AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತ ಪ್ರಯಾಣದ ಗ್ಯಾರಂಟಿ ಬಗ್ಗೆ ಮಹಿಳೆಯರು, ಕಂಡಕ್ಟರ್​ಗಳ ಮಧ್ಯೆ ವಾಗ್ವಾದ; ಸಿಎಂಗೆ ಪತ್ರ ಬರೆದ ಕೆಎಸ್​ಆರ್​ಟಿಸಿ

ಮಹಿಳೆಯರು ಮತ್ತು ಕಂಡಕ್ಟರ್​ಗಳ ಮಧ್ಯೆ ವಾಗ್ವಾದ ಹೆಚ್ಚಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಭರವಸೆ ಈಡೇರಿಸುವಂತೆ ಒತ್ತಾಯಿಸಿದೆ.

ಉಚಿತ ಪ್ರಯಾಣದ ಗ್ಯಾರಂಟಿ ಬಗ್ಗೆ ಮಹಿಳೆಯರು, ಕಂಡಕ್ಟರ್​ಗಳ ಮಧ್ಯೆ ವಾಗ್ವಾದ; ಸಿಎಂಗೆ ಪತ್ರ ಬರೆದ ಕೆಎಸ್​ಆರ್​ಟಿಸಿ
ಕೆಎಸ್​ಆರ್​ಟಿಸಿ
ಗಣಪತಿ ಶರ್ಮಾ
|

Updated on: May 25, 2023 | 7:03 PM

Share

ಮುಖ್ಯಾಂಶಗಳು

  • ಕೆಎಸ್​ಆರ್​ಟಿಸಿ ಬಸ್​​ಗಳಲ್ಲಿ ಟಿಕೆಟ್ ಪಾವತಿಸಲು ಮಹಿಳೆಯರ ಹಿಂದೇಟು
  • ಕಂಡಕ್ಟರ್​ಗೆ ತಲೆನೋವಾದ ಮಹಿಳಾ ಪ್ರಯಾಣಿಕರು
  • ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಕೆಎಸ್​ಆರ್​ಟಿಸಿ

ಬೆಂಗಳೂರು: ಜನರು ವಿದ್ಯುತ್ ಬಿಲ್ ಪಾವತಿಸಲು ನಿರಾಕರಿಸುತ್ತಿರುವ ನಿದರ್ಶನಗಳ ನಡುವೆ, ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂಬ ಕಾಂಗ್ರೆಸ್ (Congress) ಸರ್ಕಾರದ ಚುನಾವಣಾ ಭರವಸೆಯನ್ನು ಉಲ್ಲೇಖಿಸಿ ಸರ್ಕಾರಿ ಬಸ್‌ಗಳಲ್ಲಿ ಸ್ತ್ರೀಯರು ಟಿಕೆಟ್ ವಿಚಾರವಾಗಿ ಕಂಡಕ್ಟರ್‌ಗಳೊಂದಿಗೆ ವಾಗ್ವಾದ ನಡೆಸುತ್ತಿರುವ ವಿದ್ಯಮಾನಗಳು ವರದಿಯಾಗುತ್ತಿದೆ. ಇಂತಹ ಘಟನೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಭರವಸೆ ಈಡೇರಿಸುವಂತೆ ಒತ್ತಾಯಿಸಿದೆ.

‘ಟಿಕೆಟ್ ದರವನ್ನು ಪಾವತಿಸದೆ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುವಂತೆ ಮಹಿಳಾ ಪ್ರಯಾಣಿಕರು ಕಂಡಕ್ಟರ್‌ಗಳನ್ನು ಒತ್ತಾಯಿಸುತ್ತಿದ್ದಾರೆ. ಬಸ್ ಪ್ರಯಾಣದ ವೇಳೆ ಸಿಬ್ಬಂದಿ ಹಾಗೂ ಪ್ರಯಾಣಿಕರ ನಡುವೆ ಹಲವು ಬಾರಿ ವಾಗ್ವಾದಗಳು ನಡೆದಿವೆ. ಇದು ಒಳ್ಳೆಯ ಲಕ್ಷಣವಲ್ಲ. ಮಹಿಳೆಯರಿಗೆ ಉಚಿತ ಪ್ರಯಾಣದ ಕುರಿತು ಸರ್ಕಾರದ ಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳುವಂತೆ ಮತ್ತು ಸಾರಿಗೆ ನಿಗಮಗಳಿಗೆ ನಿರ್ದೇಶನ ನೀಡುವಂತೆ ನಾವು ವಿನಂತಿಸುತ್ತೇವೆ’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ನಷ್ಟವನ್ನು ಕೂಡ ಅಂದಾಜಿಸಿ ಎಲ್ಲ ನಿಗಮಗಳಿಗೆ ಮುಂಚಿತವಾಗಿ ಪರಿಹಾರ ನೀಡುವಂತೆಯೂ ಒಕ್ಕೂಟ ಸರ್ಕಾರವನ್ನು ಕೋರಿದೆ.

‘ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಜಾರಿಗೆ ತರುವುದಕ್ಕಾಗಿ, ರಾಜ್ಯ ರಸ್ತೆ ಸಾರಿಗೆ ನಿಗಮಗಳ ಮೇಲಿನ ಆರ್ಥಿಕ ಹೊರೆಯನ್ನು ಸರಿಯಾಗಿ ಅಂದಾಜು ಮಾಡಲು ಮತ್ತು ನಿಗಮಗಳಿಗೆ ಮುಂಗಡವಾಗಿ ವೆಚ್ಚವನ್ನು ಮಂಜೂರು ಮಾಡುವಂತೆ ನಾವು ನಿಮ್ಮನ್ನು ಕೋರುತ್ತೇವೆ’ ಎಂದು ಪತ್ರದಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: ಜನರು ಗ್ಯಾರಂಟಿಗಳಿಗೆ ಕಾಯುತ್ತಿದ್ದರೆ, ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ದೆಹಲಿ ಸುತ್ತುತ್ತಿದ್ದಾರೆ; ಬಿಜೆಪಿ ಕಿಡಿ

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಭರವಸೆ ನೀಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಮೇ 20ರಂದು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಭರವಸೆ ನೀಡುವ ‘ಶಕ್ತಿ’ ಯೋಜನೆಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ವಿವರವಾದ ಮಾರ್ಗಸೂಚಿಯನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿದೆ. ಸಂಪುಟ ಸಭೆಯ ನಂತರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ಕರ್ನಾಟಕದ ಮಹಿಳೆಯರಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ ಎಂದಿದ್ದರು.

200 ಯೂನಿಟ್ ಉಚಿತ ವಿದ್ಯುತ್ ಸೇರಿದಂತೆ ಎಲ್ಲ ಐದು ಗ್ಯಾರಂಟಿಗಳನ್ನು ಎರಡನೇ ಸಂಪುಟ ಸಭೆಯ ನಂತರ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಸಂಪುಟ ವಿಸ್ತರಣೆ ಬಳಿಕ ಮುಂದಿನ ಸಂಪುಟ ಸಭೆ ನಡೆಯುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್