AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ 9ನೇ ತರಗತಿ, ಪ್ರಥಮ ಪಿಯು ತರಗತಿ ಆರಂಭ.. ಯಾವಾಗಿನಿಂದ ಗೊತ್ತಾ?

ಫೆಬ್ರವರಿ 1ರಿಂದ 9ನೇ ತರಗತಿ, ಪ್ರಥಮ PU ತರಗತಿಗಳನ್ನು ಆರಂಭ ಮಾಡಲು ತೀರ್ಮಾನ ಮಾಡಲಾಗಿದ್ದು, 9, 10, 11, 12ನೇ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಶುರು ಮಾಡಲು ತೀರ್ಮಾನಿಸಲಾಗಿದೆ.

ರಾಜ್ಯದಲ್ಲಿ 9ನೇ ತರಗತಿ, ಪ್ರಥಮ ಪಿಯು ತರಗತಿ ಆರಂಭ.. ಯಾವಾಗಿನಿಂದ ಗೊತ್ತಾ?
ಪೃಥ್ವಿಶಂಕರ
| Edited By: |

Updated on:Jan 28, 2021 | 4:49 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಕಾರಣದಿಂದಾಗಿ ಮುಚ್ಚಲಾಗಿದ್ದ ಶಾಲಾ ಕಾಲೇಜುಗಳನ್ನು ನಿಧಾನವಾಗಿ ತೆರೆಯಲಾಗುತ್ತಿದ್ದು, ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಸುರೇಶ್​ ಕುಮಾರ್​ 9ನೇ ತರಗತಿ ಹಾಗೂ ಪ್ರಥಮ PU ತರಗತಿಗಳ ಆರಂಭದ ಬಗ್ಗೆ ಮಾಹಿತಿ ನೀಡಿದ್ದಾರೆ.

ಫೆಬ್ರವರಿ 1ರಿಂದ 9ನೇ ತರಗತಿ, ಪ್ರಥಮ PU ತರಗತಿಗಳನ್ನು ಆರಂಭ ಮಾಡಲು ತೀರ್ಮಾನ ಮಾಡಲಾಗಿದ್ದು, 9, 10, 11, 12ನೇ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಶುರು ಮಾಡಲು ತೀರ್ಮಾನಿಸಲಾಗಿದೆ. 6 ರಿಂದ 8ನೇ ತರಗತಿಗಳನ್ನು ಆರಂಭಿಸುವ ಬಗ್ಗೆ ಕಾದು ತೀರ್ಮಾನಿಸುತ್ತೇವೆ ಎಂದು ಸಚಿವ ಸುರೇಶ್​ ಕುಮಾರ್​ ತಿಳಿಸಿದ್ದಾರೆ.

1 ರಿಂದ 5ನೇ ತರಗತಿ ಆರಂಭಿಸುವ ಬಗ್ಗೆ ಸದ್ಯಕ್ಕೆ ತೀರ್ಮಾನವಿಲ್ಲ. ಉಳಿದ ತರಗತಿಗಳ ಆರಂಭಿಸುವ ಬಗ್ಗೆ ಮುಂದೆ ನಿರ್ಧಾರಿಸಲಾಗುತ್ತದೆ. ಈಗ ಆರಂಭಿಸಿರುವ ತರಗತಿಗಳಲ್ಲಿ ಮಕ್ಕಳ ಹಾಜರಾತಿ, ಶಾಲೆ ವಾತಾವರಣವನ್ನು ಗಮನಿಸಿ ಉಳಿದ ತರಗತಿಗಳನ್ನು ತೆರೆಯುವುದರ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.

ಶಾಲಾ ಶುಲ್ಕ ನಿಗದಿಗೆ ಪ್ರತ್ಯೇಕ ಸಲಹಾ ಸಮಿತಿ ಬೇಕಿದೆ.. ಶಾಲಾ ಶುಲ್ಕ ನಿಗದಿ ಬಗ್ಗೆ ಸಿಎಂ ಯಡಿಯೂರಪ್ಪ ಜತೆ ಚರ್ಚೆ ಮಾಡುತ್ತೇವೆ. ಸಿಎಂ ಜತೆ ಚರ್ಚಿಸಿದ ಬಳಿಕ ಶುಲ್ಕ ನಿಗದಿ ಬಗ್ಗೆ ನಿರ್ಧಾರ ಮಾಡುತ್ತೇವೆ. ನಾವು ಈ ಬಗ್ಗೆ ಪೋಷಕರಿಗೂ ಸಹ ತಿಳಿಸಿದ್ದೇವೆ. ಪೋಷಕರ ಪರಿಸ್ಥಿತಿ ಬಗ್ಗೆಯೂ ನಮಗೆ ಸಂಪೂರ್ಣ ಅರಿವಿದೆ. ವೇತನವಿಲ್ಲದೆ ಕೆಲ ಶಿಕ್ಷಕರು ಕೆಲಸ ಕಳೆದುಕೊಂಡಿದ್ದೂ ಇದೆ. ಖಾಸಗಿ ಶಾಲಾ ಶಿಕ್ಷಕರೂ ಜೀವನ ನಿರ್ವಹಣೆ ಮಾಡಬೇಕಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪ ಜತೆ ಚರ್ಚೆ ಮಾಡುತ್ತೇವೆ. ಪೋಷಕರು ಪ್ರತಿಭಟನೆ ಮಾಡದಂತೆ ನೋಡಿಕೊಳ್ಳುತ್ತೇವೆ. ಆನ್​ಲೈನ್ ಕ್ಲಾಸ್​ ಬಂದ್ ಮಾಡಿದರೆ BEO ಗಳಿಗೆ ದೂರು ನೀಡಿದರೆ ತಕ್ಷಣ ಕ್ರಮ ಕೈಗೊಳ್ಳುತ್ತಾರೆ ಎಂದರು.

Published On - 4:22 pm, Thu, 28 January 21

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ