AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾರ ಭದ್ರತೆ ಒದಗಿಸಲು ಹೈಕೋರ್ಟ್ ಸೂಚನೆ; ಮೇ 24ರವರೆಗೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಊಟ

ದಿನಗೂಲಿ ಕಳೆದುಕೊಂಡವರಿಗೆ ಆಹಾರ ಭದ್ರತೆ ಒದಗಿಸಿ. ಗ್ರಾಮಾಂತರ ಪ್ರದೇಶಗಳಿಗೂ ಆಹಾರ ತಲುಪಿಸಿ. ದಾಸೋಹ ಹೆಲ್ಪ್‌ಲೈನ್ ಮರು ಆರಂಭಿಸಲು ಕೋರ್ಟ್ ಸೂಚನೆ ನೀಡಿತ್ತು.

ಆಹಾರ ಭದ್ರತೆ ಒದಗಿಸಲು ಹೈಕೋರ್ಟ್ ಸೂಚನೆ; ಮೇ 24ರವರೆಗೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಊಟ
ಇಂದಿರಾ ಕ್ಯಾಂಟೀನ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 23, 2021 | 12:38 PM

Share

ಬೆಂಗಳೂರು: ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಆಹಾರ ವಿತರಣೆಗೆ ಸೂಚನೆ ನೀಡಲಾಗಿದೆ. ಲಾಕ್​ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಅಂದರೆ, ಮೇ 24ರವರೆಗೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಊಟ ನೀಡುವಂತೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಪತ್ರದ ಮೂಲಕ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಈ ಬಗ್ಗೆ ಆದೇಶಿಸಿದ್ದಾರೆ. ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟ ಒದಗಿಸಲು ನಿರ್ದೇಶನ ನೀಡಿದ್ದಾರೆ.

ಲಾಕ್‌ಡೌನ್‌ನಿಂದ ಬಡವರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ, ಆಹಾರ ಭದ್ರತೆ ಒದಗಿಸಲು ಕ್ರಮಕ್ಕೆ ಹೈಕೋರ್ಟ್ ಸೂಚನೆ ನೀಡಿತ್ತು. ದಿನಗೂಲಿ ಕಳೆದುಕೊಂಡವರಿಗೆ ಆಹಾರ ಭದ್ರತೆ ಒದಗಿಸಿ. ಗ್ರಾಮಾಂತರ ಪ್ರದೇಶಗಳಿಗೂ ಆಹಾರ ತಲುಪಿಸಿ. ದಾಸೋಹ ಹೆಲ್ಪ್‌ಲೈನ್ ಮರು ಆರಂಭಿಸಲು ಕೋರ್ಟ್ ಸೂಚನೆ ನೀಡಿತ್ತು.

ಬೆಂಗಳೂರಿನಲ್ಲಿರುವ 202 ಇಂದಿರಾ ಕ್ಯಾಂಟೀನ್ ಗಳ ಮೂಲಕ ಮೂರು ಹೊತ್ತೂ ಉಚಿತವಾಗಿ ಸಿದ್ದಪಡಿಸಿದ ಆಹಾರ ನೀಡಲಾಗುವುದು. ಅಲ್ಲದೇ ಎನ್‌ಜಿಒಗಳ ಮೂಲಕವೂ ಅಗತ್ಯವಿರುವ ಪ್ರದೇಶಗಳಿಗೆ ಆಹಾರ ಒದಗಿಸಲಾಗುವುದು. ಪಡಿತರ ಚೀಟಿದಾರರಿಗೆ 10 ಕೆಜಿ ಆಹಾರ ಧಾನ್ಯ ನೀಡಲಾಗುವುದೆಂದು ಸರ್ಕಾರ ಹೈಕೋರ್ಟ್​ಗೆ ತಿಳಿಸಿದೆ. ಲಾಕ್‌ಡೌನ್​ನಿಂದ ದಿನಗೂಲಿ ನೌಕರರು, ಬಡವರು ಜೀವನಾಧಾರ ಕಳೆದುಕೊಂಡಿದ್ದಾರೆ. ಅಂತಹವರಿಗೆ ಆಹಾರ ಭದ್ರತೆ ಒದಗಿಸಬೇಕು. ಗ್ರಾಮಾಂತರ ಪ್ರದೇಶದ ಬಡವರಿಗೂ ಆಹಾರ ತಲುಪಿಸಬೇಕು. ದಾಸೋಹ ಹೆಲ್ಪ್‌ಲೈನ್ ಮರು ಆರಂಭಿಸಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಹೈಕೋರ್ಟ್ ಆದೇಶದ ಬಳಿಕ ರಾಜ್ಯಕ್ಕೆ ಆಕ್ಸಿಜನ್ ಪೂರೈಕೆಯಾಗುತ್ತಿದೆ ಹೈಕೋರ್ಟ್ ಆದೇಶದ ನಂತರ ರಾಜ್ಯಕ್ಕೆ 1135 ಮೆಟ್ರಿಕ್ ಟನ್‌ ಆಕ್ಸಿಜನ್ ಪೂರೈಕೆಯಾಗುತ್ತಿದೆ ಎಂದು ಹೈಕೋರ್ಟ್​ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಜಿಲ್ಲಾವಾರು ಆಕ್ಸಿಜನ್ ಹಂಚಿಕೆಗೂ ಮಾರ್ಗಸೂಚಿ ರೂಪಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್​ಗೆ ತಿಳಿಸಿದೆ. ಹೈಕೋರ್ಟ್ ಸೂಚನೆಯಂತೆ ಕೇಂದ್ರ ಸರ್ಕಾರ 1200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆಗೆ ಕ್ರಮ ಕೈಗೊಂಡಿದ್ದು, ನಾಳೆ ಈ ಸಂಬಂಧ ಅಡ್ವೊಕೆಟ್ ಜನರಲ್ ರೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸುವುದಾಗಿ ಕೇಂದ್ರ ಸರ್ಕಾರದ ಎಎಸ್‌ಜಿ ಎಂ.ಬಿ. ನರಗುಂದ್ ಹೈಕೋರ್ಟ್​ಗೆ ತಿಳಿಸಿದ್ದಾರೆ. ಲಾಕ್‌ ಡೌನ್‌ ವೇಳೆ ಪೊಲೀಸರ ಲಾಠಿ ಚಾರ್ಜ್ ಬಗ್ಗೆಯೂ ಪ್ರಸ್ತಾಪಿಸಿದ ಹೈಕೋರ್ಟ್‌ ಪೊಲೀಸರು ಸಂಯಮ ವಹಿಸಬೇಕು. ಅನಗತ್ಯವಾಗಿ ಲಾಠಿ ಚಾರ್ಜ್ ಮಾಡಬಾರದು. ಸೋಂಕಿತರ ಮೇಲೂ ಲಾಠಿಚಾರ್ಜ್ ಮಾಡಿರುವುದು ವರದಿಯಾಗಿದೆ. ಈ ಬಗ್ಗೆ ಪೊಲೀಸರಿಗೆ ಸೂಕ್ತ ಮಾರ್ಗಸೂಚಿ ನೀಡಬೇಕೆಂದು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಸಂಪೂರ್ಣ ವ್ಯಾಕ್ಸಿನೇಶನ್​ಗೆ ನೀಲನಕ್ಷೆ ರೂಪಿಸಲು ಹೈಕೋರ್ಟ್ ಸೂಚನೆ

ಕೇಂದ್ರ ಸರ್ಕಾರಕ್ಕೆ ಮುಖಭಂಗ; ಆಕ್ಸಿಜನ್​ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್​ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ

Published On - 3:32 pm, Tue, 11 May 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು