ಉಚಿತ ಬಸ್ ಫುಲ್ ರಶ್! ಪ್ರಯಾಣಿಕರ ಸರಿದೂಗಿಸಲು 500 ಕೋಟಿ ರೂ ಬಸ್​​​ಗಳ ಖರೀದಿಗೆ ಹಣ ಬಿಡುಗಡೆ ಮಾಡಿದ ಸಿದ್ದರಾಮಯ್ಯ ಸರ್ಕಾರ

Free Bus Shakti scheme: ರಾಜ್ಯ ರಸ್ತೆ ಸಾರಿಗೆ ಸುಮಗಗೊಳಿಸುವ ನಿಟ್ಟಿನಲ್ಲಿ ಹೊಸ ಬಸ್ ಖರೀದಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅನುದಾನ ನೀಡಿದೆ. ಬರೋಬ್ಬರಿ 500 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿ, ಆದೇಶ ಮಾಡಿದೆ. ನಾಲ್ಕು ಸಾರಿಗೆ ನಿಗಮಗಳಿಗೆ 500 ಕೋಟಿ ರೂಪಾಯಿ ಅನುದಾನ ನೀಡಿದೆ. ನೂತನ ಬಸ್ ಖರೀದಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸಾರಿಗೆ ನಿಗಮಗಳಿಗೆ ಸರ್ಕಾರ ಸೂಚನೆ ನೀಡಿದೆ.

ಉಚಿತ ಬಸ್ ಫುಲ್ ರಶ್! ಪ್ರಯಾಣಿಕರ ಸರಿದೂಗಿಸಲು 500 ಕೋಟಿ ರೂ ಬಸ್​​​ಗಳ ಖರೀದಿಗೆ ಹಣ ಬಿಡುಗಡೆ ಮಾಡಿದ ಸಿದ್ದರಾಮಯ್ಯ ಸರ್ಕಾರ
500 ಕೋಟಿ ರೂ ಬಸ್​​​ಗಳ ಖರೀದಿಗೆ ಹಣ ಬಿಡುಗಡೆ
Edited By: ಸಾಧು ಶ್ರೀನಾಥ್​

Updated on: Aug 21, 2023 | 1:01 PM

ಬೆಂಗಳೂರು, ಆಗಸ್ಟ್​ 21: ರಾಜ್ಯ ರಸ್ತೆ ಸಾರಿಗೆ ಸುಮಗಗೊಳಿಸುವ ನಿಟ್ಟಿನಲ್ಲಿ ಹೊಸ ಬಸ್ (Bus) ಖರೀದಿಗೆ ಸಿದ್ದರಾಮಯ್ಯ ( Siddaramaiah) ನೇತೃತ್ವದ ಸರ್ಕಾರ ಅನುದಾನ ನೀಡಿದೆ. ಬರೋಬ್ಬರಿ 500 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿ, ಆದೇಶ ಮಾಡಿದೆ. ನಾಲ್ಕು ಸಾರಿಗೆ ನಿಗಮಗಳಿಗೆ 500 ಕೋಟಿ ರೂಪಾಯಿ ಅನುದಾನ ನೀಡಿದೆ. ನೂತನ ಬಸ್ ಖರೀದಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸಾರಿಗೆ ನಿಗಮಗಳಿಗೆ ಸರ್ಕಾರ ಸೂಚನೆ ನೀಡಿದೆ.

ಕಾಂಗ್ರೆಸ್​​ ಅಧಿಪತ್ಯದ ಹೊಸ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ತಾನು ಭರವಸೆ ನಿಡಿದ್ದ ಗ್ಯಾರಂಟಿಗಳ ಪೈಕಿ ಒಂದನ್ನು ಜೂನ್ ತಿಂಗಳಲ್ಲಿ ಜಾರಿಗೆ ತಂದಿತು. ಮಹಿಳೆಯರಿಗೆ ಉಚಿತ ಬಸ್​​ ಸೇವೆಯಾದ ಶಕ್ತಿ ಯೋಜನೆಯನ್ನು (Free Bus Shakti scheme) ಜಾರಿಗೊಳಿಸಿತು. ಬಳಿಕ ಬಸ್​ಗಳು ಮಹಿಳಾ ಪ್ರಯಾಣಿಕರಿಂದ ತುಂಬಿತುಳುಕಿ ಫುಲ್ ಆಗತೊಡಗಿತ್ತು. ಇದರಿಂದ ರಾಜ್ಯದೆಲ್ಲೆಡೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿ ಸಮಯಕ್ಕೆ ಸರಿಯಾಗಿ ತಮಗೆ ಬಸ್​​ಗಳು ಸಿಗುತ್ತಿಲ್ಲ ಎಂದು ರೋಡಿಗಿಳಿದು, ಪ್ರತಿಭಟನೆ ಮಾಡಿದ್ದರು. ಈಗ ಹೊಸ ಬಸ್ ಖರೀದಿಯಿಂದ ಸಮಸ್ಯೆ ನಿವಾರಣೆಯಾಗುತ್ತಾ? ಕಾದು ನೊಡಬೇಕಿದೆ.

ಈ ಕುರಿತಾದ ಸರ್ಕಾರದ ಅಧಿಕೃತ ಆದೇಶ ಹೀಗಿದೆ:

ಜುಲೈ-2023ರಲ್ಲಿ ಘೋಷಣೆಯಾಗಿರುವ 2023-24ನೇ ಸಾಲಿನ ಆಯವ್ಯಯದಲ್ಲಿ ಸಾರಿಗೆ ಇಲಾಖೆಗೆ ವಿವಿಧ ಕಾರ್ಯಕ್ರಮ/ಯೋಜನೆಗಳಿಗೆ ಒದಗಿಸಿರುವ ಅನುದಾನದ ಉದ್ದೇಶವನ್ನು ನಮೂದಿಸಿ, ಅನುಸರಿಸಬೇಕಾದ ಪ್ರಕ್ರಿಯೆ ಮುಂತಾದ ವಿವರಗಳನ್ನು ನೀಡಿರುವಂತೆ, 2023-24ನೇ ಸಾಲಿನ ವಿಶೇಷ ಬಂಡವಾಳ ನೆರವು ಅಡಿ ನಿಗಮವಾರು ನಾಲ್ಕು, ಸಾರಿಗೆ ಸಂಸ್ಥೆಗಳಿಗೆ ಒಟ್ಟು ರೂ. 50,000 ಲಕ್ಷಗಳ ಅನುದಾನವನ್ನು ಈ ಕೆಳಕಂಡಂತೆ ಒದಗಿಸಲಾಗಿದ್ದು, ಸದರಿ ಅನುದಾನಕ್ಕನುಗುಣವಾಗಿ ನಿಗಮಗಳು ಹೊಸ ಬಸ್ ಖರೀದಿಗಾಗಿ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸುವಂತೆ ತಿಳಿಸಲು ನಿರ್ದೇಶಿಸಲಾಗಿದೆ.

ನಿಗಮಗಳು ಮತ್ತು ಹಂಚಿಕೆಯಾದ ಅನುದಾನದ ವಿವರ ಹೀಗಿದೆ: ಕ.ರಾ.ರ.ಸಾ. ನಿಗಮಕ್ಕೆ 10,000 ಲಕ್ಷ ರೂ, ಬೆಂ.ಮ.ಸಾ.ಸಂಸ್ಥೆಗೆ 15,000 ಲಕ್ಷ ರೂ, ವಾ.ಕ.ರ.ಸಾ. ನಿಗಮಕ್ಕೆ 15,000 ಲಕ್ಷ ರೂ ಮತ್ತು ಕ.ಕ.ರ.ಸಾ. ನಿಗಮಕ್ಕೆ 10,000 ಲಕ್ಷ ರೂ ಸೇರಿದಂತೆ ಒಟ್ಟಾರೆಯಾಗಿ 50,000 ಲಕ್ಷ ರೂ ಬಿಡುಗಡೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us