AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಜಿಲ್ಲೆಯಲ್ಲಿ ಹಣ್ಣಿನ ಮೇಳ: ಶಿವರಾತ್ರಿ ಹಬ್ಬದ ಸಂತಸ ಹೆಚ್ಚಿಸಿದ ವಿವಿಧ ಉತ್ಪನ್ನಗಳು

ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಆಯೋಜನೆ ಮಾಡಿರುವ ಹಣ್ಣು ಮೇಳಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಇಂದಿನಿಂದ ಮೂರು ದಿನಗಳ ಕಾಲ ಹಣ್ಣು ಮೇಳ ನಡೆಯುತ್ತಿದ್ದು, ಒಂದೇ ಕಡೆ ವಿವಿಧ ತಳಿಯ ಹಣ್ಣುಗಳ ಸಿಗುತ್ತಿರುವುದು ನಿಜಕ್ಕೂ ಗ್ರಾಹಕರಿಗೆ ಖುಷಿ ತಂದಿದೆ.

ಕೊಪ್ಪಳ ಜಿಲ್ಲೆಯಲ್ಲಿ ಹಣ್ಣಿನ ಮೇಳ: ಶಿವರಾತ್ರಿ ಹಬ್ಬದ ಸಂತಸ ಹೆಚ್ಚಿಸಿದ ವಿವಿಧ ಉತ್ಪನ್ನಗಳು
ಕೊಪ್ಪಳದಲ್ಲಿ ಹಣ್ಣಿನ ಮೇಳ
preethi shettigar
| Updated By: guruganesh bhat|

Updated on: Mar 09, 2021 | 8:01 PM

Share

ಕೊಪ್ಪಳ: ಸಾಮಾನ್ಯವಾಗಿ ಹಬ್ಬದ ಸಂದರ್ಭದಲ್ಲಿ ಹಣ್ಣುಗಳಿಗೆ ಹೆಚ್ಚಿನ ಬೇಡಿಕೆ ಇರುತ್ತದೆ. ಇನ್ನೇನು ಶಿವರಾತ್ರಿ ಹಬ್ಬ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊಪ್ಪಳ ತೋಟಗಾರಿಕೆ ಇಲಾಖೆ ವಿವಿಧ ಹಣ್ಣುಗಳ ಮೇಳವನ್ನು ಆಯೋಜಿಸಿದೆ.  ತೋಟಗಾರಿಕೆ ಇಲಾಖೆಯಲ್ಲಿ ಹಮ್ಮಿಕೊಂಡಿರುವ ಈ ಹಣ್ಣುಗಳ ಮೇಳದಲ್ಲಿ ವಿವಿಧ  ಹಣ್ಣುಗಳಿದ್ದು, ಜನರನ್ನು ಆಕರ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಗ್ರಾಹಕರಿಗೆ ಇಲ್ಲಿ ನೇರವಾಗಿ ಹಣ್ಣುಗಳನ್ನ ಮಾರಾಟ ಮಾಡಲಾಗುತ್ತದೆ,  ಜತೆಗೆ ಹಣ್ಣುಗಳ ವಿವಿಧ ಉತ್ಪನ್ನಗಳನ್ನು ಪ್ರದರ್ಶನ ಮಾಡಲಾಗುತ್ತಿದೆ. ಇಂದಿನಿಂದ ಮೂರು ದಿನಗಳ ಕಾಲ ಹಣ್ಣುಗಳ ಮೇಳ ಆಯೋಜನೆ ಮಾಡಲಾಗಿದ್ದು, ಹಣ್ಣುಗಳ ಮೇಳದಲ್ಲಿ ದ್ರಾಕ್ಷಿ, ಅಂಜೂರ್, ಕರಬೂಜ, ಪೇರಲೆ, ಕಲ್ಲಂಗಡಿ, ಬಾಳೆ ಹಾಗೂ ಹಣ್ಣುಗಳ  ವಿವಿಧ ಉತ್ಪನ್ನಗಳು ಗಮನ ಸೆಳೆಯುತ್ತಿವೆ.

ರೈತರೇ ಹಣ್ಣುಗಳನ್ನು ನೇರವಾಗಿ ಮಾರಾಟ ಮಾಡುತ್ತಿದ್ದು, ಜಿಲ್ಲೆಯಲ್ಲಿ ಬೆಳೆದ ಹಣ್ಣುಗಳನ್ನೇ ಮಾರಾಟ ಮಾಡಲಾಗುತ್ತಿದೆ. ಇಗಾಗಲೇ 30  ರೈತರು ಹಣ್ಣು ಮಾರಾಟಕ್ಕೆ ನೋಂದಣಿ ಮಾಡಿಸಿದ್ದು, ಮಧ್ಯವರ್ತಿಗಳೇ ಇಲ್ಲದೆ ರೈತರು ಇಲ್ಲಿ ನೇರವಾಗಿ ಮಾರಾಟ ಮಾಡುತ್ತಿದ್ದಾರೆ. ಇದನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಹೇಳಿದ್ದಾರೆ.

fruits fair

ದ್ರಾಕ್ಷಿ ಹಣ್ಣಿನ ವೈನ್

ಹಣ್ಣುಗಳ ಮೇಳದಲ್ಲಿ ಹತ್ತು ವಿವಿಧ ಹಣ್ಣು ಮಾರಾಟ ಮಾಡಲಾಗುತ್ತಿದ್ದು, ಹಣ್ಣುಗಳಿಂದ ತಯಾರಾದ ಕೆಲ ಉತ್ಪನ್ನಗಳು, ಜೇನು ಉತ್ಪನ್ನ ಮತ್ತು ಪೇರಲೆ ಹಣ್ಣಿನಿಂದ ತಯಾರಾದ ಹತ್ತಕ್ಕೂ ಹೆಚ್ಚು ಉತ್ಪನ್ನಗಳು ಇಲ್ಲಿ ಸಿಗುತ್ತವೆ. ದ್ರಾಕ್ಷಿ ಹಣ್ಣಿನಿಂದ ತಯಾರಾದ ವೈನ್ ಕೂಡ ಇಲ್ಲಿ ಮಾರಾಟಕ್ಕೆ ಇಡಲಾಗಿದೆ.

fruits fair

ವಿವಿಧ ತಳಿಯ ಹಣ್ಣಿನ ಪ್ರದರ್ಶನ

ಇಷ್ಟು ದಿನ ಜಿಲ್ಲೆಯಲ್ಲಿ ಕೇವಲ ಒಂದು ಹಣ್ಣಿನ ಮೇಳ ಆಯೋಜನೆ ಮಾಡಲಾಗುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ ಹತ್ತಕ್ಕೂ ಹೆಚ್ಚು ಹಣ್ಣುಗಳನ್ನು ಒಟ್ಟಿಗೆ ಮಾರಾಟಕ್ಕೆ  ಇಡಲಾಗಿದೆ. ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಹಣ್ಣುಗಳ ಮೇಳ ಆಯೋಜನೆ ಮಾಡಲಾಗಿದ್ದು, ಹಣ್ಣು ಖರೀದಿಗೆ ಬಂದವರು ಕೆಲ ಉತ್ಪನ್ನಗಳ ರುಚಿ ನೋಡುತ್ತಿದ್ದಾರೆ. ಅಲ್ಲದೇ, ಹಣ್ಣುಗಳ ಮೇಳದ ಕುರಿತು ಸ್ಥಳೀಯರು ಸಂತೋಷ ವ್ಯಕ್ತಪಡಿಸಿದ್ದಾರೆ.

fruits fair

ಹಣ್ಣಿನ ಉತ್ಪನ್ನಗಳ ಪರಿಚಯ

ಒಟ್ಟಾರೆ ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಆಯೋಜನೆ ಮಾಡಿರುವ ಹಣ್ಣು ಮೇಳಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಇಂದಿನಿಂದ ಮೂರು ದಿನಗಳ ಕಾಲ ಹಣ್ಣು ಮೇಳ ನಡೆಯುತ್ತಿದ್ದು, ಒಂದೇ ಕಡೆ ವಿವಿಧ ತಳಿಯ ಹಣ್ಣುಗಳ ಸಿಗುತ್ತಿರುವುದು ನಿಜಕ್ಕೂ ಗ್ರಾಹಕರಿಗೆ ಖುಷಿ ತಂದಿದೆ.

fruits fair

ತೋಟಗಾರಿಕೆ ಇಲಾಖೆ ವತಿಯಿಂದ ಹಣ್ಣಿನ ಮೇಳ

fruits fair

ಜನರಲ್ಲಿ ಸಂತಸ ಮೂಡಿಸಿದ ಹಣ್ಣಿನ ಮೇಳ

ಇದನ್ನೂ ಓದಿ: India Toy Fair 2021: ಆಟಿಕೆ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಇದನ್ನೂ ಓದಿ: ಮೈಸೂರಲ್ಲಿ ಗೆಡ್ಡೆ-ಗೆಣಸು ಮೇಳ.. ಪೂರ್ವಜರು ಬಳಸುತ್ತಿದ್ದ ಆಹಾರ ಪದ್ಧತಿಯ ಪರಿಚಯ ಮಾಡಿಕೊಡುವ ಯತ್ನ !

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!