AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ, ಈ ವಿವಾದಕ್ಕೆ ಅರ್ಥವಿಲ್ಲ, ಇಲ್ಲಿ ದೇವಾಲಯವಿತ್ತು ಅನ್ನೊದಕ್ಕೆ ದಾಖಲೆಗಳಿದ್ರೆ ನೀಡಲಿ: ಜಾಮಿಯ ಮಸೀದಿಯ ಮೌಲ್ವಿ ಸೈಯದ್ ಗುಲ್ಜಾರ್ ಪಾಷ

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿಚಾರವಾಗಿ, ನಾನು ನನ್ನ ಪೂರ್ವಜರು ಇಲ್ಲಿ ನಮಾಜ್ ಮಾಡುತ್ತಲೇ ಬಂದಿದ್ದೇವೆ.

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ, ಈ ವಿವಾದಕ್ಕೆ ಅರ್ಥವಿಲ್ಲ, ಇಲ್ಲಿ ದೇವಾಲಯವಿತ್ತು ಅನ್ನೊದಕ್ಕೆ ದಾಖಲೆಗಳಿದ್ರೆ ನೀಡಲಿ: ಜಾಮಿಯ ಮಸೀದಿಯ ಮೌಲ್ವಿ ಸೈಯದ್ ಗುಲ್ಜಾರ್ ಪಾಷ
ಜಾಮಿಯಾ ಮಸೀದಿ ಶ್ರೀಲಂಗ ಪಟ್ಟಣ
TV9 Web
| Edited By: ವಿವೇಕ ಬಿರಾದಾರ|

Updated on: May 14, 2022 | 12:58 PM

Share

ಮಂಡ್ಯ: ಶ್ರೀರಂಗಪಟ್ಟಣದ (Shriranga Pattana) ಜಾಮಿಯಾ ಮಸೀದಿ (Jamiya Mosque) ವಿಚಾರವಾಗಿ, ನಾನು ನನ್ನ ಪೂರ್ವಜರು ಇಲ್ಲಿ ನಮಾಜ್ ಮಾಡುತ್ತಲೇ ಬಂದಿದ್ದೇವೆ. ಈ ವಿವಾದಕ್ಕೆ ಅರ್ಥವಿಲ್ಲ ನಾವೆಲ್ಲ ಭಾರತೀಯರು ಎಲ್ಲರು ಒಟ್ಟಾಗಿ ಸಹಬಾಳ್ವೆಯಿಂದ ಜೀವನ ಸಾಗಿಸಬೇಕು. ಇಲ್ಲಿ ದೇವಾಲಯವಿತ್ತು ಅನ್ನೊದಕ್ಕೆ ದಾಖಲೆಗಳಿದ್ರೆ ನೀಡಲಿ. ಆದಾರ ರಹಿತ ಮಾತುಗಳನ್ನ ಚರ್ಚೆಗೆ ತರುತ್ತಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಎಲ್ಲರು ಒಟ್ಟಾಗಿದ್ದೇವೆ. ನಾನು ಸಂಸ್ಕೃತ ಅಧ್ಯಯನ ಮಾಡಿದ್ದೇನೆ. ಈಗಲು ಅನೇಕ ಹಿಂದು ಸ್ನೇಹಿತರು ನನ್ನ ಜೊತೆ ಚೆನ್ನಾಗಿಯೇ ಇದ್ದಾರೆ. ಈ ವಿವಾವದದ ಕುರಿತು ನಾನು ಹೆಚ್ಚಿನ ಚರ್ಚೆ ನಡೆಸೊಲ್ಲ ಎಂದು ಜಾಮಿಯ ಮಸೀದಿಯ ಮೌಲ್ವಿ ಸೈಯದ್ ಗುಲ್ಜಾರ್ ಪಾಷ ಟಿವಿ9ಗೆ ಮೌಖಿಕ ಹೇಳಿಕೆ ನೀಡಿದ್ದಾರೆ.

ಈಗಾಗಲೇ ಹಿಂದೂ ಕಾರ್ಯಕರ್ತರು ಜಾಮಿಯಾ ಮಸೀದಿಯಲ್ಲಿ ಆಂಜನೇಯನ ಪೂಜೆಗೆ ಅವಕಾಶ ನೀಡುವಂತೆ ಮಂಡ್ಯ ಜಿಲ್ಲಾಧಿಕಾರಿ ಅವರಿಗೆ ದೂರು ನೀಡಿದ್ದಾರೆ. ಮೂಡಲ ಬಾಗಿಲು ಆಂಜನೇಯ ದೇವಸ್ಥಾನದ ಮೇಲೆ ಮಸೀದಿ ಮಾಡಲಾಗಿದೆ. ಈ ಬಗ್ಗೆ ಅನೇಕ ಇತಿಹಾಸಕಾರರು ದಾಖಲೆ ಉಲ್ಲೇಖ ಮಾಡಿದ್ದಾರೆ. ಈ ಬಾರಿ ಹನುಮ ಜಯಂತಿಗೆ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಗೆ ಹೋಗಿ ಪೂಜೆ ಸಲ್ಲಿಸುತ್ತೇವೆ ಎಂದು ಹಿಂದೂ ಮುಖಂಡ ಮಂಜುನಾಥ್ ಹೇಳಿದ್ದಾರೆ. ಎಲ್ಲಾ ಹನುಮಾನ ಮಾಲದಾರಿಗಳು ಶ್ರೀರಂಗಪಟ್ಟಣಕ್ಕೆ ಹೋಗಿ ಪೂಜೆ ಸಲ್ಲಿಸುತ್ತೇವೆ. ಪೂಜೆಗೆ ಅನುಮತಿ ನೀಡುವಂತೆ ಈಗಾಗಲೇ ಡಿಸಿಗೆ ಮನವಿ ಮಾಡಿದ್ದೇವೆ. ಈ ಬಾರಿ ಮಸೀದಿಯಲ್ಲಿ ಪೂಜೆ ಮಾಡಲು ಅವಕಾಶ ನೀಡಬೇಕು. ಪೂಜೆಗೆ ಅವಕಾಶ ನೀಡದಿದ್ದರೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸ್ವತಃ ಟಿಪ್ಪು ಪರ್ಶಿಯಾದ ಖಲೀಫ್ ಗೆ ಬರೆದ ಪತ್ರದಲ್ಲಿ ಹೇಳಿಕೊಂಡಿದ್ದಾರೆ. ಮಸೀದಿ ಆಂಜನೇಯನ ದೇವಾಲಯವಾಗಿತ್ತು ಎಂಬುದಕ್ಕೆ ಇಂದಿಗೂ ಕುರುಹುಗಳಿದ್ದು, ಕಲ್ಯಾಣಿ ಸೇರಿದಂತೆ ಹಿಂದು ದೇವರುಗಳ ಕೆತ್ತನೆ ಕಾಣುತ್ತಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಪುರಾತತ್ವ ಇಲಾಖೆ ದಾಖಲೆಗಳನ್ನು ಪರಿಶೀಲನೆ ಮಾಡಬೇಕು. ಕಾನೂನು ಬದ್ದವಾಗಿ ಆಂಜನೇಯನ ಪೂಜೆಗೆ ಅವಕಾಶ ನೀಡಬೇಕು. ಆಂಜನೇಯನ ಪೂಜೆಗೆ ಅವಕಾಶ ನೀಡದಿದ್ರೆ ಕಾನೂನು ಹೋರಾಟ ಮಾಡುವುದಾಗಿ ಕರ್ನಾಟಕ ನರೇಂದ್ರ ಮೋದಿ ವಿಚಾರ ಮಂಚ್ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ
Image
ಮಸೀದಿಗಳಲ್ಲಿ ಬೆಳಗ್ಗೆ 5 ಗಂಟೆಗೆ ಆಜಾನ್ ಕೂಗದಿರಲು ನಿರ್ಧಾರ: ಸರ್ಕಾರದ ನಿಯಮ ಪಾಲಿಸುವಂತೆ ಮೌಲಾನಾ ಮಕ್ಸೂದ್ ಸೂಚನೆ
Image
ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್​ನ ಬಂಧಿಸಿದ ಪೊಲೀಸ್ ತಂಡಗಳಿಗೆ 5 ಲಕ್ಷ ರೂ. ಬಹುಮಾನ; ಕಮಲ್ ಪಂತ್ ಮಾಹಿತಿ
Image
ವಾರಾಣಸಿಯ ಜ್ಞಾನವಾಪಿ ಮಸೀದಿ ಸಮೀಕ್ಷೆ ಶುರು: ಪೊಲೀಸ್ ಬಿಗಿ ಬಂದೋಬಸ್ತ್​

ರಾಜ್ಯದ ಇನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​
ಡಿಕೆಶಿಗೆ ಸಿಎಂ ಪಟ್ಟ!: ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳ ಮಾತು
ಡಿಕೆಶಿಗೆ ಸಿಎಂ ಪಟ್ಟ!: ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳ ಮಾತು
ಬಂಡೀಪುರದಲ್ಲಿ ಚಲಿಸುವ ಕಾರಿಂದ ಬಿಯರ್ ಕ್ಯಾನ್, ಟಿಶ್ಯೂ ಎಸೆದ ಪ್ರವಾಸಿಗರು
ಬಂಡೀಪುರದಲ್ಲಿ ಚಲಿಸುವ ಕಾರಿಂದ ಬಿಯರ್ ಕ್ಯಾನ್, ಟಿಶ್ಯೂ ಎಸೆದ ಪ್ರವಾಸಿಗರು
ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್
ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್
ಹೀಗೆ ಔಟಾಗಿ, ಹೀಗೊಂದು ದಾಖಲೆ ಬರೆದ ಸಾಯಿ ಸುದರ್ಶನ್
ಹೀಗೆ ಔಟಾಗಿ, ಹೀಗೊಂದು ದಾಖಲೆ ಬರೆದ ಸಾಯಿ ಸುದರ್ಶನ್
ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ವಿಜಯೇಂದ್ರ ಸ್ಫೋಟಕ ಭವಿಷ್ಯ!
ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ವಿಜಯೇಂದ್ರ ಸ್ಫೋಟಕ ಭವಿಷ್ಯ!
ಗುರು ಸಂಚಾರ ಮಕರ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಮಕರ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
Video: ಪವರ್ ಕೇಬಲ್ ಕದಿಯಲು ಹೋಗಿ ಕಳ್ಳನಿಗೆ ಎಂಥಾ ಪರಿಸ್ಥಿತಿ ಬಂತು ನೋಡಿ
Video: ಪವರ್ ಕೇಬಲ್ ಕದಿಯಲು ಹೋಗಿ ಕಳ್ಳನಿಗೆ ಎಂಥಾ ಪರಿಸ್ಥಿತಿ ಬಂತು ನೋಡಿ
ಪತಿಯ ಎದುರೇ ಸಮಂತಾಗೆ ಪ್ರಪೋಸ್ ಮಾಡಿದ ಅಭಿಮಾನಿ; ರಾಜ್ ರಿಯಾಕ್ಷನ್ ಏನು?
ಪತಿಯ ಎದುರೇ ಸಮಂತಾಗೆ ಪ್ರಪೋಸ್ ಮಾಡಿದ ಅಭಿಮಾನಿ; ರಾಜ್ ರಿಯಾಕ್ಷನ್ ಏನು?