AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಜ್ಯೋತಿ ಯೋಜನೆ: ಅರ್ಹ ಫಲಾನುಭವಿಗಳ ಮೆನೆಗೆ ಇಂದಿನಿಂದ ಶೂನ್ಯ ವಿದ್ಯುತ್​ ಬಿಲ್​ ದರ

ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಇಂದಿನಿಂದ ಅನುಷ್ಠಾನಕ್ಕೆ ಬರಲಿದೆ. ಅರ್ಹ ಫಲಾನುಭವಿಗಳು ಶೂನ್ಯ ಬಿಲ್ ಪಡೆಯಲಿದ್ದಾರೆ.

ಗೃಹ ಜ್ಯೋತಿ ಯೋಜನೆ: ಅರ್ಹ ಫಲಾನುಭವಿಗಳ ಮೆನೆಗೆ ಇಂದಿನಿಂದ ಶೂನ್ಯ ವಿದ್ಯುತ್​ ಬಿಲ್​ ದರ
ಗೃಹಜ್ಯೋತಿ ಯೋಜನೆ
Vinay Kashappanavar
| Edited By: |

Updated on:Aug 01, 2023 | 7:22 AM

Share

ಬೆಂಗಳೂರು: ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ (Guarantee scheme) ಒಂದಾದ ಗೃಹಜ್ಯೋತಿ ಯೋಜನೆ (Gruha Jyothi Scheme) ಇಂದಿನಿಂದ (ಆ.01) ಅನುಷ್ಠಾನಕ್ಕೆ ಬರಲಿದೆ. ಅರ್ಹ ಫಲಾನುಭವಿಗಳು ಶೂನ್ಯ ಬಿಲ್ ಪಡೆಯಲಿದ್ದಾರೆ. ಒಂದು ವರ್ಷದಲ್ಲಿ ಮನೆಯಲ್ಲಿ ಬಳಸಲಾಗಿರುವ ಸರಾಸರಿ ಯೂನಿಟ್‌ ಲೆಕ್ಕ ಮಾಡಿ ಆ ಸರಾಸರಿಯಲ್ಲಿ ಮಾಸಿಕ 200ಕ್ಕಿಂತ ಕಡಿಮೆ ಯೂನಿಟ್‌ ವಿದ್ಯುತ್‌ ಬಳಸಿರುವ ನೋಂದಾಯಿತ ಫಲಾನುಭವಿಗಳಿಗೆ ‘ಗೃಹಜ್ಯೋತಿ’ ಯೋಜನೆ ಪ್ರಯೋಜನ ದೊರೆಯಲಿದೆ. ಆಗಸ್ಟ್‌ನಲ್ಲಿ ಬರುವ ಬಿಲ್‌ನಲ್ಲಿ ಈಗಾಗಲೇ ಹೆಸರು ನೋಂದಾಯಿಸಿಕೊಂಡ  ಗ್ರಾಹಕರಿಗೆ ಅವರ ಮನೆಯ ವಿದ್ಯುತ್‌ ಬಿಲ್‌ ಶೂನ್ಯವಾಗಿರಲಿದೆ.

ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಜೂ.15 ರಿಂದ ಆರಂಭವಾಗಿದ್ದು, ಜು. 27 ಕಡೆ ದಿನಾಂಕವಾಗಿತ್ತು. ಈ ಅವಧಿಯಲ್ಲಿ ನೋಂದಣಿ ಮಾಡಿಕೊಂಡ ಅರ್ಹ ಫಲಾನುಭವಿಗಳಿಗೆ ಆಗಸ್ಟ್​ ತಿಂಗಳಲ್ಲಿ ಉಚಿತ ವಿದ್ಯುತ್​ ಸಿಗಲಿದೆ. ರಾಜ್ಯಾದ್ಯಂತ 1.40 ಕೋಟಿಗೂ ಹೆಚ್ಚು ಗ್ರಾಹಕರು ಗೃಹ ಜ್ಯೋತಿ ಯೊಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನೂ ಶೇ 32 ರಷ್ಟು ಜನರು ಗೃಹ ಜ್ಯೋತಿಗೆ ಅರ್ಜಿ ಸಲ್ಲಿಸಿಲ್ಲ. ಜುಲೈ 25 ರ ನಂತರ ಅರ್ಜಿ ಸಲ್ಲಿದ ಫಲಾನುಭವಿಗಳಿಗೆ ಸೆಪ್ಟೆಂಬರ್ ತಿಂಗಳಲ್ಲಿ ಉಚಿತ ವಿದ್ಯುತ್ ಬಿಲ್ ಸಿಗಲಿದೆ.

ಇದನ್ನೂ ಓದಿ: Gruha Jyothi: ಗೃಹಜ್ಯೋತಿ‌ ಯೋಜನೆ ಯಾರಿಗೆಲ್ಲಾ ಅನ್ವಯಿಸಲಿದೆ, ಇದರ ಲೆಕ್ಕಾಚಾರ ಹೇಗೆ?

2.14 ಕೋಟಿ ಗ್ರಾಹಕರು ಗೃಹಜ್ಯೋತಿಗೆ ಅರ್ಹತೆ ಪಡೆದಿದ್ದು, ಶೇ.66 ರಷ್ಟು ಫಲಾನುಭವಿಗಳು ನೋಂದಣಿಯಾಗಿ ಇಂದಿನಿಂದ ಶೂನ್ಯ ಬಿಲ್ ಪಡೆಯಲಿದ್ದಾರೆ. ರಾಜ್ಯ ಸರ್ಕಾರ ಈ ಮೊದಲು ನಿಗದಿಪಡಿಸಿದ ಮಾನದಂಡದಂತೆ ತಿಂಗಳಿಗೆ 200 ಯುನಿಟ್ ಒಳಗೆ ವಿದ್ಯುತ್ ಬಳಕೆ ಮಾಡುವ ಗ್ರಾಹಕರಿಗೆ ಶೇ.10ರಷ್ಟು ಹೆಚ್ಚುವರಿ ವಿದ್ಯುತ್ ಬಳಕೆಗೆ ಅನುಮತಿಸಿದ್ದು, ಇಂದಿನಿಂದ ಯೋಜನೆ ಜಾರಿಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:18 am, Tue, 1 August 23

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ