AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

25 ಸಾವಿರ ಪಿಯು ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ನೀಟ್​ ತರಬೇತಿ ಆರಂಭ: ಮಧು ಬಂಗಾರಪ್ಪ ಘೋಷಣೆ

ವೈದ್ಯಕೀಯ ಶಿಕ್ಷಣ ಪಡೆಯಬೇಕು ಎಂಬ ಕನಸು ಕಂಡಿರುವ ಬಡ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಸಹಿ ಸುದ್ದಿ ನೀಡಿದೆ. ಈ ವರ್ಷದಿಂದಲೇ 25 ಸಾವಿರ ಬಡ ವಿದ್ಯಾರ್ಥಿಗಳಿಗೆ ನೀಟ್​ ತರಬೇತಿ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

25 ಸಾವಿರ ಪಿಯು ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ನೀಟ್​ ತರಬೇತಿ ಆರಂಭ: ಮಧು ಬಂಗಾರಪ್ಪ ಘೋಷಣೆ
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Aug 23, 2024 | 1:35 PM

Share

ಬೆಂಗಳೂರು, ಆಗಸ್ಟ್​ 23: ಪಿಯುಸಿ (PUC) ಹಂತದಲ್ಲಿ 25 ಸಾವಿರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್ (NEET) ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವರ್ಷದಿಂದಲೇ ಉಚಿವಾಗಿ ನೀಟ್​ ತರಬೇತಿ ನೀಡಲಾಗುತ್ತದೆ ಎಂದು ಹೇಳಿದರು.

ತಜ್ಞರಿಂದ ರಾಜ್ಯದ 25 ಸಾವಿರ ಬಡ ಪಿಯು ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಾಗುತ್ತದೆ. ಇದಕ್ಕಾಗಿ 12 ಕೋಟಿ ರೂ. ಖರ್ಚು ಮಾಡುತ್ತಿದ್ದೇವೆ. ಆನ್​ಲೈನ್​ನಲ್ಲೂ ತರಬೇತಿ ನಡೆಯಲಿದೆ. ಇದರಿಂದ ಬಡ ವಿದ್ಯಾರ್ಥಿಗಳು ಖಾಸಗಿ ಕೋಚಿಂಗ್ ಕ್ಲಾಸ್​ಗೆ ಹೋಗಿ, ಲಕ್ಷ ಲಕ್ಷ ಹಣ ಖರ್ಚು ಮಾಡುವುದು ತಪ್ಪುತ್ತದೆ. ಇದು ವೈದ್ಯಯಕೀಯ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳಿಗೆ ಉತ್ತೇಜಿಸಿದಂತಾಗುತ್ತದೆ ಎಂದರು.

25 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಇಲಾಖೆ ಪರೀಕ್ಷೆ ನಡೆಯಲಿದೆ. ಇಲ್ಲಿ ಪಾಸ್​ ಆಗುವ 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲಾಗುತ್ತದೆ. ಅಲ್ಲದೆ, 8,9,10ನೇ ತರಗತಿ ವಿಜ್ಞಾನ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ಮರು ಸಿಂಚನ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ:   ಕರ್ನಾಟಕ ವಿಧಾನಸಭೆ ಕಲಾಪ: ನೀಟ್ ಪರೀಕ್ಷೆ ರದ್ದುಪಡಿಸುವಂತೆ ಒತ್ತಾಯಿಸಿ ನಿರ್ಣಯ ಅಂಗೀಕಾರ

ಅನುದಾನಿತ ಶಾಲೆಯ ಎಲ್ಲ ಹುದ್ದೆಗಳಿಗೂ ಮುಂದಿನ ಐದು ವರ್ಷಗಳಲ್ಲಿ ಖಾಯಂ ಶಿಕ್ಷಕರ ನೇಮಕಾತಿ ಆಗಲಿದೆ. ಅನುದಾನಿತ ಕನ್ನಡ ಮಾಧ್ಯಮ ಶಾಲೆ‌ ಉಳಿಸಬೇಕಾಗಿದೆ.ಅಂಗನವಾಡಿಯಲ್ಲೇ ಎಲ್ ಕೆಜಿ ಯುಕೆಜಿ ಪ್ರಾರಂಭ ಮಾಡಲಾಗಿದೆ.ಕಲ್ಯಾಣ ಕರ್ನಾಟಕದಲ್ಲಿಯೇ 1008 ಸಾವಿರ ಎಲ್​ಕೆಜಿ ಹಾಗೂ ಯುಕೆಜಿ ನರ್ಸರಿ ತೆರೆಯಲಾಗುತ್ತದೆ. ಈಗಾಗಲೇ 30 ಸಾವಿರ ಮಕ್ಕಳು ದಾಖಲಾತಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಆದರ್ಶ ಶಾಲೆಗಳಲ್ಲಿ ಪಿಯು ಕಾಲೇಜ್ ತೆರೆಯಲು ಅನುಮತಿ ನೀಡಲಾಗಿದೆ. ಇದರಿಂದ ಕಾಲೇಜು ಕೊರತೆ ನೀಗಿಸಲು ತೀರ್ಮಾನ ಮಾಡಿದ್ದೇವೆ. ತಿಂಗಳದ ಮೂರನೇ ಶನಿವಾರ ಬ್ಯಾಗ್ ಲೆಸ್ ಡೇ ಇರುತ್ತದೆ. ಶಿಕ್ಷಕರು ಕಡ್ಡಾಯವಾಗಿ ಇದನ್ನು ಪಾಲಿಸಬೇಕು, ಬ್ಯಾಗ್ ಲೆಸ್ ಮಾಡದೆ ಇದ್ದರೆ ಕಾನೂನು ಕ್ರಮ ತಗೆದುಕೊಳ್ಳುತ್ತೇವೆ. ಬ್ಯಾಗ್ ಹೊರೆ ಕಡಿಮೆ ಮಾಡಲು ಪಾರ್ಟ್ – 1 ಪಾರ್ಟ್ – 2 ಅಂತ ಪಠ್ಯಕ್ರಮ ವಿಭಾಗ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರು ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟದ ರಹಸ್ಯ ಬಿಚ್ಚಿಟ್ಟ RTO
ಬೆಂಗಳೂರು ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟದ ರಹಸ್ಯ ಬಿಚ್ಚಿಟ್ಟ RTO
ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು
ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು
ಭಾರತಕ್ಕೆ ಬಂದ ಯುವ ಚಾಂಪಿಯನ್ಸ್​ಗೆ ಅದ್ಧೂರಿ ಸ್ವಾಗತ
ಭಾರತಕ್ಕೆ ಬಂದ ಯುವ ಚಾಂಪಿಯನ್ಸ್​ಗೆ ಅದ್ಧೂರಿ ಸ್ವಾಗತ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ