AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಧ್ವನಿ ಎಂದು FSL ವರದಿಯಲ್ಲಿ ಧೃಡ

ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ತಿರುವುದು ಸಿಕ್ಕಿದ್ದು, ಜಾತಿ ನಿಂದನೆ ಮಾಡಿರುವ ಧ್ವನಿ ಮುನಿರತ್ನ ಅವರದ್ದು ಎನ್ನುವುದು ಎಫ್​ಎಸ್​ಎಲ್​ ವರದಿಯಲ್ಲಿ ದೃಢಪಟ್ಟಿದೆ. ಹೀಗಾಗಿ ಮುನಿರತ್ನಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಜಾತಿ ನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಧ್ವನಿ ಎಂದು FSL ವರದಿಯಲ್ಲಿ ಧೃಡ
ಬಿಜೆಪಿ ಶಾಸಕ ಮುನಿರತ್ನ
Shivaprasad B
| Edited By: |

Updated on: Nov 25, 2024 | 9:59 PM

Share

ಬೆಂಗಳೂರು, (ನವೆಂಬರ್ 25):  ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಫ್​ಎಸ್​ಎಲ್​ ವರದಿ ಬಂದಿದ್ದು, ಜಾತಿ ನಿಂದನೆ ಮಾಡಿರುವ ಆಡಿಯೋ ಮುನಿರತ್ನ ಅವರದ್ದೇ ಎಂದು ಎಫ್​ಎಸ್​ಎಲ್​ ವರದಿಯಲ್ಲಿ ದೃಢಪಟ್ಟಿದೆ. ಫೋನ್​ನಲ್ಲಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮುನಿರತ್ನ ವಿರುದ್ಧ ಗುತ್ತಿಗೆದಾರ ವೇಲು ನಾಯ್ಕರ್ ದೂರು ದಾಖಲಿಸಿದ್ದು, ಜೊತೆಗೆ ಅವರು ಪೊಲೀಸರಿಗೆ ನೀಡಿದ್ದ ಆಡಿಯೋ ಕ್ಲಿಪ್​ಅನ್ನು ಎಫ್​ಎಸ್​ಎಲ್​ಗೆ ಕಳುಹಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಆಡಿಯೋದಲ್ಲಿರುವುದು ಮುನಿರತ್ನ ಅವರ ಧ್ವನಿ ಎಂದು ದೃಢವಾಗಿದೆ ಎಂದು ಟಿವಿ9ಗೆ ಸಿಐಡಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಚೆಲುವರಾಜು ಜತೆಗೆ ಮಾತನಾಡುವ ವೇಳೆ ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆಂದು ಗುತ್ತಿಗೆದಾರ ವೇಲು ನಾಯ್ಕರ್ ಅವರು ಮುನಿರತ್ನ ಅವರ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಷ್ಟೇ ಅಲ್ಲದೇ ಮುನಿರತ್ನ ನಿಂದನೆ ಮಾಡಿದ್ದ ಆಡಿಯೋವನ್ನು ಸಹ ಪೊಲೀಸರಿಗೆ ನೀಡಿದ್ದರು. ಈ ದೂರಿನ ಮೇರೆಗೆ ಮುನಿರತ್ನ ವಿರುದ್ಧ ಸೆಪ್ಟೆಂಬರ್ 13 ರಂದು ಎಫ್​ಐಆರ್ ದಾಖಲಾಗಿತ್ತು.

ಇದನ್ನೂ ಓದಿ: ಗುತ್ತಿಗೆದಾರನಿಗೆ ಜೀವ ಬೆದರಿಕೆ: ಮುನಿರತ್ನ ವಿರುದ್ಧ ಎರಡು ಎಫ್ಐಆರ್​​

ಬಳಿಕ ಸೆ.14ರಂದು ಎಸ್​ಐಟಿ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು. ಆ ವೇಳೆ ಪೆನ್ ಡ್ರೈವ್ ಆಡಿಯೋ ಕ್ಲಿಪ್ ಹಾಗೂ ಬಂಧನ ವೇಳೆ ಪಡೆಯಲಾಗಿದ್ದ ಶಾಸಕ ಮುನಿರತ್ನ ವಾಯ್ಸ್ ಸ್ಯಾಂಪಲ್ ಅನ್ನು ಎಫ್​ಎಸ್ಎಲ್​ಗೆ ಕಳುಹಿಸಿದರು. ಈಗ ಎಫ್ಎಸ್​ಎಲ್ ರಿಪೋರ್ಟ್ ಎಸ್ಐಟಿ ಪೊಲೀಸರ ಕೈಸೇರಿದ್ದು, ಮುನಿರತ್ನ ಜಾತಿ ನಿಂದನೆ ಮಾಡಿದ್ದರು ಎನ್ನಲಾದ ಆಡಿಯೋ ಧ್ವನಿ ಧೃಡವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದ್ದು, ಮುನಿರತ್ಮಗೆ ಮತ್ತೆಗೆ ಸಂಕಷ್ಟು ಎದುರಾಗುವುದು ಕಟ್ಟಿಟ್ಟ ಬುತ್ತಿ.

ಈ ಜಾತಿ ನಿಂದನೆ ಪ್ರಕರಣದಲ್ಲಿ ಮುನಿರತ್ನ ಅವರು ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಜೈಲಿನಿಂದ ಆಚೆ ಬಂದಿದ್ದರು. ಬಳಿಕ ಅತ್ಯಾಚಾರ ಪ್ರಕರಣದಲ್ಲೂ ಸಹ ಮತ್ತೆ ಜೈಲು ಸೇರಿದ್ದರು. ಬಳಿಕ ಆ ಪ್ರಕರಣದಲ್ಲೂ ಸಹ ಜಾಮೀನನ ಮೇಲೆ ಬಿಡುಗಡೆಯಾಗಿದ್ದಾರೆ. ಇದೀಗ ಮತ್ತೆ ಜಾತಿ ನಿಂದನೆ ಪ್ರಕರಣ ಮುನಿರತ್ನ ಅವರಿಗೆ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ