Siddalingaiah Funeral: ಸಕಲ ಸರ್ಕಾರಿ ಗೌರವದೊಂದಿಗೆ ನಡೆದ ಡಾ.ಸಿದ್ದಲಿಂಗಯ್ಯ ಅಂತ್ಯಸಂಸ್ಕಾರ; ಕೊನೆಯ ಫೋಟೊಗಳು ಇಲ್ಲಿವೆ

Edited By: sandhya thejappa

Updated on: Jun 12, 2021 | 3:27 PM

ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯನವರ ಅಂತ್ಯಸಂಸ್ಕಾರ ಜ್ಞಾನಭಾರತಿ ಕ್ಯಾಂಪಸ್ನ ಕಲಾಗ್ರಾಮದಲ್ಲಿ ನಡೆಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆದಿದ್ದು, 3 ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆಯನ್ನು ಸಲ್ಲಿಸಲಾಯಿತು.

1 / 7
ಹಿರಿಯ ಕವಿ, ಸಾಹಿತಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.

ಹಿರಿಯ ಕವಿ, ಸಾಹಿತಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.

2 / 7

ಬೌದ್ಧ ಧರ್ಮದ ಆಚರಣೆಯಂತೆ ಅಂತಿಮ ವಿಧಿವಿಧಾನ ನೆರವೇರಿದ್ದು, ಬೌದ್ಧ ಬಿಕ್ಕುಗಳು ಪಂಚಶೀಲ ತತ್ವಗಳನ್ನು ಬೋಧಿಸಿದರು.

3 / 7

ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆದಿದ್ದು, 3 ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆಯನ್ನು ಸಲ್ಲಿಸಲಾಯಿತು.

4 / 7

ಬೌದ್ಧ ಬಿಕ್ಕುಗಳು ಸಿದ್ದಲಿಂಗಯ್ಯ ಅವರ ಪಾರ್ಥಿವ ಶರೀರದ ಪಕ್ಕದಲ್ಲಿ ಬುದ್ಧನ ವಿಗ್ರಹವಿಟ್ಟು ಅಂತಿಮ ವಿಧಿವಿಧಾನ ಸಲ್ಲಿಸಿದರು. ದಮ್ಮಚಾರಿಯಿಂದ ತ್ರಿಶರಣ ಪಂಚಶೀಲವನ್ನು ಪಠಿಸಲಾಯಿತು.

5 / 7

ಸಿದ್ದಲಿಂಗಯ್ಯ ಪಾರ್ಥಿವ ಶರೀರದ ಮುಂದೆ ನಿಂತು ಪತಿ ಮತ್ತು ತಂದೆಯನ್ನು ನೆನೆದು ಕಣ್ಣೀರಿಡುತ್ತಿರುವ ಪುತ್ರಿ ಮತ್ತು ಪತ್ನಿ.

6 / 7

ತಂದೆ ಡಾ. ಸಿದ್ದಲಿಂಗಯ್ಯನವರ ಅಂತಿಮ ಪೂಜಾ ವಿಧಿ ವಿಧಾನ ನಡೆಸಿ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದ ಪುತ್ರ ಗೌತಮ್

7 / 7

ಜ್ಞಾನಭಾರತಿ ಕ್ಯಾಂಪಸ್​ನ ಕಲಾಗ್ರಾಮದಲ್ಲಿ ಪಂಚಭೂತಗಳಲ್ಲಿ ಲೀನರಾದ ಸಾಹಿತಿ ಡಾ.ಸಿದ್ದಲಿಂಗಯ್ಯ.

Published On - 2:31 pm, Sat, 12 June 21

Loading...
Unable to load recommendations.
Follow Us