G. Parameshwar: ರಾಜ್ಯದಲ್ಲಿರುವ ಎಲ್ಲಾ ಪೊಲೀಸ್​ ಠಾಣೆಗಳನ್ನು ಡಿಜಿಟಲೀಕರಣ ಮಾಡುತ್ತೇವೆ: ಗೃಹ ಸಚಿವ ಡಾ ಜಿ ಪರಮೇಶ್ವರ್

ಸಚಿವ ಡಾ.ಜಿ.ಪರಮೇಶ್ವರ್​​​, ಕನಸಿನ ಕರುನಾಡು ಟಿವಿ9 ಸಮ್ಮಿಟ್​ 2023: ಠಾಣೆಗೆ ಯಾರೇ ಬಂದರೂ ಸಂಯಮದಿಂದ ಮಾತನಾಡುವಂತೆ ಹೇಳಿದ್ದೇವೆ. ದೂರು ನೀಡಲು ಬಂದವರಿಗೆ ಧೈರ್ಯ ತುಂಬಿದರೆ ಅವರು ಖುಷಿಯಾಗುತ್ತಾರೆ. ರಾಜ್ಯದಲ್ಲಿರುವ ಎಲ್ಲಾ ಪೊಲೀಸ್​ ಠಾಣೆಗಳನ್ನು ಡಿಜಿಟಲೀಕರಣ ಮಾಡುತ್ತೇವೆ. ಆ ಮೂಲಕ ಎಲ್ಲೇ ದೂರು ದಾಖಲಾದರೂ ನೋಡಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

G. Parameshwar: ರಾಜ್ಯದಲ್ಲಿರುವ ಎಲ್ಲಾ ಪೊಲೀಸ್​ ಠಾಣೆಗಳನ್ನು ಡಿಜಿಟಲೀಕರಣ ಮಾಡುತ್ತೇವೆ: ಗೃಹ ಸಚಿವ ಡಾ ಜಿ ಪರಮೇಶ್ವರ್
ಸಚಿವ ಡಾ.ಜಿ.ಪರಮೇಶ್ವರ್
Follow us
|

Updated on:Sep 15, 2023 | 8:24 PM

ಬೆಂಗಳೂರು, ಸೆಪ್ಟೆಂಬರ್​ 15: ರಾಜ್ಯದಲ್ಲಿರುವ ಎಲ್ಲಾ ಪೊಲೀಸ್​ ಠಾಣೆಗಳನ್ನು ಡಿಜಿಟಲೀಕರಣ ಮಾಡುತ್ತೇವೆ. ಡಿಜಿಟಲೀಕರಣ ಮಾಡಿದರೆ ಎಲ್ಲೇ ದೂರು ದಾಖಲಾದರೂ ನೋಡಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G. Parameshwar) ಹೇಳಿದ್ದಾರೆ. ಕಾಂಗ್ರೆಸ್​ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು 100 ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಟಿವಿ9 ಕನ್ನಡ ಬೆಂಗಳೂರಿನ ಲಲಿತ್​ ಅಶೋಕ್​​​ ಹೋಟೆಲ್​ನಲ್ಲಿ ಆಯೋಜಿಸಿರುವ ‘ಕನಸಿನ ಕರುನಾಡು’ (TV9 Karnataka Summit 2023) ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದೂರು ನೀಡಲು ಬಂದವರಿಗೆ ಧೈರ್ಯ ತುಂಬಿ

ಪೊಲೀಸ್ ಠಾಣೆಗೆ ಬರುವವರ ಜೊತೆ ಪೊಲೀಸರು ಸೌಜನ್ಯದಿಂದ ವರ್ತಿಸಬೇಕು. ಠಾಣೆಗೆ ಯಾರೇ ಬಂದರೂ ಸಂಯಮದಿಂದ ಮಾತನಾಡುವಂತೆ ಹೇಳಿದ್ದೇವೆ. ದೂರು ನೀಡಲು ಬಂದವರಿಗೆ ಧೈರ್ಯ ತುಂಬಿದರೆ ಅವರು ಖುಷಿಯಾಗುತ್ತಾರೆ ಎಂದರು.

ಇದನ್ನೂ ಓದಿ: TV9 Karnataka Summit 2023; ಕೆಎಸ್​ಆರ್​ಟಿಸಿ ನೌಕರರಿಗೆ ಪಿಂಚಣಿ ನೀಡುವ ವ್ಯವಸ್ಥೆ ಜಾರಿಗೆ ತರುತ್ತೇವೆ: ರಾಮಲಿಂಗಾರೆಡ್ಡಿ

ಎಲ್ಲೋ ಏನೋ ಅಪರಾಧ ನಡೆದರೆ SP ಹೊಣೆ ಮಾಡುವುದು ನಡೆದುಬಂದಿದೆ. ನಾವು ಜವಾಬ್ದಾರಿಯಿಂದ ನುಣುಚಿಕೊಳ್ಳಲು ಅವರನ್ನು ಹೊಣೆ ಮಾಡುತ್ತೇವೆ. ಇನ್ಮುಂದೆ ಇದೆಲ್ಲ ಆಗಬಾರದು ಎಂದರೆ ವ್ಯವಸ್ಥೆಯಲ್ಲಿ ಸುಧಾರಣೆ ಆಗಬೇಕು ಎಂದು ಹೇಳಿದ್ದಾರೆ.

ಶಾಂತಿ ಸುವ್ಯವಸ್ಥೆ ಇರಬೇಕೆಂದರೆ ಪೊಲೀಸರು ಹಗಲಿರುಳು ಕೆಲಸ ಮಾಡಬೇಕು. ಎಸ್​ಪಿ ದರ್ಜೆಗಿಂತ ಮೇಲಿನ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಿದ್ದೇವೆ. ಸರ್ಕಾರದ ದೃಷ್ಟಿಕೋನದ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದರು.

ಕೆಲವರಿಗೆ ನಾವೇ ಪೊಲೀಸ್ ಎಂಬ ಭಾವನೆ

ಮಂಗಳೂರು, ಉಡುಪಿ ಭಾಗದಲ್ಲಿ ಕೆಲವರಿಗೆ ನಾವೇ ಪೊಲೀಸ್ ಎಂಬ ಭಾವನೆ ಇದೆ. ಅಂಥವರ ವಿರುದ್ಧ ಕ್ರಮಕ್ಕಾಗಿ ಆ್ಯಂಟಿ ಕಮ್ಯುನಲ್ ವಿಂಗ್ ಆರಂಭಿಸಿದ್ದೇವೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮಕ್ಕೆ ಹೊಸ ವಿಂಗ್ ಆರಂಭಿಸಿದ್ದೆವು ಎಂದು ತಿಳಿಸಿದರು.

ಇದನ್ನೂ ಓದಿ: Madhu Bangarappa: ಅಧಿಕಾರ ಸ್ವೀಕರಿಸಿದ ಬಳಿಕ ಮೊದಲು ಸಹಿ ಮಾಡಿದ್ದೇ ಪಠ್ಯ ಪರಿಷ್ಕರಣೆಗೆ; ಮಧು ಬಂಗಾರಪ್ಪ

ನಾನು ಮಂಗಳೂರಿಗೆ ಭೇಟಿ ನೀಡಿದಾಗ ದೂರು ನೀಡಿದರು.​ ವಿದ್ಯಾರ್ಥಿಗಳು ಮಂಗಳೂರು ಬಿಟ್ಟು ಬೆಂಗಳೂರಿಗೆ ಹೋಗುತ್ತಿದ್ದಾರೆ. ನಮಗೆ ಹಳೇ ಮಂಗಳೂರು ಬೇಕು ಎಂದು ಜನ ನಮಗೆ ಮನವಿ ಮಾಡಿದ್ದರು ಎಂದು ಹೇಳಿದ್ದಾರೆ.

ಪ್ರತಿನಿತ್ಯ ಒಂದಿಲ್ಲೊಂದು ಕ್ರೈಂ ಅಥವಾ ಬೇರೆ ಬೇರೆ ಘಟನೆಗಳನ್ನು ರಾಜ್ಯದಲ್ಲಿ ನಡೆಯುತ್ತಿರುತ್ತವೆ. ಇಲ್ಲಿಗೆ ನಿಂತು ಹೋಯಿತು ಎಂದು ಹೇಳಲು ಬರಲ್ಲ. ರಾತ್ರಿ ಕಳೆದು ಹಗಲಾಗುವುದರೊಳಗೆ ಮತ್ತೆ ಏನೋ ಆಗಿರುತ್ತದೆ.

ಬೆಂಗಳೂರಿನಲ್ಲಿ ಸರಗಳ್ಳತನ ಪ್ರಕರಣ ಬಹಳ ಕಡಿಮೆಯಾಗಿದೆ

ಬೆಂಗಳೂರಿನಲ್ಲಿ ಸರಗಳ್ಳತನ ಪ್ರಕರಣ ಬಹಳ ಕಡಿಮೆಯಾಗಿದೆ. ರಾಜ್ಯದಲ್ಲಿ ಇತರೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆಸ್ತಿ ವಿವಾದಕ್ಕೆ ಗಲಾಟೆ, ಖಾಸಗಿ ವಿಚಾರಕ್ಕೆ ಕೊಲೆ ಪ್ರಕರಣ ನಡೆದಿದೆ. ಇಂತಹ ಪ್ರಕರಣ ನಡೆದ ನಂತರ ಗೊತ್ತಾಗುತ್ತೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:23 pm, Fri, 15 September 23

Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ