AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಜ್ಯೋತಿ ಯೋಜನೆ: ಅರ್ಹ ಫಲಾನುಭವಿಗಳ ಮೆನೆಗೆ ಇಂದಿನಿಂದ ಶೂನ್ಯ ವಿದ್ಯುತ್​ ಬಿಲ್​ ದರ

ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಇಂದಿನಿಂದ ಅನುಷ್ಠಾನಕ್ಕೆ ಬರಲಿದೆ. ಅರ್ಹ ಫಲಾನುಭವಿಗಳು ಶೂನ್ಯ ಬಿಲ್ ಪಡೆಯಲಿದ್ದಾರೆ.

ಗೃಹ ಜ್ಯೋತಿ ಯೋಜನೆ: ಅರ್ಹ ಫಲಾನುಭವಿಗಳ ಮೆನೆಗೆ ಇಂದಿನಿಂದ ಶೂನ್ಯ ವಿದ್ಯುತ್​ ಬಿಲ್​ ದರ
ಗೃಹಜ್ಯೋತಿ ಯೋಜನೆ
Follow us
Vinay Kashappanavar
| Updated By: ವಿವೇಕ ಬಿರಾದಾರ

Updated on:Aug 01, 2023 | 7:22 AM

ಬೆಂಗಳೂರು: ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ (Guarantee scheme) ಒಂದಾದ ಗೃಹಜ್ಯೋತಿ ಯೋಜನೆ (Gruha Jyothi Scheme) ಇಂದಿನಿಂದ (ಆ.01) ಅನುಷ್ಠಾನಕ್ಕೆ ಬರಲಿದೆ. ಅರ್ಹ ಫಲಾನುಭವಿಗಳು ಶೂನ್ಯ ಬಿಲ್ ಪಡೆಯಲಿದ್ದಾರೆ. ಒಂದು ವರ್ಷದಲ್ಲಿ ಮನೆಯಲ್ಲಿ ಬಳಸಲಾಗಿರುವ ಸರಾಸರಿ ಯೂನಿಟ್‌ ಲೆಕ್ಕ ಮಾಡಿ ಆ ಸರಾಸರಿಯಲ್ಲಿ ಮಾಸಿಕ 200ಕ್ಕಿಂತ ಕಡಿಮೆ ಯೂನಿಟ್‌ ವಿದ್ಯುತ್‌ ಬಳಸಿರುವ ನೋಂದಾಯಿತ ಫಲಾನುಭವಿಗಳಿಗೆ ‘ಗೃಹಜ್ಯೋತಿ’ ಯೋಜನೆ ಪ್ರಯೋಜನ ದೊರೆಯಲಿದೆ. ಆಗಸ್ಟ್‌ನಲ್ಲಿ ಬರುವ ಬಿಲ್‌ನಲ್ಲಿ ಈಗಾಗಲೇ ಹೆಸರು ನೋಂದಾಯಿಸಿಕೊಂಡ  ಗ್ರಾಹಕರಿಗೆ ಅವರ ಮನೆಯ ವಿದ್ಯುತ್‌ ಬಿಲ್‌ ಶೂನ್ಯವಾಗಿರಲಿದೆ.

ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಜೂ.15 ರಿಂದ ಆರಂಭವಾಗಿದ್ದು, ಜು. 27 ಕಡೆ ದಿನಾಂಕವಾಗಿತ್ತು. ಈ ಅವಧಿಯಲ್ಲಿ ನೋಂದಣಿ ಮಾಡಿಕೊಂಡ ಅರ್ಹ ಫಲಾನುಭವಿಗಳಿಗೆ ಆಗಸ್ಟ್​ ತಿಂಗಳಲ್ಲಿ ಉಚಿತ ವಿದ್ಯುತ್​ ಸಿಗಲಿದೆ. ರಾಜ್ಯಾದ್ಯಂತ 1.40 ಕೋಟಿಗೂ ಹೆಚ್ಚು ಗ್ರಾಹಕರು ಗೃಹ ಜ್ಯೋತಿ ಯೊಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನೂ ಶೇ 32 ರಷ್ಟು ಜನರು ಗೃಹ ಜ್ಯೋತಿಗೆ ಅರ್ಜಿ ಸಲ್ಲಿಸಿಲ್ಲ. ಜುಲೈ 25 ರ ನಂತರ ಅರ್ಜಿ ಸಲ್ಲಿದ ಫಲಾನುಭವಿಗಳಿಗೆ ಸೆಪ್ಟೆಂಬರ್ ತಿಂಗಳಲ್ಲಿ ಉಚಿತ ವಿದ್ಯುತ್ ಬಿಲ್ ಸಿಗಲಿದೆ.

ಇದನ್ನೂ ಓದಿ: Gruha Jyothi: ಗೃಹಜ್ಯೋತಿ‌ ಯೋಜನೆ ಯಾರಿಗೆಲ್ಲಾ ಅನ್ವಯಿಸಲಿದೆ, ಇದರ ಲೆಕ್ಕಾಚಾರ ಹೇಗೆ?

2.14 ಕೋಟಿ ಗ್ರಾಹಕರು ಗೃಹಜ್ಯೋತಿಗೆ ಅರ್ಹತೆ ಪಡೆದಿದ್ದು, ಶೇ.66 ರಷ್ಟು ಫಲಾನುಭವಿಗಳು ನೋಂದಣಿಯಾಗಿ ಇಂದಿನಿಂದ ಶೂನ್ಯ ಬಿಲ್ ಪಡೆಯಲಿದ್ದಾರೆ. ರಾಜ್ಯ ಸರ್ಕಾರ ಈ ಮೊದಲು ನಿಗದಿಪಡಿಸಿದ ಮಾನದಂಡದಂತೆ ತಿಂಗಳಿಗೆ 200 ಯುನಿಟ್ ಒಳಗೆ ವಿದ್ಯುತ್ ಬಳಕೆ ಮಾಡುವ ಗ್ರಾಹಕರಿಗೆ ಶೇ.10ರಷ್ಟು ಹೆಚ್ಚುವರಿ ವಿದ್ಯುತ್ ಬಳಕೆಗೆ ಅನುಮತಿಸಿದ್ದು, ಇಂದಿನಿಂದ ಯೋಜನೆ ಜಾರಿಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:18 am, Tue, 1 August 23

ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ