AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತ ಬಸ್ ಫುಲ್ ರಶ್! ಪ್ರಯಾಣಿಕರ ಸರಿದೂಗಿಸಲು 500 ಕೋಟಿ ರೂ ಬಸ್​​​ಗಳ ಖರೀದಿಗೆ ಹಣ ಬಿಡುಗಡೆ ಮಾಡಿದ ಸಿದ್ದರಾಮಯ್ಯ ಸರ್ಕಾರ

Free Bus Shakti scheme: ರಾಜ್ಯ ರಸ್ತೆ ಸಾರಿಗೆ ಸುಮಗಗೊಳಿಸುವ ನಿಟ್ಟಿನಲ್ಲಿ ಹೊಸ ಬಸ್ ಖರೀದಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅನುದಾನ ನೀಡಿದೆ. ಬರೋಬ್ಬರಿ 500 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿ, ಆದೇಶ ಮಾಡಿದೆ. ನಾಲ್ಕು ಸಾರಿಗೆ ನಿಗಮಗಳಿಗೆ 500 ಕೋಟಿ ರೂಪಾಯಿ ಅನುದಾನ ನೀಡಿದೆ. ನೂತನ ಬಸ್ ಖರೀದಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸಾರಿಗೆ ನಿಗಮಗಳಿಗೆ ಸರ್ಕಾರ ಸೂಚನೆ ನೀಡಿದೆ.

ಉಚಿತ ಬಸ್ ಫುಲ್ ರಶ್! ಪ್ರಯಾಣಿಕರ ಸರಿದೂಗಿಸಲು 500 ಕೋಟಿ ರೂ ಬಸ್​​​ಗಳ ಖರೀದಿಗೆ ಹಣ ಬಿಡುಗಡೆ ಮಾಡಿದ ಸಿದ್ದರಾಮಯ್ಯ ಸರ್ಕಾರ
500 ಕೋಟಿ ರೂ ಬಸ್​​​ಗಳ ಖರೀದಿಗೆ ಹಣ ಬಿಡುಗಡೆ
ಪ್ರಸನ್ನ ಗಾಂವ್ಕರ್​
| Edited By: |

Updated on: Aug 21, 2023 | 1:01 PM

Share

ಬೆಂಗಳೂರು, ಆಗಸ್ಟ್​ 21: ರಾಜ್ಯ ರಸ್ತೆ ಸಾರಿಗೆ ಸುಮಗಗೊಳಿಸುವ ನಿಟ್ಟಿನಲ್ಲಿ ಹೊಸ ಬಸ್ (Bus) ಖರೀದಿಗೆ ಸಿದ್ದರಾಮಯ್ಯ ( Siddaramaiah) ನೇತೃತ್ವದ ಸರ್ಕಾರ ಅನುದಾನ ನೀಡಿದೆ. ಬರೋಬ್ಬರಿ 500 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿ, ಆದೇಶ ಮಾಡಿದೆ. ನಾಲ್ಕು ಸಾರಿಗೆ ನಿಗಮಗಳಿಗೆ 500 ಕೋಟಿ ರೂಪಾಯಿ ಅನುದಾನ ನೀಡಿದೆ. ನೂತನ ಬಸ್ ಖರೀದಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸಾರಿಗೆ ನಿಗಮಗಳಿಗೆ ಸರ್ಕಾರ ಸೂಚನೆ ನೀಡಿದೆ.

ಕಾಂಗ್ರೆಸ್​​ ಅಧಿಪತ್ಯದ ಹೊಸ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ತಾನು ಭರವಸೆ ನಿಡಿದ್ದ ಗ್ಯಾರಂಟಿಗಳ ಪೈಕಿ ಒಂದನ್ನು ಜೂನ್ ತಿಂಗಳಲ್ಲಿ ಜಾರಿಗೆ ತಂದಿತು. ಮಹಿಳೆಯರಿಗೆ ಉಚಿತ ಬಸ್​​ ಸೇವೆಯಾದ ಶಕ್ತಿ ಯೋಜನೆಯನ್ನು (Free Bus Shakti scheme) ಜಾರಿಗೊಳಿಸಿತು. ಬಳಿಕ ಬಸ್​ಗಳು ಮಹಿಳಾ ಪ್ರಯಾಣಿಕರಿಂದ ತುಂಬಿತುಳುಕಿ ಫುಲ್ ಆಗತೊಡಗಿತ್ತು. ಇದರಿಂದ ರಾಜ್ಯದೆಲ್ಲೆಡೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿ ಸಮಯಕ್ಕೆ ಸರಿಯಾಗಿ ತಮಗೆ ಬಸ್​​ಗಳು ಸಿಗುತ್ತಿಲ್ಲ ಎಂದು ರೋಡಿಗಿಳಿದು, ಪ್ರತಿಭಟನೆ ಮಾಡಿದ್ದರು. ಈಗ ಹೊಸ ಬಸ್ ಖರೀದಿಯಿಂದ ಸಮಸ್ಯೆ ನಿವಾರಣೆಯಾಗುತ್ತಾ? ಕಾದು ನೊಡಬೇಕಿದೆ.

ಈ ಕುರಿತಾದ ಸರ್ಕಾರದ ಅಧಿಕೃತ ಆದೇಶ ಹೀಗಿದೆ:

ಜುಲೈ-2023ರಲ್ಲಿ ಘೋಷಣೆಯಾಗಿರುವ 2023-24ನೇ ಸಾಲಿನ ಆಯವ್ಯಯದಲ್ಲಿ ಸಾರಿಗೆ ಇಲಾಖೆಗೆ ವಿವಿಧ ಕಾರ್ಯಕ್ರಮ/ಯೋಜನೆಗಳಿಗೆ ಒದಗಿಸಿರುವ ಅನುದಾನದ ಉದ್ದೇಶವನ್ನು ನಮೂದಿಸಿ, ಅನುಸರಿಸಬೇಕಾದ ಪ್ರಕ್ರಿಯೆ ಮುಂತಾದ ವಿವರಗಳನ್ನು ನೀಡಿರುವಂತೆ, 2023-24ನೇ ಸಾಲಿನ ವಿಶೇಷ ಬಂಡವಾಳ ನೆರವು ಅಡಿ ನಿಗಮವಾರು ನಾಲ್ಕು, ಸಾರಿಗೆ ಸಂಸ್ಥೆಗಳಿಗೆ ಒಟ್ಟು ರೂ. 50,000 ಲಕ್ಷಗಳ ಅನುದಾನವನ್ನು ಈ ಕೆಳಕಂಡಂತೆ ಒದಗಿಸಲಾಗಿದ್ದು, ಸದರಿ ಅನುದಾನಕ್ಕನುಗುಣವಾಗಿ ನಿಗಮಗಳು ಹೊಸ ಬಸ್ ಖರೀದಿಗಾಗಿ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸುವಂತೆ ತಿಳಿಸಲು ನಿರ್ದೇಶಿಸಲಾಗಿದೆ.

ನಿಗಮಗಳು ಮತ್ತು ಹಂಚಿಕೆಯಾದ ಅನುದಾನದ ವಿವರ ಹೀಗಿದೆ: ಕ.ರಾ.ರ.ಸಾ. ನಿಗಮಕ್ಕೆ 10,000 ಲಕ್ಷ ರೂ, ಬೆಂ.ಮ.ಸಾ.ಸಂಸ್ಥೆಗೆ 15,000 ಲಕ್ಷ ರೂ, ವಾ.ಕ.ರ.ಸಾ. ನಿಗಮಕ್ಕೆ 15,000 ಲಕ್ಷ ರೂ ಮತ್ತು ಕ.ಕ.ರ.ಸಾ. ನಿಗಮಕ್ಕೆ 10,000 ಲಕ್ಷ ರೂ ಸೇರಿದಂತೆ ಒಟ್ಟಾರೆಯಾಗಿ 50,000 ಲಕ್ಷ ರೂ ಬಿಡುಗಡೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ