AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಧನ ದರ ಏರಿಕೆ ಹಿನ್ನೆಲೆ; ಚಿತ್ರದುರ್ಗದಲ್ಲಿ ಕಾರ್ಮಿಕ ಸಂಘಟನೆಯಿಂದ ಪ್ರತಿಭಟನೆ

ಇಂಧನ ದರ ಏರಿಕೆ ಆಗಿರುವುದರಿಂದ ಚಿತ್ರದುರ್ಗದಲ್ಲಿ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಹಾಗೂ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ಕೈಗೆತ್ತಿಕೊಂಡಿದ್ದಾರೆ.

ಇಂಧನ ದರ ಏರಿಕೆ ಹಿನ್ನೆಲೆ; ಚಿತ್ರದುರ್ಗದಲ್ಲಿ ಕಾರ್ಮಿಕ ಸಂಘಟನೆಯಿಂದ ಪ್ರತಿಭಟನೆ
ಇಂಧನ ದರ ಏರಿಕೆ ಖಂಡಿಸಿ ಪ್ರತಿಭಟನೆ
shruti hegde
|

Updated on: Mar 10, 2021 | 3:34 PM

Share

ಚಿತ್ರದುರ್ಗ: ದಿನೇ ದಿನೇ ಪೆಟ್ರೋಲ್​, ಡೀಸೆಲ್​ ದರ ಏರಿಕೆಯತ್ತ ಸಾಗುತ್ತಿದೆ. ಜೊತೆಗೆ ಗ್ಯಾಸ್​ ದರ ಕೂಡಾ ಒಂದೇ ಸಮನೆ ಏರಿಕೆ ಕಂಡಿದೆ. ಹೀಗಾಗಿ ಬೆಲೆ ಏರಿಕೆಯನ್ನು ಖಂಡಿಸಿ ಕಾರ್ಮಿಕ ಸಂಘಟನೆಯಿಂದ ಪ್ರತಿಭಟನೆ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡುವಂತೆ ಕೇಂದ್ರ ಸರಕಾರಕ್ಕೆ ಆಗ್ರಹ ಮಾಡಲಾಗಿದೆ. ಪ್ರತಿಭಟನೆಗೆ ವಿವಿಧ ಪ್ರಗತಿಪರ ಸಂಘಟನೆ ಮುಖಂಡರು ಸಾಥ್ ನೀಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಇಂಧನ ಏರಿಕೆ ಖಂಡಿಸಿ ಪ್ರತಿಭಟನೆ ಪೆಟ್ರೋಲ್, ಡೀಸೆಲ್ ದರ ಹಾಗೂ ಗ್ಯಾಸ್ ಬೆಲೆ ಏರಿಕೆಗೆ ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರ ಧರಣಿ ಕೈಗೊಂಡಿದ್ದಾರೆ. ಬೈಕ್ ಹಾಗೂ ಕಾರಿಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ಪ್ರತಿಭಟನೆ ಕೈಗೊಳ್ಳಲಾಗಿದೆ.

ತಾಲ್ಲೂಕು ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೆ ಮೆರವಣಿಗೆ ನಡೆಸಿದ್ದಾರೆ. ಬೈಕ್ ಮೇಲೆ ಗ್ಯಾಸ್ ಸಿಲೆಂಡರ್ ಇಟ್ಟುಕೊಂಡು ಮೆರವಣಿಗೆ ನಡೆಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ, ಪೆಟ್ರೋಲ್ ಬೆಲೆ ಏರಿಕೆಯ ಕುರಿತು ಮೈಸೂರಿನಲ್ಲೂ ಆಕ್ರೋಶ ವ್ಯಕ್ತವಾಗಿತ್ತು. ಪೆಟ್ರೋಲ್​ ಬೆಲೆ ಏರಿಕೆ ಸಂಬಂಧಿಸಿ  ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ವಾಹನ ಸವಾರರು ಕಿಡಿಕಾರಿದ್ದರು. ಪೆಟ್ರೋಲ್ ವಾಹನ ಬಿಟ್ಟು ಎಲೆಕ್ಟ್ರಿಕಲ್ ವಾಹನ ಖರೀದಿಸೋಣ ಎಂದರೆ ಅದರ ಬೆಲೆಯನ್ನೂ ಜಾಸ್ತಿ ಮಾಡಿದ್ದಾರೆ. ಅಚ್ಛೆ ದಿನ್, ಅಚ್ಛೆ ದಿನ್ ಅನ್ನೋದು ಇದೇನಾ ಎಂದು ವಾಹನ ಸವಾರರು ಪ್ರಶ್ನೆ ಒಡ್ಡಿದ್ದರು.

ಕಳೆದ ಫೆಬ್ರವರಿ ತಿಂಗಳಲ್ಲಿ ಬೆಳಗಾವಿಯಲ್ಲಿಯೂ ಪ್ರತಿಭಟನೆ ನಡೆಸಲಾಗಿತ್ತು. ಪೆಟ್ರೋಲ್, ಡೀಸೆಲ್ ದರ ಏರಿಕೆ ಬಿಸಿ ಬೆಳಗಾವಿ ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ. ಇಂದಿನ ಪೆಟ್ರೋಲ್ ದರ  ಲೀಟರ್​ಗೆ 91.81 ರೂ ಹಾಗೂ ಡೀಸೆಲ್ ದರ ಲೀಟರ್​ಗೆ 84 ರೂ. ಆಗಿದೆ,  ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡಿಸೇಲ್ ದರ ಇಳಿಸುವುದಾಗಿ ಹೇಳಿ ಇದೀಗ ಏರಿಕೆ ಮಾಡಿದ್ದೀರಿ, ಕೂಡಲೇ ಪೆಟ್ರೋಲ್ ಬೆಲೆ ಕಡಿಮೆ ಮಾಡಿ ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ: ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ ಪ್ರತಿಭಟನೆ: 6 ಗಂಟೆ ಸ್ತಬ್ಧವಾದ ಒಡಿಶಾ!

ಇದನ್ನೂ ಓದಿ: Petrol Price: ದೂರದ ಪ್ರಯಾಣಕ್ಕೆ ಪ್ಲಾನ್​ ಮಾಡಿದ್ದೀರಾ? ಒಮ್ಮೆ ಗಮನಿಸಿ ಪೆಟ್ರೋಲ್​, ಡೀಸೆಲ್ ದರದ ಮಾಹಿತಿ ಇಲ್ಲಿದೆ

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ