AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಇಂದಿನಿಂದ ಪೂರ್ಣಪ್ರಮಾಣದ ತರಗತಿ ಆರಂಭ

ರಾಜ್ಯದಲ್ಲಿ ಇಂದಿನಿಂದ ಪೂರ್ಣಪ್ರಮಾಣದ ತರಗತಿ ಆರಂಭವಾಗುತ್ತಿವೆ. 9ರಿಂದ 12ನೇ ತರಗತಿಯ ಮಕ್ಕಳಿಗೆ ಫುಲ್‌ಟೈಂ ಕ್ಲಾಸ್ ಇಂದಿನಿಂದ ಶುರುವಾಗುತ್ತಿದೆ. ಬೆಳಗ್ಗೆ 10ರಿಂದ ಸಂಜೆ 4.30ರವರೆಗೆ ತರಗತಿ ನಡೆಯಲಿದೆ.

ರಾಜ್ಯದಲ್ಲಿ ಇಂದಿನಿಂದ ಪೂರ್ಣಪ್ರಮಾಣದ ತರಗತಿ ಆರಂಭ
ಸಂಗ್ರಹ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:Feb 01, 2021 | 7:51 AM

Share

ಬೆಂಗಳೂರು: 9 ತಿಂಗಳ ಬಳಿಕ ರಾಜ್ಯದಲ್ಲಿ ಇಂದಿನಿಂದ ಪೂರ್ಣಪ್ರಮಾಣದ ತರಗತಿ ಆರಂಭವಾಗುತ್ತಿವೆ. 9ರಿಂದ 12ನೇ ತರಗತಿಯ ಮಕ್ಕಳಿಗೆ ಫುಲ್‌ಟೈಂ ಕ್ಲಾಸ್ ಇಂದಿನಿಂದ ಶುರುವಾಗುತ್ತಿದೆ. ಬೆಳಗ್ಗೆ 10ರಿಂದ ಸಂಜೆ 4.30ರವರೆಗೆ ತರಗತಿ ನಡೆಯಲಿದೆ.

6ರಿಂದ 8ನೇ ತರಗತಿ ಮಕ್ಕಳಿಗೆ ಎಂದಿನಂತೆ ‘ವಿದ್ಯಾಗಮ’ ಕ್ಲಾಸ್​ಗಳನ್ನು ತೆಗೆದುಕೊಳ್ಳಲಾಗುತ್ತೆ. ವಿದ್ಯಾರ್ಥಿಗಳು ಮಧ್ಯಾಹ್ನ ಊಟ, ನೀರು ಮನೆಯಿಂದಲೇ ತರಬೇಕು. ಮಾಸ್ಕ್ ಧರಿಸುವುದು ಕಡ್ಡಾಯ. ಹಾಗೂ ಮಕ್ಕಳು ಪೋಷಕರಿಂದ ಅನುಮತಿ ಪಡೆದು ಆ ಪತ್ರವನ್ನು ಕಡ್ಡಾಯವಾಗಿ ಶಾಲೆಗೆ ತರಬೇಕು. ಪೋಷಕರು ಒಪ್ಪಿದರೆ ಮಾತ್ರ ಮಕ್ಕಳು ಶಾಲೆಗೆ ಬರಬೇಕು. ಜೊತೆಗೆ ವಿದ್ಯಾರ್ಥಿಗಳು ಕೊವಿಡ್ ನೆಗೆಟಿವ್ ರಿಪೋರ್ಟ್ ತರಬೇಕು ಎಂದು ಸರ್ಕಾರ ಸೂಚಿಸಿದೆ.

ಇಷ್ಟುದಿನ SSLC ಮತ್ತು ದ್ವಿತೀಯ ಪಿಯುಸಿಗೆ ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ತರಗತಿ ನಡೆಯುತ್ತಿದ್ದವು. ಆದ್ರೆ ಇಂದಿನಿಂದ 9 ರಿಂದ 12 ರವರೆಗಿನ ವಿದ್ಯಾರ್ಥಿಗಳಿಗೆ ಬೆಳಗ್ಗಿನಿಂದ ಸಂಜೆವರೆಗೂ ತರಗತಿ ನಡೆಸಲು ಸೂಚನೆ ನೀಡಲಾಗಿದೆ. ಫೆಬ್ರವರಿ 2 ನೇ ವಾರದಲ್ಲಿ ಇನ್ನೊಮ್ಮೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ನಡೆಸಲು ಶಿಕ್ಷಣ ಸಚಿವರು ನಿರ್ಧರಿಸಿದ್ದಾರೆ. ಆ ಸಭೆ ಬಳಿಕ 1 ರಿಂದ 8ನೇ ತರಗತಿಯ ಮಕ್ಕಳಿಗೆ ಶಾಲೆ ಆರಂಭದ ಬಗ್ಗೆ ತೀರ್ಮಾನ ಮಾಡಲಾಗುತ್ತೆ. 1 ರಿಂದ 5ನೇ ತರಗತಿಯ ಮಕ್ಕಳಿಗೆ ಟಿವಿ, ರೇಡಿಯೋ, ಯೂಟ್ಯೂಬ್ ಮೂಲಕ ಬೋಧನೆ ಮುಂದುವರಿಯಲಿದೆ.

ಶಾಲೆ ಪುನರಾರಂಭ ಜನವರಿ 1ಕ್ಕೆ ಫಿಕ್ಸ್; ಯಾವುದೇ ಬದಲಾವಣೆ ಇಲ್ಲ.. ಸಂಪುಟ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ

Published On - 7:19 am, Mon, 1 February 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು