AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನ ಆಡಳಿತ ವಿಶ್ವಕ್ಕೇ ಮಾದರಿ ಎಂದ ಜಿ ಪರಮೇಶ್ವರ: ಸಿಎಂ ಬೆನ್ನಲ್ಲೇ ಗೃಹ ಸಚಿವರಿಂದ ರಾಮ ಮಂದಿರ ಪರ ಹೇಳಿಕೆ

ರಾಮ ಮಂದಿರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ ಗೃಹ ಸಚಿವರಿಂದ ಈ ಹೇಳಿಕೆ ಮೂಡಿಬಂದಿದೆ. ಪರಮೇಶ್ವರ ಹೇಳಿಕೆಯನ್ನು ಸ್ವಾಗತಿಸಿರುವ ಬಿಜೆಪಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ, ಕೊನೆಗೂ ಕಾಂಗ್ರೆಸ್ ರಾಮನ ಮಹತ್ವವನ್ನು ಅರ್ಥ ಮಾಡಿಕೊಂಡಂತಿದೆ ಎಂದಿದ್ದಾರೆ.

ರಾಮನ ಆಡಳಿತ ವಿಶ್ವಕ್ಕೇ ಮಾದರಿ ಎಂದ ಜಿ ಪರಮೇಶ್ವರ: ಸಿಎಂ ಬೆನ್ನಲ್ಲೇ ಗೃಹ ಸಚಿವರಿಂದ ರಾಮ ಮಂದಿರ ಪರ ಹೇಳಿಕೆ
ಜಿ ಪರಮೇಶ್ವರ
Follow us
Ganapathi Sharma
|

Updated on: Jan 02, 2024 | 7:15 AM

ಬೆಂಗಳೂರು, ಜನವರಿ 2: ಭಗವಾನ್ ರಾಮನ ಆಡಳಿತ ಕೇವಲ ಬಿಜೆಪಿ ನಾಯಕರಿಗೆ ಸಂಬಂಧಿಸಿದ್ದಲ್ಲ. ಅದು ವಿಶ್ವಕ್ಕೇ ಮಾದರಿ ಎಂದು ಗೃಹ ಸಚಿವ ಜಿ ಪರಮೇಶ್ವರ (G Parameshwara) ಹೇಳಿದ್ದಾರೆ. ನಮ್ಮ ಸರ್ಕಾರ ಮತ್ತು ಪಕ್ಷ ರಾಮ ಮಂದಿರದ ಪರವಾಗಿದೆ. ರಾಮ ಮಂದಿರಕ್ಕೆ (Ram Mandir) ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ ಗೃಹ ಸಚಿವರಿಂದ ಈ ಹೇಳಿಕೆ ಮೂಡಿಬಂದಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ರಾಮರಾಜ್ಯದ ಪರಿಕಲ್ಪನೆಯು ಸಮಾನತೆ ಮತ್ತು ಸಮಾನ ಅವಕಾಶಗಳನ್ನು ಅರ್ಥೈಸುತ್ತದೆ. ಇದು ನಮ್ಮ ಸಂವಿಧಾನದ ಆಧಾರವೂ ಆಗಿದೆ ಎಂದು ಹೇಳಿದ್ದಾರೆ.

ನಮ್ಮ ದೇಶದಲ್ಲಿ ಸಂವಿಧಾನವನ್ನು ರೂಪಿಸಲು ಬಯಸಿದಾಗ, ಅದಕ್ಕೆ ರಾಮರಾಜ್ಯ ಮಾದರಿಯ ಸಾರವನ್ನು ತೆಗೆದುಕೊಂಡಿದ್ದರು. ಹಾಗಾಗಿ, ರಾಮರಾಜ್ಯ ಮಾದರಿಯು ಬಿಜೆಪಿ ಅಥವಾ ಸ್ಥಳೀಯ ಮಟ್ಟಕ್ಕೆ ಮಾತ್ರ ಸೀಮಿತವಾಗಿಲ್ಲ. ಅದು ಜಾಗತಿಕ ಮಾದರಿಯಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಪರಮೇಶ್ವರ ಹೇಳಿದ್ದಾರೆ.

ಆದರೆ, ರಾಮ ಮಂದಿರ ವಿಚಾರದಲ್ಲಿ ಪಕ್ಷದ ನಿಲುವು ಏನು ಎಂಬುದು ನನಗೆ ತಿಳಿದಿಲ್ಲ ಎಂದು ಪರಮೇಶ್ವರ ಹೇಳಿದ್ದಾರೆ. ನಾನು ಪಕ್ಷದ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಪಕ್ಷವು ಭಾಗವಹಿಸಲು ನಿರ್ಧರಿಸಿದರೆ ನಾವು ಖಂಡಿತವಾಗಿಯೂ ಹೋಗುತ್ತೇವೆ. ನಾವೇಕೆ ಹೋಗಬಾರದು, ಶ್ರೀರಾಮ ಕೇವಲ ಬಿಜೆಪಿಯ ದೇವರಲ್ಲ, ಎಲ್ಲರಿಗೂ ಪೂಜ್ಯ ಎಂದು ಅವರು ಹೇಳಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್‌ನಲ್ಲೂ ಹಿಂದೂಗಳಿದ್ದಾರೆ. ಬಿಜೆಪಿಯಲ್ಲಿರುವವರನ್ನು ಹಿಂದೂಗಳು ಮತ್ತು ಇತರ ಪಕ್ಷಗಳಲ್ಲಿರುವವರನ್ನು ಹಿಂದೂಗಳಲ್ಲದವರು ಎಂದು ವರ್ಗೀಕರಿಸುವುದು ತಪ್ಪು. ಭಾರತದ ಬಹುಪಾಲು ಜನಸಂಖ್ಯೆ ಹಿಂದೂಗಳು. ಇದು ಎಲ್ಲಾ ಪಕ್ಷಗಳಲ್ಲಿ ಪ್ರತಿಫಲಿಸುತ್ತದೆ. ಆದ್ದರಿಂದ, ಶ್ರೀರಾಮನು ಎಲ್ಲರಿಗೂ ಸೇರಿದವನು ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾವು ಅಯೋಧ್ಯೆ ರಾಮ ಮಂದಿರದ ಪರ: ಸಿಎಂ ಸಿದ್ದರಾಮಯ್ಯ ಹೀಗೆನ್ನಲು ಕಾರಣವಿದೆ!

ಈ ಮಧ್ಯೆ, ಪರಮೇಶ್ವರ ಹೇಳಿಕೆಯನ್ನು ಸ್ವಾಗತಿಸಿರುವ ಬಿಜೆಪಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ, ಕೊನೆಗೂ ಕಾಂಗ್ರೆಸ್ ರಾಮನ ಮಹತ್ವವನ್ನು ಅರ್ಥ ಮಾಡಿಕೊಂಡಂತಿದೆ. ಕಾಂಗ್ರೆಸ್ ನಾಯಕರ ಮನ ಪರಿವರ್ತನೆಯನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್