AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಣ್ಣೆ ನಗರಿ ದಾವಣಗೆರೆಯಲ್ಲಿ ಎಸ್.ಎಸ್ ಮಲ್ಲಿಕಾರ್ಜುನರಿಂದ ಉಚಿತ ಕೊರೊನಾ ಲಸಿಕೆ ಅಭಿಯಾನ

ನಮ್ಮ ಸ್ವಂತ ಖರ್ಚಿನಲ್ಲಿ ಜನರಿಗೆ ಉಚಿತವಾಗಿ ಲಸಿಕೆ ನೀಡ್ತೇವೆ. 60 ಸಾವಿರ ಡೋಸ್‌ಗೆ ಈಗಾಗಲೇ ಆರ್ಡರ್ ಕೊಟ್ಟಿದ್ದೇವೆ. ಪುಣೆಯ ಸೆರಮ್ ಇನ್ಸ್‌ಟಿಟ್ಯೂಟ್‌ಗೆ ಆರ್ಡರ್ ಮಾಡಲಾಗಿದೆ. ಈಗ 10,000, ಮುಂದಿನ ವಾರದಲ್ಲಿ 50,000 ಡೋಸ್ ಬರುತ್ತೆ. SS ಆಸ್ಪತ್ರೆ, ಬಾಪೂಜಿ ಆಸ್ಪತ್ರೆಯಲ್ಲಿ ಲಸಿಕೆ ನೀಡುತ್ತೇವೆ -ದಾವಣಗೆರೆಯಲ್ಲಿ ಮಾಜಿ ಶಾಸಕ S.S.ಮಲ್ಲಿಕಾರ್ಜುನ ಹೇಳಿಕೆ

ಬೆಣ್ಣೆ ನಗರಿ ದಾವಣಗೆರೆಯಲ್ಲಿ ಎಸ್.ಎಸ್ ಮಲ್ಲಿಕಾರ್ಜುನರಿಂದ ಉಚಿತ ಕೊರೊನಾ ಲಸಿಕೆ ಅಭಿಯಾನ
ಮಾಜಿ ಶಾಸಕ S.S.ಮಲ್ಲಿಕಾರ್ಜುನ
TV9 Web
| Edited By: |

Updated on: Jun 04, 2021 | 1:02 PM

Share

ದಾವಣಗೆರೆ: ಜಿಲ್ಲೆಯ ಜನತೆಗೆ ಸ್ವಂತ ಖರ್ಚಿನಲ್ಲಿ ಕೊರೊನಾ ಲಸಿಕೆ ನೀಡಲು ಶಾಸಕ ಶಾಮನೂರ ಶಿವಶಂಕರಪ್ಪ ನಿರ್ಧರಿಸಿದ್ದು ಇಂದು ಲಸಿಕೆ ಅಭಿಯಾನ ಹಮ್ಮಿಕೊಂಡಿದ್ದಾರೆ. ನಗರದ ದುರ್ಗಾಂಭಿಕಾ ದೇವಸ್ಥಾನದಲ್ಲಿ 12 ಗಂಟೆಗೆ ಲಸಿಕೆ ಅಭಿಯಾನ ಆರಂಭವಾಗಲಿದೆ.

ನಮ್ಮ ಕುಟುಂಬದಿಂದ ಸ್ವಂತ ಕರ್ಚಿನಲ್ಲಿ ದಾವಣಗೆರೆ ಜಿಲ್ಲೆಯ ಜನತೆಗೆ ಉಚಿತ ಲಸಿಕೆ ಹಾಕಿಸಲಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಶಾಮನೂರ ಶಿವಶಂಕರಪ್ಪ ಪುತ್ರ ಮಾಜಿ ಶಾಸಕ ಎಸ್.ಎಸ್ ಮಲ್ಲಿಕಾರ್ಜುನ ತಿಳಿಸಿದ್ದಾರೆ. ಈಗಾಗಲೇ ಪುಣೆಯ ಸೆರಮ್ ಇನ್ಸ್‌ಟಿಟ್ಯೂಟ್‌ಗೆ 60 ಸಾವಿರ ಡೋಸ್ ಕೋವಿಶೀಲ್ಡ್ ಲಸಿಕೆ ಆರ್ಡರ್ ಮಾಡಲಾಗಿದೆ. ಈಗ ಇನ್ನೊಂದು ವಾರದಲ್ಲಿ 50 ಸಾವಿರ ಡೋಸ್ ಬರಲಿದೆ. ಇದಕ್ಕೆಲ್ಲಾ ಸುಮಾರು ನಾಲ್ಕು ಕೋಟಿ ರೂಪಾಯಿ ವೆಚ್ಚವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ರಿಂದ ಲಸಿಕೆ ಅಭಿಯಾನಕ್ಕೆ ಚಾಲನೆ‌ ನೀಡುತ್ತಾರೆ. ರಾಜ್ಯ ಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಲಸಿಕೆ ತರಿಸಲು ಸಹಕಾರ ಮಾಡಿದ್ದಾರೆ.

ಇದರಲ್ಲಿ ರಾಜಕೀಯವಿಲ್ಲ. ಕಾಂಗ್ರೆಸ್, ಬಿಜೆಪಿ ಎಂದು ಪಕ್ಷಬೇಧ ವಿಲ್ಲ. ಎಲ್ಲರಿಗೂ ಲಸಿಕೆ ನೀಡಲಾಗುತ್ತೆ. ಈಗಾಗಲೆ ಎಸ್.ಎಸ್ ಹಾಗೂ ಬಾಪೂಜಿ ಆಸ್ಪತ್ರೆಯಲ್ಲಿ ಸೇರಿದಂತೆ ಬೇರೆ ಬೇರೆ ಕಡೆ ಖಾಸಗಿಯವರಿಗೂ ಲಸಿಕೆ ಕೊಡಲಾಗುತ್ತಿದೆ. ಬೆಂಗಳೂರು ಸೇರಿದಂತೆ ಕೆಲ ಕಡೆ ಲಸಿಕೆ ಅಭಿಯಾನ ಶುರುವಾಗಿದೆ. ನಾವು ಕೂಡಾ ದಾವಣಗೆರೆ ನಗರದ ಎಸ್.ಎಸ್ ಮತ್ತು ಬಾಪೂಜಿ ಆಸ್ಪತ್ರೆಯಲ್ಲಿ ಲಸಿಕೆ ಕೊಡಿಸುವ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಶಾಮನೂರ ಶಿವಶಂಕರಪ್ಪ ಪುತ್ರ ಎಸ್.ಎಸ್ ಮಲ್ಲಿಕಾರ್ಜುನ ತಿಳಿಸಿದ್ದಾರೆ.

ಇದನ್ನೂ ಓದಿ: ನೆಪ ಮಾತ್ರಕ್ಕೆ ಭತ್ತ ಖರೀದಿ ಕೇಂದ್ರ ಆರಂಭಿಸಿದ ರಾಯಚೂರು ಜಿಲ್ಲಾಡಳಿತ; ರೈತರಲ್ಲಿ ಹೆಚ್ಚಿದ ಆತಂಕ

ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!