AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಧ್ವನಿ ಎಂದು FSL ವರದಿಯಲ್ಲಿ ಧೃಡ

ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ತಿರುವುದು ಸಿಕ್ಕಿದ್ದು, ಜಾತಿ ನಿಂದನೆ ಮಾಡಿರುವ ಧ್ವನಿ ಮುನಿರತ್ನ ಅವರದ್ದು ಎನ್ನುವುದು ಎಫ್​ಎಸ್​ಎಲ್​ ವರದಿಯಲ್ಲಿ ದೃಢಪಟ್ಟಿದೆ. ಹೀಗಾಗಿ ಮುನಿರತ್ನಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಜಾತಿ ನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಧ್ವನಿ ಎಂದು FSL ವರದಿಯಲ್ಲಿ ಧೃಡ
ಬಿಜೆಪಿ ಶಾಸಕ ಮುನಿರತ್ನ
Shivaprasad B
| Edited By: |

Updated on: Nov 25, 2024 | 9:59 PM

Share

ಬೆಂಗಳೂರು, (ನವೆಂಬರ್ 25):  ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಫ್​ಎಸ್​ಎಲ್​ ವರದಿ ಬಂದಿದ್ದು, ಜಾತಿ ನಿಂದನೆ ಮಾಡಿರುವ ಆಡಿಯೋ ಮುನಿರತ್ನ ಅವರದ್ದೇ ಎಂದು ಎಫ್​ಎಸ್​ಎಲ್​ ವರದಿಯಲ್ಲಿ ದೃಢಪಟ್ಟಿದೆ. ಫೋನ್​ನಲ್ಲಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮುನಿರತ್ನ ವಿರುದ್ಧ ಗುತ್ತಿಗೆದಾರ ವೇಲು ನಾಯ್ಕರ್ ದೂರು ದಾಖಲಿಸಿದ್ದು, ಜೊತೆಗೆ ಅವರು ಪೊಲೀಸರಿಗೆ ನೀಡಿದ್ದ ಆಡಿಯೋ ಕ್ಲಿಪ್​ಅನ್ನು ಎಫ್​ಎಸ್​ಎಲ್​ಗೆ ಕಳುಹಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಆಡಿಯೋದಲ್ಲಿರುವುದು ಮುನಿರತ್ನ ಅವರ ಧ್ವನಿ ಎಂದು ದೃಢವಾಗಿದೆ ಎಂದು ಟಿವಿ9ಗೆ ಸಿಐಡಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಚೆಲುವರಾಜು ಜತೆಗೆ ಮಾತನಾಡುವ ವೇಳೆ ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆಂದು ಗುತ್ತಿಗೆದಾರ ವೇಲು ನಾಯ್ಕರ್ ಅವರು ಮುನಿರತ್ನ ಅವರ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಷ್ಟೇ ಅಲ್ಲದೇ ಮುನಿರತ್ನ ನಿಂದನೆ ಮಾಡಿದ್ದ ಆಡಿಯೋವನ್ನು ಸಹ ಪೊಲೀಸರಿಗೆ ನೀಡಿದ್ದರು. ಈ ದೂರಿನ ಮೇರೆಗೆ ಮುನಿರತ್ನ ವಿರುದ್ಧ ಸೆಪ್ಟೆಂಬರ್ 13 ರಂದು ಎಫ್​ಐಆರ್ ದಾಖಲಾಗಿತ್ತು.

ಇದನ್ನೂ ಓದಿ: ಗುತ್ತಿಗೆದಾರನಿಗೆ ಜೀವ ಬೆದರಿಕೆ: ಮುನಿರತ್ನ ವಿರುದ್ಧ ಎರಡು ಎಫ್ಐಆರ್​​

ಬಳಿಕ ಸೆ.14ರಂದು ಎಸ್​ಐಟಿ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು. ಆ ವೇಳೆ ಪೆನ್ ಡ್ರೈವ್ ಆಡಿಯೋ ಕ್ಲಿಪ್ ಹಾಗೂ ಬಂಧನ ವೇಳೆ ಪಡೆಯಲಾಗಿದ್ದ ಶಾಸಕ ಮುನಿರತ್ನ ವಾಯ್ಸ್ ಸ್ಯಾಂಪಲ್ ಅನ್ನು ಎಫ್​ಎಸ್ಎಲ್​ಗೆ ಕಳುಹಿಸಿದರು. ಈಗ ಎಫ್ಎಸ್​ಎಲ್ ರಿಪೋರ್ಟ್ ಎಸ್ಐಟಿ ಪೊಲೀಸರ ಕೈಸೇರಿದ್ದು, ಮುನಿರತ್ನ ಜಾತಿ ನಿಂದನೆ ಮಾಡಿದ್ದರು ಎನ್ನಲಾದ ಆಡಿಯೋ ಧ್ವನಿ ಧೃಡವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದ್ದು, ಮುನಿರತ್ಮಗೆ ಮತ್ತೆಗೆ ಸಂಕಷ್ಟು ಎದುರಾಗುವುದು ಕಟ್ಟಿಟ್ಟ ಬುತ್ತಿ.

ಈ ಜಾತಿ ನಿಂದನೆ ಪ್ರಕರಣದಲ್ಲಿ ಮುನಿರತ್ನ ಅವರು ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಜೈಲಿನಿಂದ ಆಚೆ ಬಂದಿದ್ದರು. ಬಳಿಕ ಅತ್ಯಾಚಾರ ಪ್ರಕರಣದಲ್ಲೂ ಸಹ ಮತ್ತೆ ಜೈಲು ಸೇರಿದ್ದರು. ಬಳಿಕ ಆ ಪ್ರಕರಣದಲ್ಲೂ ಸಹ ಜಾಮೀನನ ಮೇಲೆ ಬಿಡುಗಡೆಯಾಗಿದ್ದಾರೆ. ಇದೀಗ ಮತ್ತೆ ಜಾತಿ ನಿಂದನೆ ಪ್ರಕರಣ ಮುನಿರತ್ನ ಅವರಿಗೆ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ
ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ