಾಗಿದೆ.

Crime Roundup: ಚಿನ್ನಾಭರಣ ದೋಚಿ ರಾಜಸ್ಥಾನಕ್ಕೆ ಪರಾರಿಯಾದ ವ್ಯಾಪಾರಿ: ಒಡವೆ ಕಳೆದುಕೊಂಡವರ ಗೋಳಾಟ
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 23, 2021 | 7:45 PM

Share

ನೆಲಮಂಗಲ: ಸುಮಾರು ಇಪ್ಪತ್ತು ವರ್ಷಗಳಿಂದ ಚಿನ್ನಾಭರಣ ಅಂಗಡಿಯಲ್ಲಿ ಲೇವಾದೇವಿ ವ್ಯವಹಾರ ಮಾಡುತ್ತಿದ್ದ ವ್ಯಾಪಾರಿಯೊಬ್ಬ ನಂಬಿದ್ದವರಿಗೆ ಮೋಸ ಮಾಡಿ ಓಡಿಹೋಗಿದ್ದಾನೆ ಎಂದು ಚಿನ್ನ ಅಡ ಇಟ್ಟಿದ್ದ ಜನರು ದೂರಿದ್ದಾರೆ. ಬೆಂಗಳೂರು ಉತ್ತರ ತಾಲ್ಲೂಕಿನ ಚಿಕ್ಕಬಿದರಕಲ್ಲು ಗ್ರಾಮದಲ್ಲಿ ಕೃಷ್ಣ ಜ್ಯುವೆಲರ್ಸ್​ ಹೆಸರಿನ ದೊಡ್ಡ ಅಭರಣ ಅಂಗಡಿ ಇಟ್ಟುಕೊಂಡಿದ್ದ ಚೈನಾರಾಮ್ ಎಂಬಾತ 100ಕ್ಕೂ ಹೆಚ್ಚು ಜನರ, ₹ 5 ಕೋಟಿಗೂ ಹೆಚ್ಚು ಮೌಲ್ಯದ ಒಡವೆಗಳನ್ನು ದೋಚಿಕೊಂಡು ರಾಜಸ್ಥಾನಕ್ಕೆ ಪರಾರಿಯಾಗಿದ್ದಾನೆ ಎಂದು ದೂರಲಾಗಿದೆ.

ಚೈನಾರಾಮ್ ಸೇಟು ಬಗ್ಗೆ ಜನರಲ್ಲಿ ವಿಶ್ವಾಸ ಕುದುರಿತ್ತು. ಎಷ್ಟೋ‌ ಹೆಣ್ಣುಮಕ್ಕಳು ತಮ್ಮ ಮನೆಯವರಿಗೆ ತಿಳಿಯದಂತೆ ಈತನ ಬಳಿ ಲೇವಾದೇವಿ ವ್ಯವಹಾರ ಮಾಡಿದ್ದರು. ತಿಂಗಳ ಕಂತಿನಲ್ಲಿ ಹಣ ಕಟ್ಟಿಸಿಕೊಂಡು ಆಭರಣ ಕೊಡುವ ಯೋಜನೆಯನ್ನೂ ಚೈನಾರಾಮ್ ಆರಂಭಿಸಿದ್ದ. ಇದನ್ನು ನಂಬಿದ್ದ ನೂರಾರು ಜನರು ಇವನ ಬಳಿ ಚೀಟಿ ಹಾಕಿದ್ದರು. ಮದುವೆಗೆಂದು ಕೂಡಿಟ್ಟಿದ್ದ ಲಕ್ಷಾಂತರ ರುಪಾಯಿ ಹಣವನ್ನು ಈತನಿಗೆ ಕೊಟ್ಟಿದ್ದರು. ಚೈನಾರಾಮ್ ಓಡಿಹೋದ ಕಾರಣ, ಈತನಿಂದ ಮೋಸ ಹೋಗಿರುವ ಅದೆಷ್ಟೋ ಕುಟುಂಬಗಳು ಸದ್ಯ ಕಣ್ಣೀರಲ್ಲಿ ಕೈ ತೊಳೆಯುತ್ತಿವೆ.

ಬೆಂಗಳೂರಿನಿಂದ ಹೋಗುವ ಮುನ್ನ ತನ್ನ ಮಕ್ಕಳ ಸ್ಕೂಲ್ ವಾಟ್ಸ್‌ಆಪ್ ಗ್ರೂಪ್‌ನಲ್ಲಿ ನಾವು ರಾಜಸ್ಥಾನಕ್ಕೆ ಹೋಗ್ತಿದ್ದಿವಿ ಎಂದು ಮೆಸೇಜ್ ಮಾಡಿ ಲೆಫ್ಟ್ ಆಗಿದ್ದ. ಸದ್ಯ ಈತನ‌ ಬಳಿ ಹಣ ಹೂಡಿಕೆ ಮಾಡಿರುವವರು ಪ್ರತಿದಿನ ಈತನನ್ನು ಎದುರು ನೋಡುತ್ತಿದ್ದಾರೆ. ಜನರು ಹೂಡಿಕೆ ಮಾಡಿದ್ದ ಹಣವನ್ನು ಈತ ದುಶ್ಚಟಗಳಿಗೆ ದಾಸನಾಗಿ ಕಳೆದುಕೊಂಡಿದ್ದಾನೆ ಎಂದು ಕೆಲವರು ಶಂಕಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮಾದಕವಸ್ತು ಪೂರೈಕೆಗೆ ಯತ್ನಿಸಿದ ಮೂವರ ಸೆರೆ ಬೆಂಗಳೂರು: ಮಾದಕವಸ್ತು ಸರಬರಾಜು ಮಾಡಲು ಯತ್ನಿಸಿದ ಮೂವರನ್ನು ಬೆಂಗಳೂರಿನ ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ ರಾಹುಲ್, ತುರೇ ಮುಸ್ತಫಾ, ಶಿಹಾಬ್ ಬಂಧಿತರು. ಇವರಿಂದ ₹ 2.5 ಲಕ್ಷ ಮೌಲ್ಯದ 4 ಕೆಜಿ ಗಾಂಜಾ, 23 ಗ್ರಾಂ ಎಂಡಿಎಂ, 12 ಗ್ರಾಂ ಎಕ್ಸ್​ಟಸಿ ಮಾತ್ರೆಗಳು ಮತ್ತು ಕೃತ್ಯಕ್ಕೆ ಬಳಸಿದ ಕಾರು ವಶಪಡಿಸಿಕೊಳ್ಳಲಾಗಿದೆ.

ಕಿರುಕುಳ ಆರೋಪ: ಲೆಕ್ಕಾಧಿಕಾರಿ ಆತ್ಮಹತ್ಯೆಗೆ ಯತ್ನ ಮಡಿಕೇರಿ: ವಾಟರ್‌ಮೆನ್‌ಗಳ ವಿರುದ್ಧ ಕಿರುಕುಳ ಆರೋಪ ಹೊರಿಸಿ, ಗ್ರಾಮ ಪಂಚಾಯಿತಿ ಲೆಕ್ಕಾಧಿಕಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯಲ್ಲಿ ನಡೆದಿದೆ. ಆತ್ಮಹತ್ಯೆ ಯತ್ನಕ್ಕೂ ಮುನ್ನ ವಿಡಿಯೊ ಮಾಡಿದ್ದಾರೆ. ವಾಟರ್‌ಮೆನ್‌ಗಳು ಕಿರುಕುಳ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಸ್ವಸ್ಥ ಹರಿಣಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: Crime News: ಬಾಲಕನ ಕತ್ತು ಕೊಯ್ದು, ಕೈ-ಕಾಲು ಕತ್ತರಿಸಿ, ಕಾಡಿನಲ್ಲಿ ಬಿಸಾಡಿದ ಗೆಳೆಯರು ಇದನ್ನೂ ಓದಿ: Bengaluru Crime: ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಶುರುವಾದ ಜಗಳ ಸಾವಿನಲ್ಲಿ ಅಂತ್ಯ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ