AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi Session: ಹುಕ್ಕಾ ಬಾರ್ ನಿಯಂತ್ರಣಕ್ಕೆ ಶೀಘ್ರ ಕಾನೂನು: ಗೃಹ ಸಚಿವ ಜಿ ಪರಮೇಶ್ವರ

ಹುಕ್ಕಾ ಬಾರ್​ಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಜಯನಗರ ಶಾಸಕ ರಾಮಮೂರ್ತಿ ಗಮನ ಸೆಳೆದಿದ್ದಾರೆ. ನಂತರ ಪರಮೇಶ್ವರ ಅವರು ಉತ್ತರ ನೀಡಿ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹುಕ್ಕಾ ಬಾರ್‌ಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ವಿಶೇಷ ಕಾನೂನು ರೂಪಿಸಲಿದೆ ಎಂದು ಹೇಳಿದ್ದಾರೆ.

Belagavi Session: ಹುಕ್ಕಾ ಬಾರ್ ನಿಯಂತ್ರಣಕ್ಕೆ ಶೀಘ್ರ ಕಾನೂನು: ಗೃಹ ಸಚಿವ ಜಿ ಪರಮೇಶ್ವರ
ಜಿ ಪರಮೇಶ್ವರ
TV9 Web
| Updated By: Ganapathi Sharma|

Updated on: Dec 13, 2023 | 8:35 AM

Share

ಬೆಳಗಾವಿ, ಡಿಸೆಂಬರ್ 13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಹುಕ್ಕಾ ಬಾರ್‌ಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ವಿಶೇಷ ಕಾನೂನು ರೂಪಿಸಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ (G Parameshwara) ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ಹುಕ್ಕಾ ಬಾರ್‌ಗಳು ಜನರ ಮೇಲೆ ಅದರಲ್ಲೂ ವಿಶೇಷವಾಗಿ ಯುವಕರ ಮೇಲೆ ಪರಿಣಾಮ ಬೀರುತ್ತಿವೆ. ಆದರೆ ಅವರ ಬಗ್ಗೆ ಏನೂ ಮಾಡಲು ಸಾಧ್ಯವಾಗಿಲ್ಲ ಎಂದು ಒಪ್ಪಿಕೊಂಡಿದ್ದಾರೆ.

‘ಹುಕ್ಕಾ ಬಾರ್ ನಡೆಸಲು ಪರವಾನಗಿ ನೀಡುವ ಅಧಿಕಾರ ಬಿಬಿಎಂಪಿಗೆ ಇಲ್ಲ. ನಾವು ಮೊದಲೇ ಅವರನ್ನು ನಿಯಂತ್ರಿಸಲು ಪ್ರಯತ್ನಿಸಿದ್ದೇವೆ, ಆದರೆ ಸಾಧ್ಯವಾಗಲಿಲ್ಲ. ಆಹಾರ ಸುರಕ್ಷತಾ ಇಲಾಖೆಯು ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ನ್ಯಾಯಾಲಯದ ಆದೇಶವು ಹುಕ್ಕಾ ಬಾರ್‌ಗಳಿಗೆ ಯಾವುದೇ ಪರವಾನಗಿ ಅಗತ್ಯವಿಲ್ಲ ಎಂದು ಹೇಳುತ್ತದೆ. ನ್ಯಾಯಾಲಯಗಳ ಪ್ರಕಾರ, ನಿರ್ವಾಹಕರು ತಮ್ಮ ಆವರಣದಲ್ಲಿ ಹುಕ್ಕಾವನ್ನು ಬಳಸಬಹುದಾದ ಪ್ರತ್ಯೇಕ ಕೋಣೆಗಳನ್ನು ಹೊಂದಿರಬೇಕು’ ಎಂದು ಅವರು ಹೇಳಿದ್ದಾರೆ.

ಹುಕ್ಕಾ ಬಾರ್​ಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಜಯನಗರ ಶಾಸಕ ರಾಮಮೂರ್ತಿ ಗಮನ ಸೆಳೆದಿದ್ದಾರೆ. ನಂತರ ಪರಮೇಶ್ವರ ಅವರು ಉತ್ತರ ನೀಡಿದ್ದಾರೆ.

‘ಬಿಬಿಎಂಪಿ ವ್ಯಾಪ್ತಿಯಲ್ಲಿ ಹುಕ್ಕಾ ಬಾರ್​ಗಳು ನಾಯಿಕೊಡೆಗಳಂತೆ ಹುಟ್ಟಿಕೊಳ್ಳುತ್ತಿವೆ. ಅವರಿಗೆ ಲೈಸೆನ್ಸ್ ಯಾರು ಕೊಟ್ಟಿದ್ದಾರೆ, ಹೇಗೆ ಪಡೆದರು ಎಂಬುದು ನಮಗೆ ಅರ್ಥವಾಗುತ್ತಿಲ್ಲ’ ಎಂದು ರಾಮಮೂರ್ತಿ ಹೇಳಿದ್ದಾರೆ. ಜತೆಗೆ, ಇತ್ತೀಚೆಗೆ ಹುಕ್ಕಾ ಬಾರ್‌ನಲ್ಲಿ ಸಿಲಿಂಡರ್ ಸ್ಫೋಟಗೊಂಡ ಘಟನೆಯನ್ನು ಅವರು ಪ್ರಸ್ತಾಪಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮಂಗಳೂರು ರೈಲು ಸಂಚಾರ ಡಿಸೆಂಬರ್ 14ರಿಂದ ಒಂದು ವಾರ ರದ್ದು: ಇಲ್ಲಿದೆ ವಿವರ

ಅಗ್ನಿ ಅವಘಡದ ಬಗ್ಗೆ ಮಾಹಿತಿ ಇದೆ ಎಂದ ಪರಮೇಶ್ವರ, ಇಂತಹ ಘಟನೆಗಳನ್ನು ತಡೆಯಲು ಸರ್ಕಾರ ಕಾನೂನು ತರಲಿದೆ ಎಂದಿದ್ದಾರೆ. ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್‌ಕುಮಾರ್‌ ಕೂಡ ಚರ್ಚೆಗೆ ಧ್ವನಿಗೂಡಿಸಿ, ನಗರದಲ್ಲಿ ಹುಕ್ಕಾ ಬಾರ್‌ಗಳು ಮಾರಕವಾಗುತ್ತಿವೆ. ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು ಮತ್ತು ಗುಜರಾತ್ ಸೇರಿದಂತೆ ಹತ್ತು ರಾಜ್ಯಗಳು ಹುಕ್ಕಾ ಬಾರ್‌ಗಳನ್ನು ನಿಷೇಧಿಸಿವೆ. ನಮ್ಮಲ್ಲೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು