Belagavi Session: ಹುಕ್ಕಾ ಬಾರ್ ನಿಯಂತ್ರಣಕ್ಕೆ ಶೀಘ್ರ ಕಾನೂನು: ಗೃಹ ಸಚಿವ ಜಿ ಪರಮೇಶ್ವರ

ಹುಕ್ಕಾ ಬಾರ್​ಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಜಯನಗರ ಶಾಸಕ ರಾಮಮೂರ್ತಿ ಗಮನ ಸೆಳೆದಿದ್ದಾರೆ. ನಂತರ ಪರಮೇಶ್ವರ ಅವರು ಉತ್ತರ ನೀಡಿ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹುಕ್ಕಾ ಬಾರ್‌ಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ವಿಶೇಷ ಕಾನೂನು ರೂಪಿಸಲಿದೆ ಎಂದು ಹೇಳಿದ್ದಾರೆ.

Belagavi Session: ಹುಕ್ಕಾ ಬಾರ್ ನಿಯಂತ್ರಣಕ್ಕೆ ಶೀಘ್ರ ಕಾನೂನು: ಗೃಹ ಸಚಿವ ಜಿ ಪರಮೇಶ್ವರ
ಜಿ ಪರಮೇಶ್ವರ
Edited By:

Updated on: Dec 13, 2023 | 8:35 AM

ಬೆಳಗಾವಿ, ಡಿಸೆಂಬರ್ 13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಹುಕ್ಕಾ ಬಾರ್‌ಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ವಿಶೇಷ ಕಾನೂನು ರೂಪಿಸಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ (G Parameshwara) ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ಹುಕ್ಕಾ ಬಾರ್‌ಗಳು ಜನರ ಮೇಲೆ ಅದರಲ್ಲೂ ವಿಶೇಷವಾಗಿ ಯುವಕರ ಮೇಲೆ ಪರಿಣಾಮ ಬೀರುತ್ತಿವೆ. ಆದರೆ ಅವರ ಬಗ್ಗೆ ಏನೂ ಮಾಡಲು ಸಾಧ್ಯವಾಗಿಲ್ಲ ಎಂದು ಒಪ್ಪಿಕೊಂಡಿದ್ದಾರೆ.

‘ಹುಕ್ಕಾ ಬಾರ್ ನಡೆಸಲು ಪರವಾನಗಿ ನೀಡುವ ಅಧಿಕಾರ ಬಿಬಿಎಂಪಿಗೆ ಇಲ್ಲ. ನಾವು ಮೊದಲೇ ಅವರನ್ನು ನಿಯಂತ್ರಿಸಲು ಪ್ರಯತ್ನಿಸಿದ್ದೇವೆ, ಆದರೆ ಸಾಧ್ಯವಾಗಲಿಲ್ಲ. ಆಹಾರ ಸುರಕ್ಷತಾ ಇಲಾಖೆಯು ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ನ್ಯಾಯಾಲಯದ ಆದೇಶವು ಹುಕ್ಕಾ ಬಾರ್‌ಗಳಿಗೆ ಯಾವುದೇ ಪರವಾನಗಿ ಅಗತ್ಯವಿಲ್ಲ ಎಂದು ಹೇಳುತ್ತದೆ. ನ್ಯಾಯಾಲಯಗಳ ಪ್ರಕಾರ, ನಿರ್ವಾಹಕರು ತಮ್ಮ ಆವರಣದಲ್ಲಿ ಹುಕ್ಕಾವನ್ನು ಬಳಸಬಹುದಾದ ಪ್ರತ್ಯೇಕ ಕೋಣೆಗಳನ್ನು ಹೊಂದಿರಬೇಕು’ ಎಂದು ಅವರು ಹೇಳಿದ್ದಾರೆ.

ಹುಕ್ಕಾ ಬಾರ್​ಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಜಯನಗರ ಶಾಸಕ ರಾಮಮೂರ್ತಿ ಗಮನ ಸೆಳೆದಿದ್ದಾರೆ. ನಂತರ ಪರಮೇಶ್ವರ ಅವರು ಉತ್ತರ ನೀಡಿದ್ದಾರೆ.

‘ಬಿಬಿಎಂಪಿ ವ್ಯಾಪ್ತಿಯಲ್ಲಿ ಹುಕ್ಕಾ ಬಾರ್​ಗಳು ನಾಯಿಕೊಡೆಗಳಂತೆ ಹುಟ್ಟಿಕೊಳ್ಳುತ್ತಿವೆ. ಅವರಿಗೆ ಲೈಸೆನ್ಸ್ ಯಾರು ಕೊಟ್ಟಿದ್ದಾರೆ, ಹೇಗೆ ಪಡೆದರು ಎಂಬುದು ನಮಗೆ ಅರ್ಥವಾಗುತ್ತಿಲ್ಲ’ ಎಂದು ರಾಮಮೂರ್ತಿ ಹೇಳಿದ್ದಾರೆ. ಜತೆಗೆ, ಇತ್ತೀಚೆಗೆ ಹುಕ್ಕಾ ಬಾರ್‌ನಲ್ಲಿ ಸಿಲಿಂಡರ್ ಸ್ಫೋಟಗೊಂಡ ಘಟನೆಯನ್ನು ಅವರು ಪ್ರಸ್ತಾಪಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮಂಗಳೂರು ರೈಲು ಸಂಚಾರ ಡಿಸೆಂಬರ್ 14ರಿಂದ ಒಂದು ವಾರ ರದ್ದು: ಇಲ್ಲಿದೆ ವಿವರ

ಅಗ್ನಿ ಅವಘಡದ ಬಗ್ಗೆ ಮಾಹಿತಿ ಇದೆ ಎಂದ ಪರಮೇಶ್ವರ, ಇಂತಹ ಘಟನೆಗಳನ್ನು ತಡೆಯಲು ಸರ್ಕಾರ ಕಾನೂನು ತರಲಿದೆ ಎಂದಿದ್ದಾರೆ. ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್‌ಕುಮಾರ್‌ ಕೂಡ ಚರ್ಚೆಗೆ ಧ್ವನಿಗೂಡಿಸಿ, ನಗರದಲ್ಲಿ ಹುಕ್ಕಾ ಬಾರ್‌ಗಳು ಮಾರಕವಾಗುತ್ತಿವೆ. ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು ಮತ್ತು ಗುಜರಾತ್ ಸೇರಿದಂತೆ ಹತ್ತು ರಾಜ್ಯಗಳು ಹುಕ್ಕಾ ಬಾರ್‌ಗಳನ್ನು ನಿಷೇಧಿಸಿವೆ. ನಮ್ಮಲ್ಲೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Web contact

TV9 Kannada

Read More
Follow Us