AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ್ಟಮರ್ ಕೇರ್​ ಹೆಸರಿನಲ್ಲಿ ಪಾಸ್​ವರ್ಡ್​ ಪಡೆದು ದಾವಣಗೆರೆ ವ್ಯಕ್ತಿಗೆ ವಂಚನೆ; ಬ್ಯಾಂಕ್​ನಿಂದ 13.45 ಲಕ್ಷ ರೂಪಾಯಿ ಡ್ರಾ

ಕೇರಳ‌ ಮೂಲದ ಕೃಷ್ಣನ್ ಉನ್ನಿತನ್ ಆನ್​ಲೈನ್ ಬ್ಯಾಂಕಿಂಗ್ ಪಾಸ್ ವರ್ಡ್ ಬ್ಲಾಕ್ ಆಗಿದನ್ನು ಸರಿ ಪಡಿಸಲು ಕಸ್ಟಮರ್ ಕೇರ್​ಗೆ ಪೋನ್ ಮಾಡಿ ಎಲ್ಲಾ ವಿವರ ನೀಡಿದ್ದಾರೆ. ಇದನ್ನೇ ಬಂಡವಾಳವಾಗಿಸಿಕೊಂಡ ಕಸ್ಟಮರ್​ ಕೇರ್​ ಹೆಸರಿನ ವ್ಯಕ್ತಿ ಬುಧವಾರ ಹಂತ ಹಂತವಾಗಿ ಕೃಷ್ಣನ್ ಬ್ಯಾಂಕ್​ ಖಾತೆಯಿಂದ 13.45 ಲಕ್ಷ ರೂಪಾಯಿ ಡ್ರಾ ಮಾಡಿ, ವಂಚನೆ ಮಾಡಿದ್ದಾರೆ.

ಕಸ್ಟಮರ್ ಕೇರ್​ ಹೆಸರಿನಲ್ಲಿ ಪಾಸ್​ವರ್ಡ್​ ಪಡೆದು ದಾವಣಗೆರೆ ವ್ಯಕ್ತಿಗೆ ವಂಚನೆ; ಬ್ಯಾಂಕ್​ನಿಂದ 13.45 ಲಕ್ಷ ರೂಪಾಯಿ ಡ್ರಾ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 09, 2021 | 12:23 PM

Share

ದಾವಣಗೆರೆ: ಕಸ್ಟಮರ್ ಕೇರ್​ ಹೆಸರಿನಲ್ಲಿ ಬ್ಯಾಂಕ್​ನ ಪಾಸ್​ವರ್ಡ್​ ಪಡೆದು ವಂಚನೆ ಮಾಡಿದ ಘಟನೆಯೊಂದು ದಾವಣಗೆರೆ ಜಿಲ್ಲೆ ಹೊನ್ನಾಳಿ ಬಳಿ ನಡೆದಿದೆ. ಕೇರಳ‌ ಮೂಲದ ಕೃಷ್ಣನ್ ಉನ್ನಿತನ್ ಆನ್​ಲೈನ್ ಬ್ಯಾಂಕಿಂಗ್ ಪಾಸ್ ವರ್ಡ್ ಬ್ಲಾಕ್ ಆಗಿದನ್ನು ಸರಿ ಪಡಿಸಲು ಕಸ್ಟಮರ್ ಕೇರ್​ಗೆ ಪೋನ್ ಮಾಡಿ ಎಲ್ಲಾ ವಿವರ ನೀಡಿದ್ದಾರೆ. ಇದನ್ನೇ ಬಂಡವಾಳವಾಗಿಸಿಕೊಂಡ ಕಸ್ಟಮರ್​ ಕೇರ್​ ಹೆಸರಿನ ವ್ಯಕ್ತಿ ಬುಧವಾರ ಹಂತ ಹಂತವಾಗಿ ಕೃಷ್ಣನ್ ಬ್ಯಾಂಕ್​ ಖಾತೆಯಿಂದ 13.45 ಲಕ್ಷ ರೂಪಾಯಿ ಡ್ರಾ ಮಾಡಿ, ವಂಚನೆ ಮಾಡಿದ್ದಾರೆ.

ಕೇರಳ‌ ಮೂಲದ ಕೃಷ್ಣನ್ ಸದ್ಯ ದಾವಣಗೆರೆಯಲ್ಲಿ ವಾಸವಾಗಿದ್ದು, ಕೇರಳದ ಅಲಪುಳ ಜಿಲ್ಲೆಯ ನಂಗಿಯಾರ್ಕುಲಂಗರ ನಗರದ ಸೌತ್ ಇಂಡಿಯನ್ ಬ್ಯಾಂಕ್​ನಲ್ಲಿ ಎಸ್​ಬಿ ಖಾತೆ ಹೊಂದಿದ್ದಾರೆ. ಬುಧವಾರ ಕಸ್ಟಮರ್​ ಕೇರ್​ ಜತೆ ಮಾತನಾಡಿದ ಕೃಷ್ಣನ್​ಗೆ ಮರುದಿನ ಅಂದರೆ ಗುರುವಾರ ಮತ್ತೆ ವ್ಯಕ್ತಿಯೊಬ್ಬ ಅದೇ ಬ್ಯಾಂಕ್ ಹೆಸರು ಹೇಳಿಕೊಂಡು ಪೋನ್ ಮಾಡಿದ್ದು, ನೀವು ಹೌಸಿಂಗ್ ಲೋನ್​ಗೆ ಅರ್ಜಿ ಹಾಕಿದ್ದೀರಾ ಎಂದು ಕೇಳಿದ್ದಾನೆ. ಇಲ್ಲಾ ಎಂದಾಗ ನಿಮ್ಮ ಎಸ್​ಬಿ ಐಮಿರರ್ ಪ್ಲಸ್ ಅಪ್ಲಿಕೇಶನ್ ಯಾರೋ ಬಳಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಆ ವ್ಯಕ್ತಿಯ ಮಾತನ್ನು ಕೇಳಿದ ಕೃಷ್ಣನ್ ಉನ್ನಿತನ್ ಬ್ಯಾಂಕ್​ನ ಖಾತೆಯನ್ನು ಪರಿಶೀಲನೆ ಮಾಡಿದ್ದಾರೆ. ಆಗ ಖಾತೆಯಲ್ಲಿ 13.45 ಲಕ್ಷ ರೂಪಾಯಿ ಕಡಿತಗೊಂಡಿದ್ದ ವಿಷಯ ಬೆಳಕಿಗೆ ಬಂದಿದೆ. ಸದ್ಯ ಈ ಬಗ್ಗೆ ದಾವಣಗೆರೆ ಸಿಇನ್ ಪೊಲೀಸ್ ಠಾಣೆಗೆ ಎಸ್ ಕೃಷ್ಣನ್ ದೂರು ಸಲ್ಲಿಸಿದ್ದು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಯೆಸ್ ಬ್ಯಾಂಕ್​ಗೆ 11 ಆರೋಪಿಗಳಿಂದ 712 ಕೋಟಿ ರೂ ವಂಚನೆ ಪ್ರತಿಷ್ಠಿತ ಖಾಸಗಿ ಬ್ಯಾಂಕ್​ಗಳಲ್ಲಿ ಒಂದಾದ ಯೆಸ್ ಬ್ಯಾಂಕ್​ಗೆ ಬರೋಬ್ಬರಿ 712 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣದಲ್ಲಿ 11 ಆರೋಪಿಗಳ ವಿರುದ್ಧ ಬೆಂಗಳೂರಿನ ಕಬ್ಬನ್​ಪಾರ್ಕ್ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ. ನಿತೇಶ್ ರಿಯಲ್ ಎಸ್ಟೇಟ್ ಕಂಪನಿಗಳ (Nitesh Real Estate) ಹೆಸರಿನಲ್ಲಿ ಸಾಲ ಪಡೆದು ಮರುಪಾವತಿ ಮಾಡದೆ, ಒಪ್ಪಂದ ಉಲ್ಲಂಘಿಸಿದ ಆರೋಪ ಈ 11 ಮಂದಿಯ ವಿರುದ್ಧ ದಾಖಲಾಗಿದೆ.

ಎಲ್ಲ 11 ಮಂದಿ ಆರೋಪಿಗಳು 2016 ರಿಂದ ಯೆಸ್ ಬ್ಯಾಂಕ್ ನಲ್ಲಿ (Yes Bank) ವ್ಯವಹಾರ ಮಾಡುತ್ತಿದ್ದರು. ಕಂಪನಿಯ ಹೆಸರಿನಲ್ಲಿ ವಿವಿಧ ಯೋಜನೆಗಳಿಗೆಂದು ಸಾಲ ಪಡೆದಿದ್ದರು. ಮುಂದೆ 2019ರ ವರೆಗೆ ಲೋನ್ ಕಟ್ಟಿದ್ದ ಆರೋಪಿಗಳು 2019 ಡಿಸೆಂಬರ್ ನಿಂದ ಲೋನ್ ಮರುಪಾವತಿ ಮಾಡದೇ ಯಾಮಾರಿಸಿದ್ದಾರೆ. ಈಗ ಕೋವಿಡ್ ಹಿನ್ನೆಲೆ ಹಣ ಮರುಪಾವತಿ ಮಾಡಲು ಸಾಧ್ಯವಿಲ್ಲ ಎಂದೂ ಆರೋಪಿಗಳು ಹೇಳುತ್ತಿದ್ದಾರೆ.

ಕಳೆದೆರೆಡು ವರ್ಷದಿಂದ ಇಎಂಐ ಮರು ಪಾವತಿ ಮಾಡದ ಹಿನ್ನೆಲೆ ಕಸ್ತೂರ ಬಾ ರಸ್ತೆಯಲ್ಲಿರುವ ಯೆಸ್ ಬ್ಯಾಂಕ್ ಮ್ಯಾನೇಜರ್ 11 ಮಂದಿ ಆರೋಪಿಗಳು ವಿರುದ್ಧ ದೂರು ನೀಡಿದ್ದಾರೆ. ಯೆಸ್ ಬ್ಯಾಂಕ್ ಮ್ಯಾನೇಜರ್ ಆಶೀಶ್ ವಿನೋದ್ ಜೋಶಿ ಇಂದು ಕಬ್ಬನ್ ಪಾರ್ಕ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಇದನ್ನೂ ಓದಿ: ಯೆಸ್ ಬ್ಯಾಂಕ್​ಗೆ 11 ಆರೋಪಿಗಳಿಂದ 712 ಕೋಟಿ ರೂ ವಂಚನೆ: ಕಬ್ಬನ್​ಪಾರ್ಕ್ ಠಾಣೆಯಲ್ಲಿ ಎಫ್​ಐಆರ್ ದಾಖಲು

ಬಿಬಿಎಂಪಿ ಜಾಗವನ್ನೇ ಅಡವಿಟ್ಟು ಬ್ಯಾಂಕ್​ನಲ್ಲಿ ಸಾಲ ಎತ್ತಿ ಭಾರೀ ವಂಚನೆ! ಏನಿದು ಮಹಾವೀರ್ ಜೈನ್ ಆಸ್ಪತ್ರೆಯ ವಂಚನೆ ಪುರಾಣ?

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!